ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

21.09.24 - "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ"

ಮೊದಲನೇ ವಾಚನ: ಎಫೆಸಿಯರಿಗೆ 4:1-7, 11-13


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲು ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭೂ ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ, ದೇವರೂ ಒಬ್ಬರೇ, ಸರ್ವರ ತಂದೆಯೂ ಇವರೇ; ಸರ್ವಶ್ರೇಷ್ಟರೂ ಅವರೇ; ಸರ್ವರ ಮುಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ. ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತ ಯೇಸು ಅನುಗ್ರಹಿಸಿರುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: ಈ ವೆಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರದೇಹವಾದ ಧರ್ಮಸಭೆ ಅಭಿವೃದ್ಧಿ ಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು. ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕ್ಯಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತ ಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.

ಕೀರ್ತನೆ: 19:2-3, 4-5

ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ

ಶುಭಸಂದೇಶ: ಮತ್ತಾಯ  9:9-13

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬುವನನ್ನು ಕಂಡರು. ಅವನು ಸಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತ್ತಿದ್ದನು. "ನನ್ನನ್ನು ಹಿಂಬಾಲಿಸು," ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರೂ ಪಾಪಿಷ್ಠರು ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನುದ್ದೇಶಿಸಿ, "ನಿಮ್ಮ ಗುರು ಇಂತಹ ಬಹಿಷ್ಕ್ರತ ಜನರ ಜೊತೆಯಲ್ಲಿ ಊಟ ಮಾಡುವುದೇ?" ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು, "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, "ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ" ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು," ಎಂದರು.

No comments:

Post a Comment