ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

10.01.24 - ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು


 
ಮೊದಲನೆಯ ವಾಚನ - ಸಮುವೇಲನ  ಮೊದಲನೆಯ  ಗ್ರಂಥ - 3:1-10, 19-20

Uploading: 570921 of 570921 bytes uploaded.

ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳ ಆಗಿದ್ದವು;  ದೇವದರ್ಶನಗಳು ಅಪರೂಪವಾಗಿ  ಬಿಟ್ಟಿದ್ದವು. ಏಲಿಯ ಕಣ್ಣುಗಳು ದಿನದಿನಕ್ಕೂ ಮೊಬ್ಬಾಗುತ್ತಾ ಬಂದು  ಕುರುಡನಂಥಾಗಿ ಬಿಟ್ಟಿದ್ದನು.  ಒಂದು ರಾತ್ರಿ ಅವನು ತನ್ನ ಕೋಣೆಯಲ್ಲಿ ಮಲಗಿದ್ದನು.  ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು. ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು ಇಗೋ ಬಂದೆ ಎಂದು ಉತ್ತರಕೊಟ್ಟು, ಒಡನೆ ಏಲಿಯ ಬಳಿಗೆ ಹೋಗಿ, ಇಗೋ ಬಂದಿದ್ದೇನೆ;  ನೀವು ನನ್ನನ್ನು ಕರೆದಿರಲ್ಲವೇ? ಎಂದನು. ಏಲಿ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಎಂದನು. ಸಮುವೇಲನು ಹೋಗಿ ಮಲಗಿದನು. ಸರ್ವೇಶ್ವರ ಪುನಃ ಸಮುವೇಲನೇ ಎಂದು ಕರೆದರು.  ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ? ಎಂದನು.  ಅವನು, ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ, ಎಂದನು. ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ.  ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ. ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ, ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು.  ಅವನು ಸಮುವೇಲನಿಗೆ, ಹೋಗಿ ಮಲಗಿಕೋ;  ಮತ್ತೆ ಅವರು ನಿನ್ನನ್ನು ಕರೆದರೆ, 'ಸರ್ವೇಶ್ವರಾ ಅಪ್ಪಣೆಯಾಗಲಿ;  ತಮ್ಮ ದಾಸ ಕಾದಿದ್ದಾನೆ,' ಎಂದು ಹೇಳು, ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು. ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, ಸಮುವೆಲನೇ, ಸಮುವೇಲನೇ, ಎಂದರು.  ಸಮುವೇಲನು, ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ, ಎಂದನು.  ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೇ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಯೇಲರಿಗೆ ತಿಳಿಯಿತು.

ಪ್ರಭುವಿನ  ವಾಕ್ಯ

ಕೀರ್ತನೆ 40:1, 4, 6-9

ಶ್ಲೋಕ:  ಪ್ರಭೂ, ನಿನ್ನ  ಚಿತ್ತಾನುಸಾರ  ನಡೆವುದೇ ನನಗೆ  ಪರಮಾವೇಶ


1. ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು
ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು
ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು
ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು. ಶ್ಲೋಕ

2.  ಬೇಡವಾದವು ನಿನಗೆ ಯಜ್ಞಾರ್ಪಣೆಬಲಿಕಾಣಿಕೆ
ಬಯಸಿಲ್ಲ ನೀ ಹೋಮವನೆಪರಿಹಾರಕ ಬಲಿಯನೆ
ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆಶ್ಲೋಕ
 
3.  ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ?
ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ
ನನ್ನಂತರಂಗದಲಿದೆ ದೇವಾನಿನ್ನ ಧರ್ಮೋಪದೇಶ”. ಶ್ಲೋಕ
 
4.  ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ
ನಾ ಸಾರಿದೆ ಅದನು ಮೌನವಿರದೆಇದು ಗೊತ್ತಿದೆ ಪ್ರಭು ನಿನಗೆಶ್ಲೋಕ


ಘೋಷಣೆ : ಕೀರ್ತನೆ 111: 07-08

ಅಲ್ಲೆಲೂಯ, ಅಲ್ಲೆಲೂಯ!
ನೀತಿ ಸತ್ಯತೆ ಯುಳ್ಳವು ಆತನ ಸತ್ಕಾರ್ಯಗಳು
ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು
ಯುಗಯುಗಾಂತರಕ್ಕು ದೃಢವಾಗಿರುವುವು
ಅಲ್ಲೆಲೂಯ!

ಶುಭಸಂದೇಶ ವಾಚನ : ಮಾರ್ಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:29-39


ಆ ಕಾಲದಲ್ಲಿ ಯೇಸು ಪ್ರಾರ್ಥನಾ ಮಂದಿರದಿಂದ ಹೊರಟು ಯಾಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಮತ್ತು ಅಂದ್ರೇಯನ ಮನೆಗೆ ಹೋದರು. ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು. ಆಕೆ ಅವರೆಲ್ಲರನ್ನು ಸತ್ಕರಿಸಿದಳು. ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನು ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು. ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು. ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು, ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ. ಮುಂಜಾನೆ ಬೆಳಕು ಹರಿಯುವ ಮುನ್ನ ಯೇಸು ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದರು. ಇತ್ತ, ಸಿಮೋನನು ಅವನ ಜೊತೆಗಾರರು ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ, ಎಂದು ತಿಳಿಸಿದರು. ಅದಕ್ಕೆ ಯೇಸು, ಅಕ್ಕಪಕ್ಕದ ಊರುಗಳಿಗೆ ಹೋಗೋಣ. ಅಲ್ಲೂ ನಾನು ಶುಭಸಂದೇಶ ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ, ಎಂದರು. ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.

- ಪ್ರಭುವಿನ  ಶುಭಸಂದೇಶ

No comments:

Post a Comment