04.05.25 - “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?”

ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ: 5:27-32 40-41 


ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನ ಯಾಜಕನು ಅವರನ್ನು ಉದ್ದೇಶಿಸಿ, “ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟು ಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು. ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ. ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ. ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು. ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟು ಬಿಟ್ಟರು. ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರ ಬಂದರು.

ಪ್ರಕಟಣಾ ಗ್ರಂಥ :   5:11-14 

ತರುವಾಯ ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತುಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರುಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು. “ದೋಣಿಯ ಬಲಗಡೆಗೆ ಬಲೆ ಬೀಸಿರಿ; ಮೀನುಗಳು ಸಿಗುತ್ತವೆ,” ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆಹೋಯಿತುಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭುಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನುಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರುಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತುಯೇಸು ಅವರಿಗೆ, “ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ,” ಎಂದು ಹೇಳಿದರುಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದುತಂದನು. ಬಲೆಯ ತುಂಬ ದೊಡ್ಡಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲಯೇಸು ಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು, ಹಾಗೆಯೇ ಮೀನನ್ನೂ ಕೊಟ್ಟರು.

ಯೊವಾನ್ನ 21:1-19 

ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ. ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.  ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರುಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸುನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರುಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...