ಮೊದಲನೇ ವಾಚನ: ಆದಿಕಾಂಡ 18: 16-33
30.06.2025 - ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.
29.06.2025 - "ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು"
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:1-11
28.06.2025 - ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?”
ಮೊದಲನೇ ವಾಚನ: ಯೆಶಾಯ: 61:9-11

27.06.2025 - "ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು"
ಮೊದಲನೇ ವಾಚನ: ಯೆಜೆಕಿಯೇಲ 34:11-16
ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: "ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳಿವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಭತ್ತೊಂಭತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆ ಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. "ಕಳೆದು ಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ," ಎನ್ನುತ್ತಾನೆ, ಅಲ್ಲವೇ? ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಭತ್ತೊಂಭತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
26.06.2025 - ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ.
ಮೊದಲನೇ ವಾಚನ: ಆದಿಕಾಂಡ 16:1-12, 15-16
ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಈಜಿಪ್ಟ್ ದೇಶದವಳಾದ ಹಾಗರಳೆಂಬ ಒಬ್ಬ ದಾಸಿ ಇದ್ದಳು. ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು. ಅಬ್ರಾಮನು ಹಾಗರಳನ್ನು ಕೂಡಿದನು. ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದ ಅವಳು, ತನ್ನ ಯಜಮಾನಿಯನ್ನೇ ತಾತ್ಸಾರ ಮಾಡತೊಡಗಿದಳು.
ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ. ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ಈಗ ಸರ್ವೇಶ್ವರಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.
ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟಬಂದAತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.
ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು. “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು. ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು. ಅದೂ ಅಲ್ಲದೆ ಸ್ವಾಮಿಯ ದೂತನು, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು,” ಎಂದು ಹೇಳಿ ಇಂತೆಂದನು:
ಗರ್ಭಿಣಿಯಾದ ನಿನಗೆ
ಇಷ್ಮಾಯೇಲೆಂಬ ಹೆಸರನು
ಇಡು ಅವನಿಗೆ ಕಾರಣ- ಸರ್ವೇಶ್ವರ
ಕಿವಿಗೊಟ್ಟಿಹನು ನಿನ್ನ ಮೊರೆಗೆ.
ಬಾಳುವನವನು ಕಾಡುಗತ್ತೆಯಂತೆ
ಎತ್ತುವನು ಕೈಯನು ಎಲ್ಲರ ಮೇಲೆ,
ಎತ್ತುವರೆಲ್ಲರು ಕೈ ಅವನ ಮೇಲೆ
ಬಾಳುವನು ಸೋದರರಿಗೆ ಎದುರು ಬದುರಾಗೆ.”
25.06.2025 - “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”
ಮೊದಲನೇ ವಾಚನ: ಆದಿಕಾಂಡ 15:1-12, 17-18
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು. ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ? ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ. ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು. ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ."
23.06.2025 - "ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು"
ಮೊದಲನೇ ವಾಚನ: ಆದಿಕಾಂಡ 12:1-9
ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧು ಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟು ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆ ಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ. “ನಿನ್ನನ್ನು ಹರಸುವವರನು ನಾ ಹರಸುವೆ. ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.” ಸರ್ವೇಶ್ವರ ಹೀಗೆಂದು ಹೇಳಿದಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು. ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿ ಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು. ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು. ಅಲ್ಲಿ ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆ ಮಾಡಿ ಆರಾಧಿಸಿದನು. ತರುವಾಯ ಅಲ್ಲಿಂದ ಮುಂದೆ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
"ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, "ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದು ಬಿಡುತ್ತೇನೆ," ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು."
22.06.25 - ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ
ಆದಿಕಾಂಡದಿಂದ ಇಂದಿನ ಮೊದಲನೆಯ ವಾಚನ 14:18-20
ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:
" ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!" ಅಬ್ರಾಹಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.
ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ
ಕೀರ್ತನೆ 110:1-4.V.4
ಶ್ಲೋಕ: ಮೆಲ್ಕಿಸದೇಕ್ ಪರಂಪರೆಯ ಯಾಜಕ ನೀ ನಿರುತ.
21.06.2025 - ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ
ಮೊದಲನೇ ವಾಚನ: 2 ಕೊರಿಂಥಿಯರಿಗೆ 12:1-10
ಸಹೋದರರೆ, ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ; ಕ್ರೆöÊಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತವಾಗಿಯೋ ದೇಹರಹಿತವಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು. ಅವನು ಪರಂಧಾಮಕ್ಕೆ ಒಯ್ಯಲ್ಪಟ್ಟನೆಂಬುದು ನಿಶ್ಚಯ. ದೇಹಸಹಿತವಾಗಿಯೋ ದೇಹರಹಿತವಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು. ಅಲ್ಲಿ ಅವನಿಗೆ ಕೇಳಿ ಬಂದ ವಿಷಯಗಳು ಮಾನವನ ವರ್ಣನೆಗೆ ಎಟುಕದವು. ಮಾನವನ ನುಡಿಗೆ ನಿಲುಕದವು. ಅವನನ್ನು ಕುರಿತು ನಾನು ಹೆಮ್ಮೆಪಡುತ್ತೇನೆ. ಆದರೆ ನನ್ನನ್ನು ಕುರಿತು ನಾನು ಹೊಗಳಿಕೊಳ್ಳುವುದಿಲ್ಲ. ನನ್ನ ದೌರ್ಬಲ್ಯವೇ ನನ್ನ ಹೊಗಳಿಕೆ. ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.
ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು. ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ. ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ. ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತ ಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.
ಕೀರ್ತನೆ: 34:7-8.9-10.11-12
18.06.2025 - "ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು."
ಮೊದಲನೇ ವಾಚನ: 2 ಕೊರಿಂಥಿಯರಿಗೆ 9:6-11
ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯತ್ತಾನೆ. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ. ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ. “ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು. ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.
14.06.2025 - ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.
ಮೊದಲನೇ ವಾಚನ: 2 ಕೊರಿಂಥಿಯರಿಗೆ 5:14-21
ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು. ಸರ್ವರಿಗೂ ಯೇಸು ಪ್ರಾಣತ್ಯಾಗಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.
ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ. ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದು ಹೋಗುತ್ತದೆ. ಹೊಸದಿದೋ, ಜನ್ಮ ತಳೆದಿದೆ. ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನ ಪಡಿಸಿಕೊಂಡಿದ್ದಾರೆ. ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ. ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.
ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆAದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ. ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬoಧವನ್ನು ಪಡೆಯಲೆಂದೇ ಹೀಗೆ ಮಾಡಿದರು.
ಕೀರ್ತನೆ:103:1-2.3-4.8-10.12-13
1.ಭಜಿಸು ನನ್ನ ಮನವೇ,ಭಜಿಸು ಪ್ರಭುವನು
ನನ್ನ ಅಂತರoಗವೇ, ಭಜಿಸು ಆತನನು
ನೆನೆ ಆತನ ಪರಮಪಾವನ ನಾಮವನು
ಭಜಿಸು ನನ್ನ ಮನವೇ, ಭಜಿಸು ಪ್ರಭುವನು
ಮರೆಯದಿರು ಆತನ ಉಪಕಾರಗಳೊಂದನು
2. ಮನ್ನಿಸುವನಾತ ನನ್ನ ದೋಷಗಳನು
ವಾಸಿಮಾಡುವನು ನನ್ನ ರೋಗಗಳನು
ಉಳಿಸುವನು ಪಾತಾಳದ ಕೂಪದಿಂದ ನನ್ನನು
ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು
3. ಪ್ರಭು ದಯಾಳು, ಕೃಪಾಪೂರ್ಣನು
ಆತನು ಸದಾ ತಪ್ಪು ಹುಡುಕುವವನಲ್ಲ
ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ
ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ
ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ
4. ಪಡುವಣದಿಂದ ಮೂಡಣವೆಷ್ಟೋ ದೂರ
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ
ಕನಿಕರಿಸುವನಾತ ತನಗೆ ಅಂಜುವವರಿಗೆ
ಶುಭಸಂದೇಶ: ಮತ್ತಾಯ 5:33-37
13-06-2025 - ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು
ಮೊದಲನೇ ವಾಚನ: 2 ಕೊರಿಂಥಿಯರಿಗೆ 4:7-15
ಸಹೋದರರೆ ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ, ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ. ನಾವು ಇಕ್ಕಟ್ಟು ಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ. ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ. ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ. ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ. ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ.
“ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ. ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು. ೧೫ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾ ಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.
1.ದೇವರಲ್ಲೇ ನಿರ್ಭೀತ ನಂಬಿಕೆ ನನಗೆ
ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ
2.ನಿನ್ನ
ಮುಂದೆ ಜೀವನ್ ಜ್ಯೋತಿಯಲಿ ನಾ
ನಡೆಯಮಾಡಿರುವೆ
ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ
ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ
3.ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ
ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ