ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

29.08.2025 -

 ಮೊದಲನೇ ವಾಚನ: 1 ಥೆಸಲೋನಿಯರಿಗೆ 2:1-8

 ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು. ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು. ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ. ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರoಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ. ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ. ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ. ತಾಯಿ ತನ್ನ ಮಕ್ಕಳನ್ನು ಸಾಕಿ ಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು. ೮ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು. 


ಕೀರ್ತನೆ: 139:1-6

ಶ್ಲೋಕ: ಪ್ರಭು, ಪರಿಶೋಧಿಸಿರುವೆ ನೀ ನನ್ನನು

1. ಪ್ರಭು, ಪರಿಶೋಧಿಸಿರುವೆ ನೀ ನನ್ನನು 
  ಅರಿತುಕೊಂಡಿರುವೆ ಅಂತರoಗವನು 
 ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ 
  ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ 


2. ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ 
 ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ 
 ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ 
  ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ 

 3.ನನ್ನ ಹಿಂದೆಯೂ ಮುಂದೆಯೂ ನೀನಿರುವೆ 
  ಅಭಯ ಹಸ್ತವನು ನನ್ನ ಮೇಲಿರಿಸಿರುವೆ 
  ನನ್ನ ಕುರಿತು ನಿನಗಿರುವ ಅರಿವು ಅಗಾಧ 
  ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ 


ಶುಭಸಂದೇಶ: ಮತ್ತಾಯ 23:13-22
ಆ ಕಾಲದಲ್ಲಿ ಯೇಸು ಧರ್ಮಶಾಸ್ತಿಗಳನ್ನೂ ಫರಿಸಾಯರನ್ನೂ ಉದ್ದೇಶಿಸಿ ಹಿಗೇಂದರು ಎಂದರು"ಕಪಟ ಧರ್ಮಶಾಸ್ತಿçಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತçದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆ ದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷö್ಯ ಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು. ಅಂಧ ನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ. ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ. ಕಪಟ ಧರ್ಮಶಾಸ್ತಿçಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳ್ಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿಹೋಗಿದೆ. ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆ ಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.ಎಂದರು

No comments:

Post a Comment