ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

29.07.24 - ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು”

ಮೊದಲನೇ ವಾಚನ: ಯೆರೆಮೀಯ13:1-11

ಸರ್ವೇಶ್ವರ ಸ್ವಾಮಿ ನನಗೆ : “ನೀನು ಹೋಗಿ ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.  ನಾನು ಅವರ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆ. ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಿಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂದಿನೊಳಗೆ ಬಚ್ಚಿಡು,” ಎಂಬುದಾಗಿ ಸರ್ವೇಶ್ವರ ಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು. 5ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ. ಬಹು ದಿನಗಳ ಮೇಲೆ ಸರ್ವೇಶ್ವರ ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು. ಆಗ ನಾನು ಯೂಫ್ರೆಟಿಸ್ ನದಿಗೆ ಹೋಗಿ ಹುಡುಕಿ ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು. ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಕ್ಯವೇನೆಂದರೆ : “ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು. ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”

ಕೀರ್ತನೆ: 32:18-19, 20, 21
ಶ್ಲೋಕ: ಜನ್ಮವಿತ್ತ ದೇವರನ್ನು ನೀವು ಸ್ಮರಿಸಲಿಲ್ಲ


ಶುಭಸಂದೇಶ: ಮತ್ತಾಯ13:31-35

ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ. ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.” ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.” ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು”

No comments:

Post a Comment