14.10.23 - "ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!"

 ಮೊದಲನೇ ವಾಚನ: ಯೊವೇಲ 3:12-21 


ಸರ್ವೇಶ್ವರ ಇಂತೆನ್ನುತ್ತಾರೆ: "ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯ ತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು. ಸ್ವಾಮಿಯ ಶೂರರೇ. ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮಿಾರಿದೆ. ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ! ಸೂರ್ಯಚಂದ್ರಗಳು ಮಂಕಾಗುತ್ತವೆ. ನಕ್ಷತ್ರಗಳು ಕಾಂತಿಗುಂದುತ್ತವೆ. ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ. ಇಸ್ರಯೇಲರೇ, ಕೇಳಿ, ಪವಿತ್ರ ಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು. ಆ ದಿನಗಳಲ್ಲಿ ಬೆಟ್ಟಗುಟ್ಟಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು.  ದೇವಾಲಯದಿಂದ ನೀರು ಚಿಮ್ಮಿ ಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು. ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ದಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ. ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು. ಆದರೆ ಜುದೇಯನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು." 

ಕೀರ್ತನೆ: 87:1-2, 5-6, 11-12 
ಶ್ಲೋಕ: ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ 

ಶುಭಸಂದೇಶ: ಲೂಕ 11:27-28 



ಯೇಸುಸ್ವಾಮಿ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, "ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!" ಎಂದು ಕೂಗಿ ಹೇಳಿದಳು. ಅದಕ್ಕೆ ಯೇಸು, "ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!" ಎಂದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...