ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು. ಇದನ್ನು ಕೇಳಿದ ಶಿಷ್ಯರು, “ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ” ಎಂದು ಚರ್ಚಿಸತೊಡಗಿದರು. ಆ ಚರ್ಚೆಯನ್ನು ಯೇಸು ಗಮನಿಸಿ “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ? ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ? ನಾನು ಐದು ರೊಟ್ಟಿಗಳಿಂದ ಐದುಸಾವಿರ ಜನರನ್ನು ತೃಪ್ತಿಪಡಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ಒಟ್ಟುಗೂಡಿಸಿದಿರಿ? ನಿಮಗೆ ಜ್ಞಾಪಕವಿಲ್ಲವೇ?” ಎಂದು ಕೇಳಿದರು. “ಹನ್ನೆರಡು ಬುಟ್ಟಿಗಳು” ಎಂದು ಅವರು ಉತ್ತರವಿತ್ತರು. “ಅಲ್ಲದೆ ನಾನು ಏಳು ರೊಟ್ಟಿಗಳಿಂದ ನಾಲ್ಕುಸಾವಿರ ಜನರನ್ನು ತೃಪ್ತಿಪಡಿಸಿದಾಗ ಎಷ್ಟು ಕುಕ್ಕೆತುಂಬಾ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಿರಿ?” ಎಂದು ಪುನಃ ಅವರನ್ನು ಕೇಳಲು, “ಏಳು ಕುಕ್ಕೆಗಳು,” ಎಂದರು. ಆಗ ಯೇಸು, “ಇಷ್ಟಾದರೂ ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.
17.02.2026
ಮೊದಲನೇ ವಾಚನ: ಯಕೋಬ 1:12-18
ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ. ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ. ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ. ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ. ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ. ಪ್ರಿಯ ಸಹೋದರರೇ, ಮೋಸಹೋಗಬೇಡಿ. ಎಲ್ಲಾ ಯೋಗ್ಯ ವರಗಳೂ ಉತ್ತಮಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ. ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.
ಕೀರ್ತನೆ
94: 12-13, 14-15, 18-19, v. 12
ಶ್ಲೋಕ: ಪ್ರಭೂ, ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ
1. ಪ್ರಭೂ, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ|
ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ|
ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ||
ಶ್ಲೋಕ
2. ತಳ್ಳಿಬಿಡಲು ಪ್ರಭು ತನ್ನ ಜನರನ್ನು ಕೈಬಿಡನವನು|
ತನ್ನ ಸ್ವಕೀಯರನು ನ್ಯಾಯತೀರ್ಪು ಮರಳಿ ತಿರುಗುವುದು|
ನೀತಿಯತ್ತ ನೇರ ಮನಸ್ಕರೆಲ್ಲ ಮಾಡುವರು ಅದನು ಸಮರ್ಥ||
ಶ್ಲೋಕ
3. ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ|
ನಿನ್ನ ಅಚಲ ಪ್ರೀತಿ, ಪ್ರಭೂ, ನೆರವಾಯಿತೆನಗೆ||
ನನ್ನ ಅಂತರಂಗದಲಿ ಏಳಲು ಅಂದೋಲನ|
ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ||
ಶ್ಲೋಕ
ಘೋಷಣೆ
(2 ಕೊರಿಂಥಿ 5:19)
ಅಲ್ಲೆಲೂಯ, ಅಲ್ಲೆಲೂಯ!
ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ | ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂದಾನಗೊಳಿಸುತ್ತಾರೆ ||
ಅಲ್ಲೆಲೂಯ!
ಶುಭಸಂದೇಶ: ಮಾರ್ಕ 8:14-21
Subscribe to:
Post Comments (Atom)
02.09.2026 - ನೀವು ದೇವರ ಪುತ್ರ
ಮೊದಲನೇ ವಾಚನ: 1 ಕೊರಿಂಥಿಯರಿಗೆ 3:1-9 ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ : ಪ್ರೇಷಿತರ ಕಾರ್ಯಕಲಾಪಗಳು : 10:24-35 ಮರುದಿವಸ ಅವನು ಸೆಜರೇಯವನ್ನು ತಲುಪಿದನು . ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊ...


No comments:
Post a Comment