ಮೊದಲನೆಯ ವಾಚನ: 1 ಪೇತ್ರ 1:10-16
28.05.24
27.05.24
ಮೊದಲನೆಯ ವಾಚನ: 1 ಪೇತ್ರ 1:3-9
26.05.24 - "ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ"
ಮೊದಲನೇ ವಾಚನ: ಧರ್ಮೋಪದೇಶಕಾಂಡ 4: 32-34, 39-40
ಹನ್ನೊಂದು ಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು. ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು. ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು.
25.05.24
24.05.24 - ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ
23.05.24
ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು. ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು. ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಹಾಕು; ಎರಡು ಕೈಗಳಿದ್ದು ನರಕದ ಆರದ ಬೆಂಕಿಗೆ ಗುರಿಯಾಗುವುದಕ್ಕಿಂತ ಅಂಗಹೀನನಾಗಿ ಅಮರಜೀವವನ್ನು ಪಡೆಯುವುದೇ ಲೇಸು. ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು, ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಕುಂಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು. ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು. ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು. ಊಟಕ್ಕೆ ಉಪ್ಪಿನಂತೆ ಪ್ರತಿಯೊಬ್ಬನಿಗೆ ಅಗ್ನಿಪರೀಕ್ಷೆ ಅವಶ್ಯಕ. ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು. ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.
22.05.24 - "ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನ"
21.05.24 - "“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; "
ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ? ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ. ಬೇಡಿಕೊಂಡರೂ ನಿಮಗದು ದೊರಕುವುದಿಲ್ಲ. ಏಕೆಂದರೆ, ನಿಮ್ಮ ಬೇಡಿಕೆ ದುರುದ್ದೇಶದಿಂದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ. ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ. “ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ? ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರ`ಹಿಸುತ್ತಾರೆ,” ಎಂದು ಲಿಖಿತವಾಗಿದೆ. ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ. ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು. ದೇವರ ಸವಿೂಪಕ್ಕೆ ಬನ್ನಿ, ಆಗ ಅವರು ನಿಮ್ಮ ಸವಿೂಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ. ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ, ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ. ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.
ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯದ ಮಾರ್ಗವಾಗಿ ಮುಂದಕ್ಕೆ ಪ್ರಯಾಣ ಮಾಡಿದರು. ಇದು ಯಾರಿಗೂ ತಿಳಿಯಬಾರದು ಎಂಬುದು ಯೇಸುವಿನ ಇಚ್ಛೆಯಾಗಿತ್ತು. ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು. ಆದರೆ ಯೇಸು ಹೇಳಿದ ಈ ಮಾತುಗಳನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅಂಜಿದರು. ಅನಂತರ ಅವರೆಲ್ಲರೂ ಕಫೆರ್ನವುಮಿಗೆ ಬಂದರು. ಮನೆ ಸೇರಿದಾಗ ಯೇಸುಸ್ವಾಮಿ, “ದಾರಿಯಲ್ಲಿ ಬರುತ್ತಾ ನೀವು ನಿಮ್ಮಲ್ಲೇ ಏನು ಚರ್ಚೆಮಾಡುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದರು. ಅವರು ಮೌನ ತಾಳಿದರು. ಏಕೆಂದರೆ, ತಮ್ಮಲ್ಲಿ ಯಾವನು ಅತಿ ಶ್ರೇಷ್ಠನು ಎಂದು ತಮ್ಮ ತಮ್ಮಲ್ಲೇ ವಾದಿಸುತ್ತಾ ಬಂದಿದ್ದರು. ಯೇಸು ಕುಳಿತುಕೊಂಡು, ಹನ್ನೆರಡು ಮಂದಿಯನ್ನೂ ಕರೆದು, ಅವರಿಗೆ, ‘ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ; ಎಲ್ಲರ ಸೇವೆ ಮಾಡುವವನಾಗಿ ಇರಲಿ,’ ಎಂದರು. ಅನಂತರ ಯೇಸು, ಒಂದು ಚಿಕ್ಕ ಮಗುವನ್ನು ಕರೆದು ಅವರ ನಡುವೆ ನಿಲ್ಲಿಸಿ, ಅದನ್ನು ತಬ್ಬಿಕೊಂಡು ತಮ್ಮ ಶಿಷ್ಯರಿಗೆ, “ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.
20.05.24 - ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯ ಸೂಜಿಗಣ್ಣಲ್ಲಿ ನುಸುಳುವುದು ಸುಲಭ
ಮೊದಲನೇ ವಾಚನ: ಸಿರಾಖ 17: 24-29
19.05.24 - "ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,”
18.05.24 - "ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ..."
17.05.24 - “ನನ್ನ ಕುರಿಮರಿಗಳನ್ನು ಮೇಯಿಸು, ನನ್ನ ಕುರಿಗಳನ್ನು ಮೇಯಿಸು"
16.05.24 - "ಪಿತನೇ, ಇವರೆಲ್ಲಾ ಒಂದಾಗಿರಲಿ"
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 22:30; 23:6-11
ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು. ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು. ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ. ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು. ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು. ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.
ಶುಭಸಂದೇಶ: ಯೊವಾನ್ನ 17:20-26
15.05.24 - "ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ"
ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!