ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

10.06.24

ಮೊದಲನೆಯ ವಾಚನ: 1 ಅರಸುಗಳ  17:1-6

ಗಿಲ್ಯಾದಿನ ಪವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, " ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ, "ಎಂದನು. ಸರ್ವೇಶ್ವರಸ್ವಾಮಿ ಎಲೀಯನಿಗೆ, "ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೇರಿತ್ ಹಳ್ಳದಲ್ಲಿ ಅಡಗಿಕೋ. ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ, "ಎಂದು ಹೇಳಿದರು. ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೇರಿತ್ ಹಳ್ಳದಲ್ಲಿ ಅವನು ವಾಸಿಸಿದನು. ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.

ಕೀರ್ತನೆ: 121:1-8
ಶ್ಲೋಕ: ನನಗೆ ಒತ್ತಾಸೆ ಪ್ರಭುವಿನಿಂದ.

ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ|
ಕೇಳುವೆ: "ನನಗೆ ಒತ್ತಾಸೆ ಎತ್ತಣಿಂದ?||
ನನಗೆ ಒತ್ತಾಸೆ ಪ್ರಭುವಿನಿಂದ|
ಭೂಮ್ಯಾಕಾಶ ಸೃಜಿಸಿದವನಿಂದ||

ನಿನ್ನ ಕಾಲೆಡವದಂತೆ ನೋಡುವನಾತ|
ತೂಕಡಿಸಲಾರನು ನಿನ್ನ ಕಾಯುವಾತ||
ಇಗೋ, ಇಸ್ರಯೇಲನು ಕಾಯುವಾತನು|
ನಿದ್ರಿಸಲಾರನು ತೂಕಡಿಸಲಾರನು||

ನಿನ್ನನ್ನು ಕಾಯುತಿಹನು ಪ್ರಭುವೇ|
ಬಲಗಡೆ ನೆರಳಂತಿಹನು ಪ್ರಭುವೇ||
ನಿನ್ನ ಬಾಧಿಸನು ಸೂರ್ಯನು|
ಹಗಲೊಳು ನಿನ್ನ ಪೀಡಿಸನು ಚಂದ್ರನು ಇರುಳೊಳು||

ಪಭು ಕಾಯುವನು ನಿನ್ನ ಪ್ರಾಣವನು|
ಸಕಲ ಕೇಡಿನಿಂದ ಕಾಪಾಡುವನು||
ಪ್ರಭು ಕಾಯುವನು ನಿನ್ನ ಆಗುಹೋಗುಗಳನು|
ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು||

ಘೋಷಣೆ: ಕೀರ್ತನೆ 119:135
ಅಲ್ಲೆಲೂಯ, ಅಲ್ಲೆಲೂಯ!

ತೋರು ನಿನ್ನ ಮುಖದರ್ಶನ ಈ ದಾಸನಿಗೆ | ನೀ ಕಲಿಸು ನಿನ್ನ ನಿಬಂಧನೆಗಳನ್ನು ಎನಗೆ ||

ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 5:1-12

ಆ ಕಾಲದಲ್ಲಿ ಜನರ ದೊಡ್ಡ ಗುಂಪನ್ನು ಕಂಡು ಯೇಸು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು: "ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಂಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು, ಆಗ ನೀವು ಭಾಗ್ಯವಂತರು, ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು."

No comments:

Post a Comment