04.11.23
03.11.23 - "ಸಬ್ಬತ್ ದಿನ ಗುಣಪಡಿಸುವುದು ಸರಿಯೋ ತಪ್ಪೋ? "
ಆ ಕಾಲದಲ್ಲಿ ಸಬ್ಬತ್ ದಿನ. ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು. "ಸಬ್ಬತ್ ದಿನ ಗುಣಪಡಿಸುವುದು ಸರಿಯೋ ತಪ್ಪೋ? " ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು. ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈ ಹಿಡಿದು ಗುಣಪಡಿಸಿ ಕಳಿಸಿಬಿಟ್ಟರು. ಅನಂತರ, " ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್ ದಿನವಾಗಿದ್ದರೂ ನೀವು ತಡ ಮಾಡದೆ ಮೇಲಕ್ಕೆ ಎತ್ತುವುದಿಲ್ಲವೇ? " ಎಂದು ಕೇಳಿದರು. ಅದಕ್ಕೂ ಅವರು ನಿರುತ್ತರರಾದರು.
02.11.23
ಮೊದಲನೇ ವಾಚನ: ಜ್ಞಾನಗ್ರಂಥ 3:1-9
"ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಆರಸನು ತನ್ನ ಬಲಗಡೆಯಿರುವ ಜನರಿಗೆ, "ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ, ಲೋಕಾದಿಯಿಂದ ನಿಮಗಾಗಿ ಸಿದ್ಧ ಮಾಡಿದ ಸಾಮ್ರಾಜ್ಯವನ್ನು ಸ್ವಾಸ್ಥ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆ ಇಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ," ಎಂದು ಹೇಳುವನು. ಅದಕ್ಕೆ ಆ ಸಜ್ಜನರು "ಸ್ವಾಮಿಾ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?" ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, "ಈ ನನ್ನ ಸಹೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ," ಎನ್ನುವನು. "ಆನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, "ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ," ಎಂದು ಹೇಳುವನು. ಅದಕ್ಕೆ ಅವರು ಕೂಡ, "ಸ್ವಾಮಿಾ, ತಾವು ಯಾವಾಗ ಹಸಿದಿದ್ದೀರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಬಂಧಿಯಾಗಿದ್ದಿರಿ, ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, "ಇವರಲ್ಲ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆ ಹೋದಾಗ ಅದನ್ನು ನನಗೇ ಮಾಡಲಿಲ್ಲ," ಎನ್ನುವನು. "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು," ಎಂದು ಹೇಳಿದರು ಸ್ವಾಮಿ.
01.11.23
ಮೊದಲನೇ ವಾಚನ: ಪ್ರಕಟಣಾ ಗ್ರಂಥ 7:2-4, 9-14
ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ. ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.
ಜಗವು ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||
ಪಭುವಿನ ಶಿಖರವನು ಏರಬಲ್ಲವನಾರು|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು||
ಅಂಥವನಿರಬೇಕು ಶುದ್ದ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||
ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಪಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||
31.10.23 - "ದೇವರ ಸಾಮ್ರಾಜ್ಯವು ಒಂದು ಸಾಸಿವೆಕಾಳಿನಂತೆ ಇದೆ".
ಮೊದಲನೇ ವಾಚನ: ರೋಮನರಿಗೆ 8:18-25
ಸಹೋದರರೇ, ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ. ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿ ಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ ಆಯಿತು. ಆದರು ಸೃಷ್ಟಿಗೆ ನಿರೀಕ್ಷೆಯೊಂದಿದೆ. ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ. ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ. ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೆ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ. ನಾವು ಜೀವೋದ್ಧಾರ ಹೊಂದಿದವರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆಯೆನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? ಪ್ರತ್ಯಕ್ಷವಾಗದೆ ಇರುವುದನ್ನು ನಾವು ನಿರೀಕ್ಷಿಸುವವರಾಗಿದ್ದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.
ಆಗ ಯೇಸುಸ್ವಾಮಿ, "ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆ ಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು," ಎಂದರು. ಪನಃ ಯೇಸುಸ್ವಾಮಿ, "ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ? ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು," ಎಂದರು.
30.10.23
29.10.23 - ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ
ಮೊದಲನೇ ವಾಚನ: ವಿಮೋಚನಕಾಂಡ 22:20-26
ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ? ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು. ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ. ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು. “ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು. “ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡು. ಏಕೆಂದರೆ ಅವನಿಗುರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಳಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು!
ಕೀರ್ತನೆ: 18:2-3, 3-4, 47, 51
ಶ್ಲೋಕ: ಪ್ರಭುವೇ, ನನಗಿದೆ ನಿನ್ನಲ್ಲೇ ಒಲವು.
ಎರಡನೇ ವಾಚನ: 1 ಥೆಸೆಲೋನಿಯರಿಗೆ 1:5-10
ಸಹೋದರರೇ, ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ. ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ. ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ. ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ. ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ; ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.
ಶುಭಸಂದೇಶ: ಮತ್ತಾಯ 22:34-40
ಯೇಸುಸ್ವಾಮಿ ಸದ್ದುಕಾಯರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು. ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?” ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’ ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ. ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’ ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು
28.10.23 - "ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು"
ಮೊದಲನೇ ವಾಚನ: ಎಫೆಸಿಯರಿಗೆ 2:19-22
ಸಹೋದರರೇ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ. ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು. ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.
ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ.
ಶುಭಸಂದೇಶ: ಲೂಕ 6:12-16
ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು. ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.
27.10.23 - "ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು"
ಮೊದಲನೇ ವಾಚನ: ರೋಮನರಿಗೆ 7:18-25
25.10.23 - "ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು."
ಸಹೋದರರೇ, ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ. ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನೆಗಳನ್ನಾಗಿ ದೇವರಿಗೆ ಒಪ್ಪಿಸಿಕೊಂಡಿರಿ. ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು. ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೇ ಜೀವಿಸೋಣವೆ? ಸರ್ವಥಾ ಇಲ್ಲ. ಯಾರ ಕೈ ಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ. ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ; ಪಾಪಬಂಧನದಿಂದ ಬಿಡುಗಡೆ ಹೊಂದಿ ದೇವಸಂಬಂಧಕ್ಕೆ ಒಳಗಾದಿರಿ.
26.10.23 - "ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ"
ದುರ್ಜನರ ಆಲೋಚನೆಯಂತೆ ನಡೆಯದೆ|
ಪಾಪಾತ್ಮರ ಪಥದಲಿ ಕಾಲೂರದೆ|
ಧರ್ಮನಿಂದಕರ ಕೂಟದಲಿ ಕೂರದೆ|
ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವನಾರೋ ಅವನೇ ಧನ್ಯನು|
ಹಗಲಿರುಳೆನ್ನದೆ ಅದನೇ ಧ್ಯಾನಿಸುತ್ತಿರುವವನಾರೋ ಅವನೇ ಧನ್ಯನು||
ನದಿಯ ಬದಿಯಲೇ ಬೆಳೆದಿಹ ಮರದಂತೆ|
ಸಕಾಲಕೆ ಫಲವೀವ ವೃಕ್ಷದಂತೆ||
ಎಲೆಬಾಡದೆ ಪಸಿರಿರುವ ತರುವಂತೆ|
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ||
ದುರಳರಾದರೋ ತೂರಿ ಹೋಗುವರು|
ಬಿರುಗಾಳಿಗೆ ತರಗೆಲೆಯಾಗುವರು||
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ|
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ||
24.10.23 - "ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ"
ಬಯಸಿಲ್ಲ ನೀ ಹೋಮವನೆ, ಪರಿಹಾರಿಕ ಬಲಿಯನೆ|
ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ||
ನಾನೋಗೊಡುತ ಇಂತೆಂದೆ, " ಇಗೋ ನಾನೇ ಬರುತ್ತಿರುವೆ|
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ?||
ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ|
ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ||
ನಿನ್ನನ್ನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ|
ನಿನ್ನ ರಕ್ಷಣಾಪ್ರಿಯರು ಸತತ ' ಪ್ರಭು ಪರಾಕ್ರಮಿ ' ಎನ್ನಲಿ||
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ. ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧವಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದಿರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು, ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು."
23.10.23 - 'ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ದಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?'
ಮೊದಲನೆಯ ವಾಚನ : ಪೌಲನು ರೋಮನರಿಗೆ ಬರೆದ ಪತ್ರದಿಂದ ವಾಚನ 4:20-24
ಸಹೋದರರೇ, ದೇವರ ವಾಗ್ದಾನದಲ್ಲಿ ಅಬ್ರಹಾಮನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು. ದೇವರು ತಾವು ವಾಗ್ದಾನಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು. ಆದ್ದರಿಂದಲೇ, " ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು, " ಎಂದು ಲಿಖಿತವಾಗಿದೆ. ' ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು' ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ. ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ. ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.
- ಪ್ರಭುವಿನ ವಾಕ್ಯ
ಕೀರ್ತನೆ: ಲೂಕ 1:69-75.V.68
ಶ್ಲೋಕ:
ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ |
1. ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು|
ನಮಗೊಬ್ಬ ಶಕ್ತಿಯುತ ಮುಕ್ತಿದಾತನನು||
ಪುರಾತನ ಕಾಲದಿಂದಲೇ, ಪೂಜ್ಯ ಪ್ರವಾದಿಗಳ ಬಾಯಿಂದಲೇ|
ಅರುಹಿಸಿರುವನು
ಇಂತೆಂದು ನಮಗೆ||
2. ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ|
ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ||
ವ್ಯಕ್ತಪಡಿಸಿರುವನು
ಪೂರ್ವಜರಿಗೆ
ಪ್ರಮಾಣಿಸಿದ
ಪ್ರೀತಿಯನು|
ಸ್ಮರಿಸಿಕೊಂಡಿರುವನು
ತನ್ನ ಪವಿತ್ರ ಒಡಂಬಡಿಕೆಯನು||
3. ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ|
ನಮಗಿತ್ತಿರುವದು
ಶತ್ರುಗಳಿಂದ
ರಕ್ಷಿಸುವೆನೆಂಬ
ಅಭಯ||
ಘೋಷಣೆ:
ಲೂಕ 8:15
ಅಲ್ಲೆಲೂಯ, ಅಲ್ಲೆಲೂಯ!
ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು | ಸಹನೆಯಿಂದ ಫಲತರುವವರು ಧನ್ಯರು ||
ಅಲ್ಲೆಲೂಯ!
ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 12:13-21
ಆ ಕಾಲದಲ್ಲಿ ಜನಸಮೂಹದಿಂದ ಒಬ್ಬನು, "ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿ ಕೊಡುವಂತೆ ನನ್ನ ಸೋದರನಿಗೆ ಹೇಳಿ, " ಎಂದು ಕೇಳಿಕೊಂಡನು. ಅದಕ್ಕೆ ಯೇಸು, " ಏನಯ್ಯಾ, ನಿಮ್ಮಿಬ್ಬರ ನ್ಯಾಯ ತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು. ಯಾರು? " ಎಂದು ಮರುಪ್ರಶ್ನೆ ಹಾಕಿದರು. ಅನಂತರ ಜನರನ್ನುದ್ದೇಶಿಸಿ, "ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ, " ಎಂದು ಹೇಳಿದರು. ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: " ಒಬ್ಬ ಧನಿಕನಿದ್ದ, ಅವನ ಭೂಮಿ ಒಮ್ಮೆ ಸಮೃದ್ದಿಯಾದ ಬೆಳೆಕೊಟ್ಟಿತು. ಆಗ ಅವನು, 'ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ ? 'ಎಂದು ತನ್ನಲ್ಲೇ ಆಲೋಚಿಸುತ್ತಾ, ' ಹೌದು, ಹೀಗೆ ಮಾಡುತ್ತೇನೆ : ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನು ಸರಕು ಸಾಮಾಗ್ರಿಗಳನ್ನೂ ತುಂಬಿಸಿಡುತ್ತೇನೆ. ಅಲ್ಲದೆ, "ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ; ಆರಾಮವಾಗಿರು. ತಿನ್ನು, ಕುಡಿ, ಸುಖಪಡು " ಎಂದು ಹೇಳಿಕೊಳ್ಳುತ್ತೇನೆ, ' ಎಂದುಕೊಂಡ. ಆಗ ದೇವರು, 'ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ದಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು? ' ಎಂದರು. ತನಗೋಸ್ಕರ ಸಂಪತ್ತನ್ನು ಶೇಖರಿಸಿಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು, " ಎಂದರು ಯೇಸು.
-ಪ್ರಭುಕ್ರಿಸ್ತರ ಶುಭಸಂದೇಶ
22.10.23 - "ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ"
ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 45:1, 4-6
ಕೀರ್ತನೆ: 96:1, 3, 4-5, 7-8, 9-10
ಶ್ಲೋಕ: ಶಕ್ತಿಸಾಮರ್ಥ್ಯ ಪ್ರಭುವಿನದೆ ಎಂದು ಜಗದ ರಾಷ್ಟ್ರಗಳು ಘಣಪಡಿಸಲಿ
ಎರಡನೇ ವಾಚನ: 1 ಥೆಸೆಲೋನಿಯರಿಗೆ 1:1-5
ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ! ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ. ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು. ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.
ಶುಭಸಂದೇಶ: ಮತ್ತಾಯ 22:15-21
ಫರಿಸಾಯರು ಒಟ್ಟುಗೂಡಿ ಯೇಸುವನ್ನು ಹೇಗೆ ಮಾತಿನಲ್ಲಿ ಸಿಕ್ಕಿಸುವುದೆಂದು ಸಮಾಲೋಚನೆ ಮಾಡಿಕೊಂಡರು. ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ. ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು. ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ? ತೆರಿಗೆಗೆಂದು ಕೊಡಬೇಕಾದ ನಾಣ್ಯವನ್ನು ತೋರಿಸಿ,” ಎಂದರು. ಅವರೊಂದು ನಾಣ್ಯವನ್ನು ತಂದುಕೊಟ್ಟರು. ಆಗ ಯೇಸು, “ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು. ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.
21.10.23
20.10.23 - " ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ."
ಆ ಕಾಲದಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, " ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ. ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು, ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು. ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು, ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು. ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ : ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ : ಸತ್ತ ಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿ ಹೇಳುತ್ತೇನೆ. ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ಅಷ್ಟು ಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ, ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು, " ಎಂದರು.
19.10.23 - "ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ"
ಮೊದಲನೇ ವಾಚನ: ರೋಮನರಿಗೆ 3:21-30
18.10.23
ಆ ಕಾಲದಲ್ಲಿ ಯೇಸು ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, " ಬೆಳೆಯೇನೋ ಹೇರಳವಾಗಿದೆ, ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ' ಮನೆಗೆ ಶಾಂತಿ, ' ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ' ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ, ' ಎಂದು ತಿಳಿಸಿರಿ.
18.10.23 - ಸಂತ ಸ್ಮರಣೆ - ಸಂತ ಲೂಕ - St. Luke
ಹೊಸ ಒಡಂಬಡಿಕೆಯ ಬಹುದೊಡ್ಡ ಭಾಗವನ್ನು ಬರೆದವನು ಸಂತ ಲೂಕ. "ನಮ್ಮ ಪ್ರಿಯ ವೈದ್ಯನಾದ ಲೂಕ ಎಂಬ ಸಂತ ಪೌಲನ ಮಾತಿನ ಮೂಲಕ ಲೂಕನ ಪರಿಚಯವಾಗುತ್ತದೆ.
(ಕೊಲೊಸ್ಸೆ 04:14). ಲೂಕ ಗ್ರೀಕ್ ಮೂಲದವ, ಅನ್ಯಮತಸ್ಥನಾಗಿದ್ದ ಎನ್ನಲಾಗಿದೆ. ಅಂತಿಯೋಕ್ಯ ಅವನ ಜನ್ಮಸ್ಥಳ ಎಂದೂ ಹೇಳಲಾಗಿದೆ. ಸಂತ ಪೌಲ ತನ್ನ ಎರಡನೇ ಧರ್ಮಪ್ರಸಾರ ಪ್ರಯಾಣದಲ್ಲಿ ಅನಾರೋಗ್ಯದ ಸಂದರ್ಭದಲ್ಲಿ ಈ ವೈದ್ಯನನ್ನು ಬೇಟಿಯಾದ. ಈ ಬೇಟಿಯ ನಂತರ ಲೂಕನನ್ನು 51ರಲ್ಲಿ ಟ್ರೊವಾಸ್ ಎಂಬ ಸ್ಥಳದಲ್ಲಿ ಕ್ರೈಸ್ತಧರ್ಮಕ್ಕೆ ಮಾನಸಾಂತ ರಿಸಿದ ಎಂಬ ನಂಬಿಕೆಯಿದೆ.
ಪ್ರೇಷಿತರ ಕಾರ್ಯಕಲಾಪಗಳಲ್ಲಿ ಉಲ್ಲೇಖವಾಗಿರುವ ಪೌಲನ ಎರಡನೇ ಧರ್ಮಪ್ರಸಾರ ಪ್ರಯಾಣದಲ್ಲಿ ಲೂಕನು ಅವನನ್ನು ಭೇಟಿಯಾಗಿ ಅವರೊಂದಿಗೆ ಫಿಲಿಪ್ಪಿಯಲ್ಲಿ ಕೆಲವು ವರ್ಷ ಇರುತ್ತಾನೆ. ಪೌಲ ಮೂರನೇ ಧರ್ಮಪ್ರಸಾರ ಪ್ರಯಾಣ ಆರಂಭಿಸಿದಾಗ ಅವರೊಂದಿಗೆ ಜೆರುಸಲೇಮಿಗೆ ಬಂದು ಸೆಜರೀಯದಲ್ಲಿ ಪೌಲ್ ಬಂಧನ ಕ್ಕೊಳಗಾದಾಗ ಅವನೊಂದಿಗೆ ಇರುತ್ತಾನೆ. ಈ ಎರಡು ವರ್ಷಗಳ ಕಾಲದಲ್ಲಿ, ಯೇಸುವನ್ನು ಕಂಡಿದ್ದ, ಅವರೊಂದಿಗೆ ಒಡನಾಡಿದ್ದ ಜನರನ್ನು ಕಂಡು, ಅವರನ್ನು ಸಂದರ್ಶಿಸಿ ಏಸುವಿನ ಬಗ್ಗೆ ಸಾಕಷ್ಟು ಮಾಹಿತಿ ಕಲೆಹಾಕಿರಬೇಕು. ಪೌಲ್ ರೋಮ್ ಗೆ ಬೆಳೆಸಿದ ಅಪಾಯಕಾರಿ ಪ್ರಯಾಣದಲ್ಲೂ ಲೂಕ ಅವನೊಂದಿಗೆ ಇರುತ್ತಾನೆ. ಕ್ರಿ.ಶ. 61 ರಲ್ಲಿ ಪೌಲ ರೋಮ್ನಲ್ಲಿ ಬಂಧಿತನಾದಾಗಲೂ ಎಲ್ಲರೂ ಪೌಲನನ್ನು ತೊರೆದಾಗ ಲೂಕ ಮಾತ್ರ ಅವನನ್ನು ಬಿಟ್ಟು ಹೋಗುವುದಿಲ್ಲ. "ಲೂಕ ಮಾತ್ರ ನನ್ನ ಜೊತೆಯಿದ್ದಾನೆ ಎಂದು ಪೌಲನೇ ಹೇಳುತ್ತಾನೆ" ಎಂದು ಪೌಲನೇ ಹೇಳುತ್ತಾನೆ. (2ತಿಮೋಥಿ4:11).
ಲೂಕ ಅನ್ಯಮತಸ್ಥನಾಗಿದ್ದರಿಂದಲೋ ಏನೋ ಅನ್ಯಜನರೊಂದಿಗೆ ದುಡಿದು ಪೌಲನನ್ನು ಸೇರಿಕೊಂಡಿರಬೇಕು. ತನ್ನ ಶುಭಸಂದೇಶವನ್ನು ಅನ್ಯಜನರಿಗೆ ಗ್ರೀಕ್ ಭಾಷೆಯಲ್ಲಿ ಉತ್ತಮ ಶೈಲಿ ಮತ್ತು ನಾಜೂಕಾದ ರೀತಿಯಲ್ಲಿ ಬರೆಯುತ್ತಾರೆ. ಈತ ಪೌಲನಿಂದ ಎಷ್ಟು ಪ್ರಭಾವಗೊಂಡಿದ್ದ ಎಂದರೆ ಸಂತ ಜೆರೋಂ ಮತ್ತು ಜಾನ್ ಕ್ರಿಸಾಸ್ಟಮ್ ಲೂಕನ ಶುಭ ಸಂದೇಶವನ್ನು 'ಸಂತ ಪೌಲರ ಶುಭ ಸಂದೇಶ' ಎಂದು ಕರೆಯುತ್ತಾರೆ.
ಲೂಕ ಶುಭ ಸಂದೇಶ ಬರೆಯುವಷ್ಟರಲ್ಲಿ ಮತ್ತಾಯ ಮತ್ತು ಮಾರ್ಕನ ಶುಭಸಂದೇಶ ಈಗಾಗಲೇ ಚಾಲ್ತಿಯಲ್ಲಿತ್ತು. ಹಲವು ಜನರ ಅನುಭವ, ಮಾತೆ ಮೇರಿಯದೇ ಅನುಭವ ಈ ಶುಭಸಂದೇಶದಲ್ಲಿದೆ ಎನ್ನಲಾಗಿದೆ. ಸಂತ ಲೂಕ ಮಾತೆ ಮೇರಿಯ ಭಾವಚಿತ್ರ ಚಿತ್ರಸಿದ್ದ ಎಂಬ ಪ್ರತೀತಿಯೂ ಇದೆ. ಲೂಕನ ಈ ವಿಶಿಷ್ಟ ಬರವಣಿಗೆ ಮತ್ತು ಅನುಭವವನ್ನು ಅವನ ಶುಭಸಂದೇಶದಲ್ಲಿಯೇ ಕಾಣಬಹುದು.
ಲೂಕನ ಶುಭ ಸಂದೇಶದಲ್ಲಿ ಹೆಚ್ಚುವರಿಯಾಗಿ ಆರು ಪವಾಡಗಳು ಮತ್ತು 15 ಸಾಮತಿಗಳ ಉಲ್ಲೇಖವಿದೆ. ಬಡವರು ಮತ್ತು ಸಾಮಾಜಿಕ ಕಾಳಜಿ ಯಿರುವ ಲೂಕನಲ್ಲಿ ಲಾಜರ್ ಮತ್ತು ಶ್ರೀಮಂತನ ಕಥೆ ಬರುತ್ತದೆ. ದೇವ ಮಾತೆಯ ಸಾಮಾಜಿಕ ನ್ಯಾಯದ 'ಸ್ತುತಿಗೀತೆ' ಬರುತ್ತದೆ. ಲೂಕ ಮಹಿಳೆಯರ ಬಗ್ಗೆ ವಿಶೇಷ ಕಾಳಜಿ ಇದ್ದುದ್ದರಿಂದ ಮಾತೆಮೇರಿ,ಎಲಿಜಬೆತ್
ಇವರ ಉಲ್ಲೇಖವಿದೆ. 'ನಮೋ ಮರಿಯಾ ವರಪ್ರಸಾದ ಪೂರ್ಣೆ' ಎಂಬ ಘೋಷಣೆ ಇದೆ. ದೇವರ ಕ್ಷಮೆ ಮತ್ತು ಪ್ರೀತಿಯ ಬಗ್ಗೆ ಲೂಕನದು ಅಪಾರ ನಂಬಿಕೆ. ಇಲ್ಲಿ ದುಂದುಗಾರ ಮಗನ ಬಗ್ಗೆ ಬರುತ್ತದೆ. ಸಿಮೋನ್ ಮನೆಯಲ್ಲಿ ಯೇಸುವಿನ ಪಾದ ಅಂಭ್ಯಂಜಿಸಿದ ಮಹಿಳೆಯ ಬಗ್ಗೆ ಬರೆಯುತ್ತಾರೆ.
ಲೂಕನ ಮರಣದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇಲ್ಲ. ಪೌಲನು ಸಾವಿನ ನಂತರ ಲೂಕ ಏನು ಮಾಡಿದ, ಎಲ್ಲಿದ್ದ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಕೆಲವು ಬರಹಗಾರರು, ಲೂಕ ಕೂಡ ರಕ್ತಸಾಕ್ಷಿಯಾದ ಎಂದರೆ, ಇನ್ನೂ ಕೆಲವರು ಆತ ಗ್ರೀಸ್ ನಲ್ಲಿ ಗಾ ಪ್ರದೇಶದಲ್ಲಿ ಬೋಧಿಸಿದ ಎನ್ನುತ್ತಾರೆ. ಮೊದಲ ಪರಂಪರೆಯ ಪ್ರಕಾರ ಲೂಕ ಗ್ರೀಸ್ ನಲ್ಲಿದ್ದು ತನ್ನ ಶುಭಸಂದೇಶ ಬರೆದ ನಂತರ 84ರಲ್ಲಿ ತೀರಿಕೊಂಡ. ಇನ್ನೊಂದು ಪರಂಪರೆಯ ಪ್ರಕಾರ ಲೂಕ ಡಾಲ್ ಮೇಷಿಯಾದಲ್ಲಿ (ಯುಗೋಸ್ಲಾವಿಯಾ) ಬೋಧನೆ ಮಾಡಿದ ನಂತರ ಗ್ರೀಸ್ನಲ್ಲಿ ರಕ್ತ ಸಾಕ್ಷಿಯಾದ. ಅವನ ಅವಶೇಷಗಳನ್ನು 360ರಲ್ಲಿ ಕಾನ್ಸ್ಟಾಂಟಿನೋಪಲ್ ಗೆ ತರಲಾಯಿತು.
ಲೂಕನ ಚಿತ್ರ ಒಂದು ಎತ್ತು ಮತ್ತು ಕರುವಿನ ಜೊತೆಗೂಡಿ ಇರುತ್ತದೆ. ಕ್ರಿಸ್ತ ಬಲಿಯರ್ಪಣೆಯಾದ ಸಂಕೇತವಿದು. ಲೂಕ ವೈದ್ಯರುಗಳ ಪಾಲಕ.
17.10.23
ಮೊದಲನೇ ವಾಚನ: ರೋಮನರಿಗೆ 1:16-25
16.10.23 - "ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ"
ಮೊದಲನೇ ವಾಚನ: ರೋಮನರಿಗೆ 1:1-7
ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು|
ಎಸಗಿಹನಾತನು ಪವಾಡ ಕಾರ್ಯಗಳನು|
ಗಳಿಸಿತಾತನ ಕೈ ಪೂತಭುಜ ಗೆಲುವನು||
ಪ್ರಕಟಿಸಿಹನು ಪ್ರಭು ತನ್ನ ಮುಕ್ತಿ ವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕ ಶಕ್ತಿಯನು||
ಸ್ಮರಿಸಿಕೊಂಡನು ಪ್ರಭು ತನ್ನ ಪ್ರೀತಿಯನು|
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||
ನಮ್ಮ ದೇವ ಸಾಧಿಸಿದ ಜಯಗಳಿಕೆ||
ಭೂನಿವಾಸಿಗಳೇ, ಮಾಡಿರಿ ಸುಮಧುರ ಭಜನೆ|
ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: "ಈ ಪೀಳಿಗೆ ಕೆಟ್ಟ ಪೀಳಿಗೆ, ಇದು ಅದ್ಬುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.