ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

31.07.23 - ಸಾಸಿವೆ - ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ.

ಮೊದಲನೇ ವಾಚನ: ವಿಮೋಚನಾಕಾಂಡ 32:15-24, 30-34


ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು. ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದವು. ಅವುಗಳಲ್ಲಿ ಬರೆದದ್ದು ದೇವರು ಕೆತ್ತಿದ್ದ ಅಕ್ಷರಗಳೇ ಆಗಿದ್ದವು. ಇತ್ತ ಇಸ್ರಯೇಲರು ಕೇಕೆ ಹಾಕುತ್ತಾ ಕೂಗಾಡುತ್ತಿದ್ದುದನ್ನು ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಕಾಳಗದ ಧ್ವನಿ ಕೇಳಿಸುತ್ತಿದೆ,” ಎಂದು ಹೇಳಿದನು. ಅದಕ್ಕೆ ಮೋಶೆ: “ನನಗೆ ಕೇಳಿಸುವುದು ವಿಜಯಗೀತೆಯಲ್ಲ ಅದು ಅಪಜಯದ ಶೋಕಗೀತೆಯೂ ಅಲ್ಲ ಕೇಳಿಸುತ್ತಿದೆ ನನಗೆ ಸಂಗೀತಶ್ಲೋಕ” ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು. ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿ ಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು. ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು, “ಒಡೆಯಾ, ಕೋಪಗೊಳ್ಳಬೇಡಿ. ಈ ಜನರು ಎಂಥ ಹಟಮಾರಿಗಳೆಂದು ನೀವೇ ಬಲ್ಲಿರಿ. ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು. ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆ ಏನಾದನೋ ಗೊತ್ತಿಲ್ಲ’, ಎಂದರು. ಅದಕ್ಕೆ ನಾನು, ‘ಯಾರಲ್ಲಿ ಚಿನ್ನದ ಒಡವೆ ಇದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು,’ ಎಂದೆ, ಅವರು ಹಾಗೆಯೇ ಕೊಟ್ಟರು. ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರು ಹೊರಗೆ ಬಂತು,” ಎಂದನು. ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು. ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು, ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು. ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ. ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು. ಅದಕ್ಕೆ ಸರ್ವೇಶ್ವರ, “ಯಾರ್ಯಾರು ನನ್ನ ಮಾತನ್ನು ವಿೂರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನಲ್ಲಿರುವ ಪಟ್ಟಿಯಿಂದ ಅಳಿಸಿ ಬಿಡುತ್ತೇನೆ. ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.” ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.

ಕೀರ್ತನೆ: 106:19-23
ಶ್ಲೋಕ: ಪ್ರಭು ದಯಾಪೂರಿತ, ತೋರಿ ಅತನಿಗೆ ನಿಮ್ಮ ಕೃತಜ್ಞತಾ ಸ್ತ್ರೋತ.

ಹೋರೇಬಿನಲಿ ಮಾಡಿದರು ಬಸವನನು
ಆರಾಧಿಸಿದರು ಆ ಎರಕದ ಶಿಲೆಯನು
ಈಪರಿ ತೊರೆದುಬಿಟ್ಟರು ತಮ್ಮ ಮಹಿಮಾ ದೇವರನು
ಆರಿಸಿಕೊಂಡರು ಹುಲ್ಲುತಿನ್ನುವ ಬಸವನ ವಿಗ್ರಹವನು.

ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು
ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು.
ಹಾಮನಾಡಿನಲಿ ಮಾಡಿದ ಅದ್ಭುತಗಳನು
ಕೆಂಗಡಬಳಿ ನಡೆದ ಘೋರ ಕೃತ್ಯಗಳನು.

ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು
ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು
ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು.

ಶುಭಸಂದೇಶ: ಮತ್ತಾಯ 13:31-35




ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡುಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ. ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಿಸುತ್ತವೆ." ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: "ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು." ಸಾಮತಿಗಳ ಸುರಿಮಳೆಯೇಕೆ? ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು" ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.

No comments:

Post a Comment