ಮೊದಲನೇ ವಾಚನ: ಸಿರಾಖನು 48:1-14
ಎಲೀಯನು ಆಮೇಲೆ ಪ್ರವಾದಿ ಎಲೀಯನೆದ್ದನು ಬೆಂಕಿಯಂತೆ ಉರಿಯಿತವನ ನುಡಿ ಪಂಜಿನಂತೆ. ಕ್ಷಾಮವನ್ನು ಬರಮಾಡಿದನಿವನು ಜನರ ಮೇಲೆ ಅವರನ್ನು ಕುಂದಿಸಿದನು ತನ್ನ ರೋಷದಿಂದಲೆ. ಆಕಾಶವನ್ನೇ ಮುಚ್ಚಿಬಿಟ್ಟನು ಸರ್ವೇಶ್ವರನ ಹೆಸರಿನಲ್ಲಿ ಬೆಂಕಿಯಿಳಿಯುವಂತೆ ಮಾಡಿದನು ಮೂರುಸಾರಿ. ಎಲೈ ಎಲೀಯನೇ, ಮಹತ್ಕಾರ್ಯಗಳಲ್ಲಿ ನೀನು ಎಷ್ಟು ಘನವಂತನಾಗಿದ್ದೆ ! ನಿನ್ನಂತೆ ಹೆಚ್ಚಳಪಡುವವರು ಯಾರಿದ್ದಾರೆ? ಸತ್ತವನನ್ನು ನೀನೆಬ್ಬಿಸಿದೆ ಮರಣದಿಂದ, ಪಾತಾಳದಿಂದ ಇದು ಸಾಧ್ಯವಾಯಿತು ಮಹೋನ್ನತನ ವಾಕ್ಯ ಶಕ್ತಿಯಿಂದ. ಅರಸುಗಳನ್ನು ನಾಶನಕ್ಕೆ ಗುರಿಮಾಡಿದವನು ನೀನು ಗಣ್ಯವ್ಯಕ್ತಿಗಳನ್ನು ಮಂಚದಿಂದ ಇಳಿಸಿದವನು ನೀನು. ಸೀನಾಯಿನಲ್ಲಿ ಗದರಿಸಿಕೊಂಡವನು ನೀನು ಹೋರೇಬಿನಲ್ಲಿ ಮುಯ್ಯಿತೀರಿಸುವ ನಿರ್ಣಯ ಕೇಳಿಸಿಕೊಂಡವನು ನೀನು. ಪ್ರತೀಕಾರ ಮಾಡುವುದಕ್ಕೆ ಅರಸರನ್ನು, ನಿನ್ನಾನಂತರ ಇರಬೇಕಾದ ಪ್ರವಾದಿಯನ್ನು ಅಭಿಷೇಕಿಸಿದವನು ನೀನು. ನೀ ಒಯ್ಯಲ್ಪಟ್ಟೆ ಬೆಂಕಿಯ ಬಿರುಗಾಳಿಯಲ್ಲಿ ಅಗ್ನಿಮಯ ಕುದುರೆಗಳೆಳೆದ ರಥದಲ್ಲಿ. ಕೋಪ ರೌದ್ರಕ್ಕೇರುವುದಕ್ಕೆ ಮುಂಚೆ ಅದನ್ನು ಶಾಂತಪಡಿಸುವುದಕ್ಕಾಗಿ ತಂದೆಯ ಹೃದಯವನ್ನು ಮಗನ ಕಡೆಗೆ ತಿರುಗಿಸುವುದಕ್ಕಾಗಿ ಇಸ್ರಯೇಲಿನ ಕುಲಗಳನ್ನು ಯಥಾಸ್ಥಿತಿಗೆ ತರುವುದಕ್ಕಾಗಿ ತಕ್ಕಕಾಲದಲ್ಲಿ ಗದರಿಸುವಾತ ನೀನೆಂದು ಬರೆದಿದೆ ನಿನ್ನ ವಿಷಯವಾಗಿ. ನಿನ್ನನು ನೋಡುವವರು ಧನ್ಯರು ಪ್ರೀತಿಯಿಂದ ನಿಧನರಾದವರು ಧನ್ಯರು ! ಕಾರಣ, ನಾವು ಸಹ ನಿಜವಾಗಿ ಜೀವಿಸುವೆವು. ಎಲೀಷ ಸುಳಿಗಾಳಿಯಿಂದ ಆವರಿಸಲ್ಪಟ್ಟವನು ಎಲೀಯನು ಅವನ ಆತ್ಮದಿಂದ ತುಂಬಿಕೊಂಡವನು ಎಲೀಷನು. ಇವನು ತನ್ನ ಜೀವನದಲ್ಲಿ ಜಗ್ಗಲಿಲ್ಲ ಯಾವ ಅರಸನ ಬೆದರಿಕೆಗು ಇವನನ್ನು ಅಧೀನದಲ್ಲಿಟ್ಟುಕೊಳ್ಳುವ ಶಕ್ತಿ ಇರಲಿಲ್ಲ ಯಾರಿಗು. ಇವನು ಸೋಲಲಿಲ್ಲ ಯಾವ ಮಾತಿಗು ಇವನ ದೇಹ ಪ್ರವಾದಿಸಿತು ಸತ್ತ ಮೇಲೂ. ಜೀವಮಾನಕಾಲದಲ್ಲಿ ಎಸಗಿದನು ಮಹತ್ಕಾರ್ಯಗಳನ್ನು ಸತ್ತಮೇಲೂ ಅವನ ಕಾರ್ಯಗಳು ಅಗಾಧವಾಗಿದ್ದವು.
ಕೀರ್ತನೆ: 97:1-2, 3-4, 5-6, 7
ಶ್ಲೋಕ: ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ
ಶುಭಸಂದೇಶ: ಮತ್ತಾಯ 6:7-15
No comments:
Post a Comment