27.11.24 - "ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆ ಕೂದಲೊಂದೂ ನಾಶವಾಗುವುದಿಲ್ಲ"

ಮೊದಲನೇ ವಾಚನಪ್ರಕಟಣಾ ಗ್ರಂಥ 15:1-4

ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.ಇದಲ್ಲದೆಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತುಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರುಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು. ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ :

ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ !
ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ !
ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ
ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.
ಹೇ ಪ್ರಭೂ, ನಿನಗಂಜದವರಾರು?
ನಿನ್ನ ನಾಮಸ್ತುತಿ ಮಾಡದವರಾರು?
ಪರಮಪವಿತ್ರ ನೀನಲ್ಲದಿನ್ಯಾರು
ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು
ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”

ಕೀರ್ತನೆ: 98:1, 2-3, 7-8, 9

ಶುಭಸಂದೇಶ: ಲೂಕ 21:12-19


ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು. ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ. ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ. ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು. ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು. ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆಕೂದಲೊಂದೂ ನಾಶವಾಗುವುದಿಲ್ಲ. ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...