28.10.24 - "ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು"

 ಮೊದಲನೇ ವಾಚನ: ಎಫೆಸಿಯರಿಗೆ 2:19-22 


ಸಹೋದರರೇ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.  ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.  ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.  ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ. 

ಕೀರ್ತನೆ: 19:2-3, 4-5 

ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ. 

ಶುಭಸಂದೇಶ: ಲೂಕ 6:12-16 


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.  ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.  ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,  ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,  ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. 

No comments:

Post a Comment

30.08.2026 - ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

  ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:7-9 ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂ...