ಮೊದಲನೆಯ ವಾಚನ : ಪ್ರವಾದಿ ಯೆರೆಮೀಯನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ: 1:4-8
- ಪ್ರಭುವಿನ ವಾಕ್ಯ
ಕೀರ್ತನೆ 117:1-2 v. ಮಾರ್ಕ 16:15.
ಶ್ಲೋಕ: ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.
1. ಸ್ತುತಿಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ|
ಆತನನ್ನು
ಹೊಗಳಿ ಹಾಡಿ ಸರ್ವ ಜನಾಂಗಗಳೇ||
ಶ್ಲೋಕ
2. ನಮ್ಮ
ಮೇಲೆ ಆತನಿಗಿರುವ ಪ್ರೀತಿ ಅಚಲ|
ಆತನ
ಸತ್ಯಪರತೆ ಇರುವುದು ಅನಂತ ಕಾಲ||
ಶ್ಲೋಕ
ಎರಡನೆಯ ವಾಚನ :ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ಎರಡನೆಯ ವಾಚನ 9:16-19,22-23
ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ! ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದುದರಿಂದ ಕರ್ತವ್ಯಬದ್ದನಾಗಿ ಮಾಡುತ್ತಿದ್ದೇನೆ. ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಲಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ. ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ. ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ. ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ.
ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ
ಘೋಷಣೆ :ಮತ್ತಾಯ 28:19,20
ಅಲ್ಲೆಲೂಯ, ಅಲ್ಲೆಲೂಯ!
ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ | ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ ||
ಅಲ್ಲೆಲೂಯ!
ಶುಭಸಂದೇಶ : ಮಾರ್ಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 16:15-20
-ಪ್ರಭುವಿನ ಶುಭಸಂದೇಶ
No comments:
Post a Comment