ಮೊದಲನೆಯ ವಾಚನ: ಪೌಲನು ಥೆಸಲೋನಿಯರಿಗೆ ಬರೆದ ಮೊದಲನೆಯ ಪತ್ರ 4:13-18
01.09.2025 - ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
31.08.2025 - "ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ"
ಮೊದಲನೇ ವಾಚನ: ಸಿರಾಖ 3:17-18, 20, 28-29
ಮಗನೇ, ಕರ್ತವ್ಯ ನಿರ್ವಹಣೆಯಲ್ಲಿ ವಿನಯದಿಂದ ವರ್ತಿಸುವೆಯಾದರೆ, ದೇವರ ಯ್ಯೋಗ್ಯರಾದವರ ಪ್ರೀತಿಗೆ ನೀನೂ ಪಾತ್ರನಾಗುವೆ. ನೀನು ದೊಡ್ಡವನಾಗೀರುವಷ್ಟು ನಿನ್ನನ್ನೇ ತಗ್ಗಿಸಿಕೊಂಡೆಯಾದರೆ ದೇವರ ಸನ್ನಿಧಿಯಲ್ಲಿ ನಿಮಗೆ ಗಿಟ್ಟುವುದು ಕರುಣೆ, ಅಪೂರ್ವವಾದುದು ದೇವರ ಬಲ ದೀನರಿಂದ ಆತನಿಗೆ ಸಲ್ಲುವುದು ಘನಮಾನ. ಖಂಡನೆಯಿಂದ ಗುಣವಾಗದು ಗರ್ವಿಗೆ ದುಷ್ಟತನದ ಬಳ್ಳಿ ಬೇರೂರಿದೆ ಅವನಲ್ಲೇ, ವಿವೇಕ ಮನಸ್ಸುಳ್ಳವರು ಪಾಠ ಕಲಿಯುವರು ಸಾಮತಿಗಳಂದ ಲಕ್ಷವಿಟ್ಟು ಕೇಳುವನು ಜ್ಞಾನಿ ಹೆಬ್ಬಯಕೆಯಿಂದ.
ಶ್ಲೋಕ: ದೇವಾ ಆಸ್ಥೆಯಿಂದೊದಗಿಸಿದೆ ದೀನದಲಿತರಿಗೆ
ಅಂದು ಸಬ್ಬತ್ ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು: "ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು. ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರ ಬಂದು, "ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು," ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು. ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೋ. ಕರೆದವನು ಬಂದು, "ಗೆಳೆಯಾ, ಮೇಲೆ ಬಾ" ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳೆಲ್ಲರ ಮುಂದೆ ನಿನಗೆ ಗೌರವ ಸಿಗುವುದು. ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು," ಎಂದರು. ಆನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, "ನೀನು ಊಟ ಆಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಹಿತರನ್ನಾಗಲಿ, ಸೋದರರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿ ತೀರಿಸಿಬಿಡಬಹುದು. ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ; ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ದಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು," ಎಂದರು.
30.08.2025 - "ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ"
ಮೊದಲನೇ ವಾಚನ: 1 ಥೆಸಲೋನಿಯರಿಗೆ 4:9-11
ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು
ಎಸಗಿಹನಾತನು ಪವಾಡ ಕಾರ್ಯಗಳನು
ಗಳಿಸಿತಾತನ ಕೈ ಪೂತಭುಜ ಗೆಲುವನು
ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು
ಚಪ್ಪಾಳೆ ಹೊಡೆಯಲಿ ನದಿಗಳು
ತಟ್ಟಾಡಲಿ ಬೆಟ್ಟಗುಡ್ಡಗಳು
ಜಗಕು, ಜನೆತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು
"ಅದು ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ. ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ. ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಬಹಳ ಕಾಲವಾದ ಬಳಿಕ ಆ ದಣಿ ಹಿಂದಿರುಗಿ ಬಂದ. ಸೇವಕರಿಂದ ಲೆಕ್ಕಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, "ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾಸಿದ್ದೇನೆ." ಎಂದ. ಅದಕ್ಕೆ ಆ ಧಣಿ, "ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು," ಎಂದ. ಎರಡು ತಲೆಂತು ಪಡೆದಿದ್ದವನೂ ಮಂದೆ ಬಂದು, "ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ," ಎಂದ. ಧಣಿ ಅವನಿಗೂ, "ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು," ಎಂದ. ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ: 'ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು; ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ," ಎಂದ. "ಆಗ ಧಣಿ ಅವನಿಗೆ, "ಎಲವೋ ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿ ಮಾಡುವವನು ಎಂದು ನಿನಗೆ ಗೊತ್ತಿಲ್ಲವೆ? ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿ ಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ", ಎಂದ. ಆನಂತರ ಪರಿಚಾರಕರಿಗೆ, "ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಿಡಬೇಕಾಗುವುದು," ಎಂದು ಹೇಳಿದ.
29.08.2025 - ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು.
ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥದಿಂದ ಇಂದಿನ ವಾಚನ 1:17-29
ಕೀರ್ತನೆ : 71:1-6,15,17 V.15
ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು.
1. ಆಶ್ರಯಕೋರಿ ಹೇ ಪ್ರಭೂ, ನಾ ಬಂದಿರುವೆ|
ಆಶಾಭಂಗವಾಗದಿರಲೆಂದು ನಾ ಬೇಡುವೆ||
ಸತ್ಯಸ್ವರೂಪನೇ, ನನ್ನ ಬಿಡಿಸಿ ರಕ್ಷಿಸಯ್ಯಾ|
ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ||
ಶ್ಲೋಕ
2. ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು|
ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು||
ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ|
ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ||
ಶ್ಲೋಕ
3. ಸ್ವಾಮಿ ದೇವಾ, ನೀನೇ ನನ್ನ ಭರವಸೆ|
ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ||
ಹುಟ್ಟಿನಿಂದಲೇ ನಾ ನಿನಗಂಟಿಕೊಂಡಿರುವೆನಯ್ಯಾ|
ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ|
ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ||
ಶ್ಲೋಕ
4. ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು|
ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು||
ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ?|
ನಿನ್ನ ಅದ್ಭುತ ಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ||
ಶ್ಲೋಕ
ಆ ಕಾಲದಲ್ಲಿ ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆ ಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು, "ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ," ಎಂದು ಪದೇ ಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲ ಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟು ಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣ ಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಆಗ ಅರಸ ಹೆರೋದನು ಅವಳಿಗೆ, "ನಿನಗೆ ಏನು ಬೇಕಾದರೂ ಕೇಳು, ಕೊಡುತ್ತೇನೆ" ಎಂದನು. "ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ," ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, "ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?" ಎಂದು ವಿಚಾರಿಸಿದಳು. "ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು," ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೇ ಅವಳು ಅರಸನ ಬಳಿಗೆ ಧಾವಿಸಿ, "ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ," ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.
28.08.2025 - " ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು"
ಮೊದಲನೆಯ ವಾಚನ: 1 ಥೆಸಲೋನಿಯರಿಗೆ 3:7-13
ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು. ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ. ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ. ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ. ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ದಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ದಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ, ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನಾರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವು ಸಹ ಪರಿಶುದ್ದರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು. ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು ? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ. ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ' ನನ್ನ ಯಜಮಾನ ತಡಮಾಡುವನು ' ಎಂದು ನೆನೆಸಿಕೊಂಡು, ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದು ಕುಡಿಯಲಾರಂಭಿಸಿದರೆ, ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು. ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು."
27.08.2025 - "ಹೊರ ನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ"
ಮೊದಲನೇ ವಾಚನ: 1 ಥೆಸಲೋನಿಯರಿಗೆ 2:9-13
25.08.2025 - "ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! "
ಮೊದಲನೇ ವಾಚನ: 1 ಥೆಸಲೋನಿಯರಿಗೆ 1:1-5, 8-10
24.08.2025 - " ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಗರಲ್ಲಿ ಕೆಲವರು ಕಡೆಯವರಾಗುವರು,"
ಮೊದಲನೇ ವಾಚನ: ಯೆಶಾಯ 66:18-21
23.08.2025 - ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ.
ಮೊದಲನೇ ವಾಚನ: ರೂತ 2:1-3, 8-11; 4:13-17
ಶ್ಲೋಕ: ಹೊಂದುವನು ಆಶೀರ್ವಾದವನು ಪ್ರಭುವಿನಲಿ ಭಯಭಕ್ತಿಯುಳ್ಳವನು.
ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು
ಧನ್ಯನು, ಆತನ ಮಾರ್ಗಗಳಲೇ ನಡೆಯುವವನು
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು
ಧನ್ಯನಾಗುವೆ ನೀನು, ನಿನಗೆ ಶುಭವಾಗುವುದು
ಇರುವಳು ನಿನ್ನ ಪತ್ನಿ ಮನೆಯಲಿ ಫಲಭರಿತ ದ್ರಾಕ್ಷಲತೆಯಂತೆ
ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ
ಓಲಿವ್ ಸಸಿಗಳಂತೆ ಹೊಂದುವನು ಅಂತಹ ಆಶೀರ್ವಾದವನು
ಪ್ರಭುವಿನಲಿ ಭಯಭಕ್ತಿಯುಳ್ಳವನು
ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಿಸಲಿ
ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ
ನಮ್ಮ ನಾಡು ನೀಡುವುದು ಬೆಳೆಯನು
ನಡೆವುದು ಪ್ರಭುವಿನ ಮುಂದೆ ನೀತಿ
ಮಾಡುವುದು ಆತನ ಹೆಜ್ಜೆಗೆ ಹಾದಿ
22.08.2025 - "ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು"
ಮೊದಲನೇ ವಾಚನ: ರೂತ 1:1, 3-6, 14-16, 22
ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನಾದ ಎಲಿಮಲೆಕ್ ಎಂಬುವವನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು. ಇವರು ಮೋವಾಬ್ ನಾಡಿನಲ್ಲಿ ವಾಸಿಸುತ್ತಿದ್ದಾಗ ಎಲಿಮಲೆಕನು ಮರಣ ಹೊಂದಿದನು. ವಿಧವೆಯಾದ ನವೊಮಿಇಬ್ಬರು ಗಂಡು ಮಕ್ಕಳೊಡನೆ ಅಲ್ಲೇ ಉಳಿದಳು. ಹುಡುಗರು ಇಬ್ಬರೂ, ಮೋವಾಬ್ಯ ಹುಡುಗಿಯರನ್ನು ವಿವಾಹವಾದರು. ಒಬ್ಬಳ ಹೆಸರು ಒರ್ಫಾ ಮತ್ತು ಇನ್ನೊಬ್ಬಳು ರೂತ್. ಅವರು ಅಲ್ಲಿ ಸುಮಾರು ಹತ್ತು ವರ್ಷಗಳ ಕಾಲ ವಾಸಮಾಡಿದ ನಂತರ, ಪುತ್ರರಾದ ಮಹ್ಲೋನ್ ಮತ್ತು ಕಿಲ್ಯೋನ್ ಸಹ ತೀರಿಹೋದರು. ಹೀಗೆ ನವೊಮಿ ತನ್ನ ಪತಿಯನ್ನೂ ಇಬ್ಬರು ಪುತ್ರರನ್ನೂ ಕಳೆದುಕೊಂಡು ಒಬ್ಬಂಟಿಗಳಾದಳು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದುಬಂತು. ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ. ಆಗ ನವೊಮಿ ರೂತಳಿಗೆ: "ನೋಡು, ನಿನ್ನ ಓರಗಿತ್ತಿಯ ತನ್ನ ಜನಾಂಗದವರ ಬಳಿಗೂ ತನ್ನ ಕುಲದೇವರ ಬಳಿಗೂ ಹಿಂದಿರುಗಿ ಹೋಗಿದ್ದಾಳೆ. ನೀನೂ ಅವಳಂತೆಯೇ ಹೋಗಿಬಿಡು," ಎಂದು ಒತ್ತಾಯಪಡಿಸಿದಳು. ಅದಕ್ಕೆ ರೂತಳು; "ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನೂ ಅಲ್ಲೇ ವಾಸಿಸುತ್ತೇನೆ." ಎಂದಳು. ಹೀಗೆ ನವೊಮಿ ತನ್ನ ಮೋವಾಬ್ಯ ಸೊಸೆಯಾದ ರೂತಳ ಸಂಗಡ ಬೆತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿ ಪ್ರಾರಂಭವಾಗಿತ್ತು.
ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು
ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು
ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೇ
ಕೊಟ್ಟ ವಾಗ್ಧಾನಗಳನು ತಪ್ಪದೆ ನೆರವೇರಿಸುವವ ಆತನೆ
ದೊರಕಿಸುವನು ನ್ಯಾಯ ದಲಿತರಿಗೆ
ಓದಗಿಸುವನು ಆಹಾರ ಹಸಿದವರಿಗೆ
ನೀಡುವನು ಬಿಡುಗಡೆ ಬಂಧಿತರಿಗೆ
ಉದ್ಧಾರಕನಾ ಪ್ರಭು ಕುಗ್ಗಿದವರಿಗೆ
ರಕ್ಷಿಸುವನು ಪ್ರಭು ಪರದೇಶಿಗಳನು
ಆದರಿಸುವನು ಅನಾಥರನು, ವಿಧವೆಯರನು
ಆತನ ಒಲವಿರುವುದು ಸಾದು ಸಜ್ಜನರಿಗೆ
ನಿರ್ಮೂಲಮಾಡುವನು ದುರ್ಜನರ ಮಾರ್ಗವನು
ಪ್ರಭುವೇ ಅರಸನು ಸದಾಕಾಲಕು
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು
ಯೇಸುಸ್ವಾಮಿ ಸದ್ದುಕಾಯರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು. ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: "ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?" ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು." ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ, ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, "ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು." ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ," ಎಂದರು.
21.08.2025 - "ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,"
ಮೊದಲನೇ ವಾಚನ: ನ್ಯಾಯಸ್ಥಾಪಕರು 11:29-39
ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಛೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು. ಇದಲ್ಲದೆ ಅವನು ಸರ್ವೇಶ್ವರಸ್ವಾಮಿಗೆ, "ತಾವು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು" ಎಂದೂ "ಅದನ್ನು ತಮಗೆ ದಹನಬಲಿದಾನ ಮಾಡುವೆನು" ಎಂದೂ ಹರಕೆಮಾಡಿದನು. ಯೆಪ್ತಾಹನು ನದಿಯನ್ನು ದಾಟಿ ಅಮ್ಮೋನಿಯರಿಗೆ ವಿರುದ್ಧ ಯುದ್ಧಕ್ಕೆ ಹೋಗಲು ಅವರನ್ನು ಸರ್ವೇಶ್ವರ ಅವನ ಕೈಗೆ ಒಪ್ಪಿಸಿದರು. ಅವನು ಅವರನ್ನು ಸೋಲಿಸಿ ಆರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳು ಮಾಡಿದನು. ಹೀಗೆ ದೊಡ್ಡ ಜಯವಾಗಿ, ಅಮ್ಮೋನಿಯರು ಇಸ್ರಯೇಲರಿಗೆ ಶರಣಾದರು. ಯೆಪ್ತಾಹನು ಮಿಚ್ಛೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ. ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, "ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾ ಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದನ್ನು ಹಿಂದೆಗೆಯಲಾಗದು," ಎಂದು ಕೂಗಿಕೊಂಡನು. ಆಕೆ ಅವನಿಗೆ, "ಅಪ್ಪಾ, ನೀನು ಬಾಯಾರೆ ಸರ್ವೇಶ್ವರನಿಗೆ ಹರಕೆ ಮಾಡಿದ ಮೇಲೆ ಅವರು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿ ತೀರಿಸಿದ್ದಾರೆ. ಆದ್ದರಿಂದನಿನ್ನ ಬಾಯಿಂದ ಬಂದುದ್ದನ್ನೇ ನೆರವೇರಿಸು," ಎಂದಳು. ಆಕೆ ಪುನಃ ತನ್ನ ತಂದೆಗೆ, "ನನ್ನ ಬಿನ್ನಹವನ್ನು ಆಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಗುಡ್ಡ ಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗಾಗಿ ಗೋಳಾಡುವೆನು," ಎಂದಳು. ಅವನು, "ಎರಡು ತಿಂಗಳ ತನಕ ಹೋಗಿ ಬಾ," ಎಂದು ಹೇಳಿ ಕಳುಹಿಸಿದನು. ಆಕೆ ಸಖಿಯರ ಸಹಿತ ಗುಡ್ಡ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗಾಗಿ ಗೋಳಾಡಿದಳು. ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.
20.08.2025 - "ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?"
ಮೊದಲನೇ ವಾಚನ: ನ್ಯಾಯಸ್ಥಾಪಕರು 9:6-15
ಶ್ಲೋಕ: ಅರಸನಿಗೆ ಹರ್ಷವಾಯಿತು ಪ್ರಭೂ, ನೀ ತೋರಿದ ಪರಾಕ್ರಮಕ್ಕಾಗಿ
18.08.2025 - "ಯುವಕ ಖಿನ್ನಮನಸ್ಕನಾಗಿ, ಅಲ್ಲಿಂದ ಹೊರಟೇ ಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು"
ಮೊದಲನೇ ವಾಚನ: ನ್ಯಾಯಸ್ಥಾಪಕರು 2:11-19
ಶ್ಲೋಕ: ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆ ತೋರುವಾಗ
ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, "ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?" ಎಂದು ಕೇಳಿದನು. ಅದಕ್ಕೆ ಅವರು, "ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಬರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಯನ್ನು ಅನುಸರಿಸು," ಎಂದರು. "ಅವು ಯಾವುವು?" ಎಂದು ಮರು ಪ್ರಶ್ನೆ ಹಾಕಿದ ಅವನಿಗೆ ಯೇಸು, "ನರ ಹತ್ಯೆ ಮಾಡಬಾರದು, ವ್ಯೆಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು, ನಿನ್ನ ತಂದೆ ತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು," ಎಂದರು. ಅದಕ್ಕೆ ಆ ಯುವಕ, "ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?" ಎಂದು ಮತ್ತೇ ಕೇಳಿದ. ಆಗ ಯೇಸು, "ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ಥಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನ ಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು," ಎಂದರು. ಇದನ್ನು ಕೇಳಿದ್ದೇ. ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇ ಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.
19.08.2025 - "ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು"
ಮೊದಲನೇ ವಾಚನ: ನ್ಯಾಯಸ್ಥಾಪಕರು 6:11-24
ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು. ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, "ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ" ಎಂದನು. ಆಗ ಗಿದ್ಯೋನನು ಅವನಿಗೆ, "ಸ್ವಾಮೀ, ಸರ್ವೇಶ್ವರ ನಮ್ಮೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಬುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಬುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ," ಎನ್ನಲು, ಸರ್ವೇಶ್ವರ ಅವರನ್ನು ದಿಟ್ಟಿಸಿ ನೋಡಿ, "ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು," ಎಂದು ಹೇಳಿದರು. ಆಗ ಗಿದ್ಯಾನನು, "ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ?, ಮನಸ್ಸೆ ಕುಲದಿಂದ ನನ್ನ ಮನೆ ಕನಿಷ್ಠವಾದುದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು," ಎಂದನು. ಸರ್ವೇಶ್ವರ ಅವನಿಗೆ, "ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ," ಎಂದರು. ಗಿದ್ಯಾನನು: "ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು. ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು," ಎಂದು ಬಿನ್ನವಿಸಲು ಅವರು, "ನೀನು ತಿರುಗಿ ಬರುವವರೆಗೆ ನಾನು ಇಇಲ್ಲೇ ಇರುವೆನು," ಎಂದರು. ಗಿದ್ಯಾನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಹತ್ತು ಕಿಲೋಗ್ರಾಂ ಹಿಟ್ಟಿನಿಂದ ಹಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು, ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಓಕ್ ಮರದ ಕೆಳಗೆ ಅವರ ಮುಂದೆ ತಂದಿಟ್ಟನು. ಆಗ ದೇವದೂತನು ಅವನಿಗೆ, "ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ" ಎನ್ನಲು ಅವನು ಹಾಗೆಯೇ ಮಾಡಿದನು. ಆನಂತರ ಸರ್ವೇಶ್ವರನ ದೂತನು ತನ್ನ ಕೈ ಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು. ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, "ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಡಿಬಿಟ್ಟೆನಲ್ಲಾ"ಎಂದು ಕೂಗಿದನು. ಆದರೆ ಸರ್ವೇಶ್ವರನು ಅವನಿಗೆ, "ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ" ಎಂದನು. ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ "ಯೆಹೋವ ಷಾಲೋಮ್"ಎಂದು ಹೆಸರಿಟ್ಟನು.
ಶ್ಲೋಕ: ಭಯಭಕ್ತಿಯುಳ್ಳವರಿಗಾತ ರಕ್ಷಣೆ ಸನ್ನಿಹಿತ