30.11.24

ಮೊದಲನೇ ವಾಚನ: ರೋಮನ್ನರಿಗೆ  10: 9-18

"ಯೇಸುಸ್ವಾಮಿಯೇ ಪ್ರಭು" ಎಂದು ನೀನು ಬಾಯಿಂದ ನಿವೇದಿಸಿಅವರನ್ನು ದೇವರು ಸಾವಿನಿಂದ ಪುನರುತ್ದಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ. ಹೌದುಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂದವನ್ನು ಪಡೆಯುತ್ತಾನೆಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ. ಏಕೆಂದರೆ, "ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ." ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ. ಈ ವಿಷಯದಲ್ಲಿ ಯೆಹೂದ್ಯರುಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ. "ಪ್ರಭುವಿನ ನಾಮಸ್ಮರಣೆ ಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ," ಎಂದು ಲಿಖಿತವಾಗಿದೆ. ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆಭೋಧಿಸುವವರು ಇಲ್ಲದಿದ್ದರೆ ಅವರ ವಿಷಯಗಳನ್ನು ಕುರಿತು ಕೇಳುವುದಾದರೂ ಹೇಗೆಭೋಧಿಸುವವರನ್ನು ಕಳುಹಿಸದೆ ಹೋದರೆಅವರು ಶುಭಸಂದೇಶವನ್ನು ಭೋಧಿಸುವುದಾದರೂ ಹೇಗೆ? "ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ," ಎಂದು ಪವಿತ್ರ ಗ್ರಂಥದಲ್ಲೇ ಬರೆಯಲಾಗಿದೆ. ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಃಗೀಕರಿಸಲಿಲ್ಲ. ಆದ್ದರಿಂದಲೇ ಯೆಶಾಯನು, "ಪ್ರಭುವೇನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?"  ಎಂದು ಮೊರೆಯಿಟ್ಟಿದ್ದಾನೆ. ಇಂತಿರಲುಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ. ಶುಭಸಂದೇಶ ಕ್ರಿಸ್ತಯೇಸುವನ್ನು ಭೋಧಿಸುವುದರ ಮೂಲಕ ಪ್ರಕಟವಾಗುತ್ತದೆ. ಈಗ ನನ್ನದೊಂದು ಪ್ರಶ್ನೆ; "ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೇ?" ನಿಶ್ಚಯವಾಗಿ ಇತ್ತು. ಪವಿತ್ರ ಗ್ರಂಥದಲ್ಲಿ ಹೇಳಿರುವಂತೆ: "ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು,"

ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ.

ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು|
ತಾರಮಂಡಲ ತೋರುತಿದೆ ದೇವರ ಕೈಕೃತಿಗಳನು||
ದಿನವು ಮರುದಿನಕೆ ಈ ಪ್ರಕಟನೆಯನು|
ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು||

ಅವುಗಳಿಗೆ ಮಾತಿಲ್ಲ, ಅವುಗಳಿಗೆ ಶಬ್ದವಿಲ್ಲ|
ಅವುಗಳ ಸ್ವರವಂತೂ ಕೇಳಿ ಬರುವುದಿಲ್ಲ||
ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ|
ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ||

ಘೋಷಣೆ: ಮತ್ತಾಯ 4:19

ಅಲ್ಲೆಲೂಯ, ಅಲ್ಲೆಲೂಯ!
ನನ್ನನ್ನು ಹಿಂಬಾಲಿಸಿ ಬನ್ನಿ; ನಿಮ್ಮನ್ನು ಮನುಷ್ಯರನೇ ಹಿಡಿಯುವವರನ್ನಾಗಿ ಮಾಡುವೆನು.
ಅಲ್ಲೆಲೂಯ!


ಶುಭಸಂದೇಶ: ಮತ್ತಾಯ  4:18-22

ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದರು ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ 'ಪೇತ್ರಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಆಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು. "ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು," ಎಂದು ಹೇಳಿ ಯೇಸು ಅವರನ್ನು ಕರೆದರು. ತಕ್ಷಣವೇಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು. ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...