ಮೊದಲನೆಯ ವಾಚನ : ಮೋಚನಕಾಂಡದಿಂದ ಇಂದಿನ ವಾಚನ 23:20-23
ಸರ್ವೇಶ್ವರ ಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು: "ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗೂ ನಾನು ಗೊತ್ತು ಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ. ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು. ನೀವು ಆತನ ಮಾತನ್ನು ಶ್ರದ್ದೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವರಾಗಿಯೂ ಇರುವೆನು."
-ಪ್ರಭುವಿನ ವಾಕ್ಯ
ಕೀರ್ತನೆ 91:1-2,3-4,4-6,10-11
ಶ್ಲೋಕ: ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ.
ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು||
ನಾನಾತನಿಗೆ, "ನೀನೇ ನನ್ನ ರಕ್ಷಕನೂ| ದುರ್ಗವೂ ನಾ ನಂಬಿರ ದೇವನೂ"ಎನ್ನುವೆನು||
2. ತಪ್ಪಿಸುವನಾತನು ಬೇಟೆಗಾರನ ಬಲೆಯಿಂದ|
ರಕ್ಷಿಸುವನು ಮಾರಕವಾದ ವ್ಯಾಧಿಯಿಂದ||
ಹುದಗಿಸುವನು ನಿನ್ನನ್ನು ತನ್ನ ಗರಿಗಳ ತೆಕ್ಕೆಯಲ್ಲಿ|
ಆಶ್ರಯಪಡೆಯುವೆ ನೀ ಆತನ ರೆಕ್ಕೆಗಳಡಿಯಲಿ||
ಹಗಲಿನಲಿ ಹಾರಿಬರುವ ಬಿರುಸು ಬಾಣಕೆ||
ಕತ್ತಲೆಯಲಿ ಸಂಚರಿಸುವ ವಿಪತ್ತಿಗೆ|
ನಡು ಹಗಲಲೆ ಪೀಡಿಸುವ ಜಾಡ್ಯಕ್ಕೆ||
ಕೆಡಕು ನಿನ್ನ ಗುಡಾರದ ಬಳಿ ಸುಳಿಯದು||
ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ|
ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ||
ಘೋಷಣೆ ಕೀರ್ತನೆ 103:21
ಪ್ರಭುವನ್ನು ಭಜಿಸಿರಿ ಆತನ ಸೇನೆಗಳೇ | ಭಜಿಸು ಪ್ರಭುವನು, ಓ ಎನ್ನ ಮನವೆ ||
ಅಲ್ಲೆಲೂಯ!
ಶುಭಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 18:1-5,10
-ಪ್ರಭುಕ್ರಿಸ್ತರ ಶುಭಸಂದೇಶ
No comments:
Post a Comment