12.02.2026 - “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,”

 ಮೊದಲನೇ ವಾಚನ: 1 ಅರಸುಗಳು 11:4-13


ಸೊಲೊಮೋನನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯ ದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ. ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣ ಮನಸ್ಸಿನಿಂದ ಸರ್ವೇಶ್ವರನನ್ನು ಸೇವೆ ಮಾಡಿದಂತೆ ಅವನು ಸೇವೆ ಮಾಡಲಿಲ್ಲ. ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾ ಸ್ಥಳಗಳನ್ನು ಏರ್ಪಡಿಸಿದನು. ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾ ಸ್ಥಳಗಳನ್ನು ಏರ್ಪಡಿಸಿದನು. ಈ ಪ್ರಕಾರ ಅನ್ಯ ಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಾರತಿ ಎತ್ತುವುದಕ್ಕೂ ಬಲಿ ಅರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು. ಸೊಲೊಮೋನನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರ ಎರಡು ಸಾರಿ ಕಾಣಿಸಿಕೊಂಡು, ಅನ್ಯ ದೇವತೆಗಳನ್ನು ಪೂಜಿಸಲೇಬಾರದೆಂದು ಆಜ್ಞಾಪಿಸಿದ್ದರೂ ಅವನು ಅವರ ಆಜ್ಞೆಗಳನ್ನು ಮೀರಿದನು. ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ವಿೂರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು. ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.

ಕೀರ್ತನೆ: 106:3-4, 35-36, 37, 40

ಶ್ಲೋಕ: ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ


ಶ್ಲೋಕ:  ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ"

1.  ನ್ಯಾಯದಂತೆ ನಡೆಯುವವರು ಧನ್ಯರು|
ಅವಿರತವಾಗಿ ನೀತಿವಂತರು ಧನ್ಯರು||
ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ|
ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ||
ಶ್ಲೋಕ

2.  ಅನ್ಯಜನರೊಡನವರು ಕಲೆತು ಬೆರೆತುಹೋದರು|
ಅವರ ದುರಾಚಾರಗಳನ್ನೂ ಕಲಿತುಕೊಂಡರು||
ಪೂಜೆಮಾಡಿದರು ಆ ಜನರ ವಿಗ್ರಹಗಳಿಗೆ|
ಉರುಲಾದವು ಆ ವಿಗ್ರಹಗಳೇ ಅವರಿಗೆ||
ಶ್ಲೋಕ

3.  ತಮ್ಮ ಪುತ್ರಪುತ್ರಿಯರನೇ ಅರ್ಪಿಸಿದರು|
ದೆವ್ವಭೂತಗಳಿಗೆ ಅವರು ಬಲಿಕೊಟ್ಟರು||
ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ|
ತನ್ಯವರಾ ನಡತೆ ಅಸಹ್ಯವಾಯಿತು ಆತನಿಗೆ||
ಶ್ಲೋಕ

🌻✝️🌻

ಘೋಷಣೆ
ಲೂಕ 8:15

ಅಲ್ಲೆಲೂಯ, ಅಲ್ಲೆಲೂಯ!
ಸಜೀವವನ್ನು ಕೊಡುವಂಥದ್ದು ದೇವರ ಆತ್ಮವೇ | ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ ||
ಅಲ್ಲೆಲೂಯ!


ಶುಭಸಂದೇಶ: ಮಾರ್ಕ 7:24-30


ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ. ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು. ಆಕೆಯ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು. ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅದಕ್ಕೆ ಆಕೆ, “ಅದು ನಿಜ ಸ್ವಾವಿೂ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು. ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು. ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟು ಹೋಗಿತ್ತು. 

No comments:

Post a Comment

12.02.2026 - “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,”

  ಮೊದಲನೇ ವಾಚನ: 1 ಅರಸುಗಳು 11:4-13 ಸೊಲೊಮೋನನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯ ದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ...