ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 6:1-8
ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು. 2ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು. ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು. ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು. ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!” ಎಂದು ಕೂಗಿಕೊಂಡೆನು. ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು. ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು. ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.
ಕೀರ್ತನೆ: 93:1, 1-2, 5
ಶ್ಲೋಕ: ವಹಿಸಿಹನು ಪ್ರಭು ರಾಜ್ಯಾಧಿಕಾರವನು
ಶುಭಸಂದೇಶ: ಮತ್ತಾಯ 10:24-33
No comments:
Post a Comment