ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

24.10.23 - "ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ"

ಮೊದಲನೇ ವಾಚನ: ರೋಮನರಿಗೆ 5:12, 15, 17-19, 20-21

ಸಹೋದರರೇ, ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪ ಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥ ವರಗಳು ಇನ್ನೂ ಅಧಿಕಾಧಿಕವಾದುವು ಎಂಬುದು ನಿಜ. ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ. ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ. ಹೇಗೆ ಒಬ್ಬ ಮನುಷ್ಯನ  ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು  ಹೊಂದುತ್ತಾರೆ. ಅಪರಾಧಗಳು ಹೆಚ್ಚಿದಂತೆ ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು. ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರ ಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.

ಕೀರ್ತನೆ: 40: 7-8, 8-9, 10, 17
ಶ್ಲೋಕ: ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ

ಬೇಡವಾದವು ನಿನಗೆ ಯಜ್ಞಾರ್ಪಣೆ ಬಲಿಕಾಣಿಕೆ|
ಬಯಸಿಲ್ಲ ನೀ ಹೋಮವನೆ, ಪರಿಹಾರಿಕ ಬಲಿಯನೆ|
ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ||

ನಾನೋಗೊಡುತ ಇಂತೆಂದೆ, " ಇಗೋ ನಾನೇ ಬರುತ್ತಿರುವೆ|
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ?||

ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ|
ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ||

ನಿನ್ನನ್ನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ|
ನಿನ್ನ ರಕ್ಷಣಾಪ್ರಿಯರು ಸತತ ' ಪ್ರಭು ಪರಾಕ್ರಮಿ ' ಎನ್ನಲಿ||

ಶುಭಸಂದೇಶ: ಲೂಕ 12:35-38


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ. ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧವಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದಿರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು, ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು."

No comments:

Post a Comment