ಮೊದಲನೇ ವಾಚನ: ಯೊವೇಲ 1:13-15; 2:1-2

ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧ್ಯಾನಪಾನ ನ್ಯೆವೇದ್ಯಗಳು ನಿಂತುಹೋಗಿವೆ. ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ. ಸರ್ವೇಶ್ವರಸ್ವಾಮಿಯ ದಿನ ಸಮಿಾಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು! ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ, ಸರ್ವೇಶ್ವರಸ್ವಾಮಿಯ ದಿನ ಬರಲಿದೆ, ಸನ್ನಿತವಾಗಿದೆ. ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡ ಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬಬರುವಂತಿಲ್ಲ.
ಕೀರ್ತನೆ: 9:2-3, 6, 16, 8-9
ಶ್ಲೋಕ: ಪ್ರಭು ಜನಕೆ ನ್ಯಾಯತೀರಿಸುವನು ನೀತಿಗನುಸಾರ
ಶುಭಸಂದೇಶ: ಲೂಕ 11:15-26
ಜನರಲ್ಲಿ ಕೆಲವರು, "ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ," ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಬುತ ಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು. ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು, ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು. ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ. ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸುಸಜ್ಜಿತನಾಗಿ ತನ್ನ ಮನೆಗೆ ಕಾವಲಿರಿಸುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ. ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ. ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಕರಿಸದವನು ಚದುರಿಸುತ್ತಾನೆ," ಎಂದರು. ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, "ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, "ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ" ಎಂದುಕೊಳ್ಳುತ್ತದೆ. ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕಟವಾಗಿರುವುದನ್ನೂ ಕಾಣುತ್ತದೆ. ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತದೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ," ಎಂದರು.
No comments:
Post a Comment