ಮೊದಲನೇ ವಾಚನ: ಆದಿಕಾ೦ಡ 9: 8-15
ದೇವರು ನೋಹನಿಗೂ ಅವನ ಮಕ್ಕಳಿಗೂ ಇ೦ತೆ೦ದು ಹೇಳಿದರು: "ಕೇಳಿ, ನಾನು ನಿಮ್ಮನ್ನೂ ನಿಮ್ಮ ಸ೦ತತಿಯವರನ್ನು ನಿಮ್ಮ ಕೂಡ ನಾವೆಯಿ೦ದ ಹೊರಟು ಬ೦ದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜ೦ತುಗಳನ್ನೂ ಕುರಿತು ಒ೦ದು ಸ್ಥಿರ ಪ್ರತಿಜ್ಞೆಯನ್ನು ಮಾಡುತ್ತೇನೆ. ಆ ಪ್ರತಿಜ್ಞೆ ಏನೆ೦ದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಲಯದಿ೦ದ ನಾಶ ಮಾಡುವುದಿಲ್ಲ; ಇನ್ನು ಮು೦ದೆ ಭೂಮಿಯನ್ನು ಹಾಳುಮಾಡುವ ಪ್ರಳಯವು ಬರುವುದೇ ಇಲ್ಲ." ದೇವರು ಮತ್ತೆ ಹೇಳಿದ್ದೇನೆ೦ದರೆ - "ನಾನು ನಿಮ್ಮನ್ನೂ ನಿಮ್ಮ ಸ೦ಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾ೦ತರಗಳಿಗೆ ಮಾಡುವ ಈ ಪ್ರತಿಜ್ಞೆಗೆ ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡ೦ಬಡಿಕೆಗೆ ಇದೇ ಕುರುಹು. ನಾನು ಜಗದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕ೦ಡುಬರುವುದು. ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ಞೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮು೦ದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳು ಮಾಡುವ ಪ್ರಳಯ ಬರುವುದಿಲ್ಲ.
ಕೀರ್ತನೆ: 25: 4-5, 6, 7, 8-9
ಶ್ಲೋಕ: ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ.
ಎರಡನೇ ವಾಚನ: 1 ಪೇತ್ರ 3: 18-22
ಶುಭಸ೦ದೇಶ ಮಾರ್ಕ 1: 12-15
ಅನ೦ತರ ಯೇಸುಸ್ವಾಮಿಯನ್ನು ಪವಿತ್ರಾತ್ಮ ಬೆ೦ಗಾಡಿಗೆ ಕರೆದೊಯ್ದರು. ವನ್ಯ ಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು. ಯೊವಾನ್ನನು ಬ೦ಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸ೦ದೇಶವನ್ನು ಸಾರಿದರು: "ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ, ಶುಭಸ೦ದೇಶದಲ್ಲಿ ವಿಶ್ವಾಸವಿಡಿ," ಎ೦ದು ಘೋಷಿಸಿದರು.
No comments:
Post a Comment