ಮೊದಲನೆಯ ವಾಚನ: ಯಾಕೋಬ 5: 1-6
ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ. ನಿಮ್ಮ ಐಶ್ವರ್ಯ ನಾಶವಾಗಿದೆ. ನಿಮ್ಮ ಬೆಲೆಬಾಳುವ ಬಟ್ಟೆಗಳಿಗೆ ನುಸಿಹತ್ತಿದೆ. ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕು ಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ. ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ. ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ. ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.
ಕೀರ್ತನೆ 49: 14-19 ಮತ್ತಾಯ 5: 3
ಶ್ಲೋಕ: ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು, ಸ್ವರ್ಗಸಾಮ್ರಾಜ್ಯ ಅವರದು.
ಶುಭಸಂದೇಶ: ಮಾರ್ಕ: 41-50

ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು. ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು. ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಹಾಕು; ಎರಡು ಕೈಗಳಿದ್ದು ನರಕದ ಆರದ ಬೆಂಕಿಗೆ ಗುರಿಯಾಗುವುದಕ್ಕಿಂತ ಅಂಗಹೀನನಾಗಿ ಅಮರಜೀವವನ್ನು ಪಡೆಯುವುದೇ ಲೇಸು. ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು, ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಕುಂಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು. ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು. ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು. ಊಟಕ್ಕೆ ಉಪ್ಪಿನಂತೆ ಪ್ರತಿಯೊಬ್ಬನಿಗೆ ಅಗ್ನಿಪರೀಕ್ಷೆ ಅವಶ್ಯಕ. ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು. ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.
No comments:
Post a Comment