25.11.24- "ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,”

ಮೊದಲನೇ ವಾಚನಪ್ರಕಟಣಾ ಗ್ರಂಥ 14:1-3, 4-5

ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನುನಿಂತಿರುವುದನ್ನು ಕಂಡೆಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರುಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರುಇದಲ್ಲದೆಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತುಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತುನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತುಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರುಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇಇವರನ್ನುಳಿದು ಬೇರೆ ಯಾರಿಂದಲೂ  ಹಾಡನ್ನು ಕಲಿಯಲಾಗಲಿಲ್ಲಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರುಕನ್ಯೆಯರಂತೆ ಕಳಂಕರಹಿತರುಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರುದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರುಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲಅವರು ನಿರ್ದೋಷಿಗಳು.

ಕೀರ್ತನೆ24:1-2, 3-4, 5-6

ಶುಭಸಂದೇಶ: ಲೂಕ 21:1-4 12:41-44

ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರುಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದುತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳುಅದನ್ನು ಕಂಡ ಯೇಸು, “ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರುಈಕೆಯಾದರೋತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...