ಮೊದಲನೇ ವಾಚನ: 2 ಪೇತ್ರನು1:2-7
ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ! ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ. ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ. ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ. ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ. ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.
ಕೀರ್ತನೆ: 91:1-2, 14-15, 15-16
ಶ್ಲೋಕ: ಪ್ರಭುವೇ ದುರ್ಗವೂ ನಾ ನಂಬಿದ ದೇವನೂ
1. ಪರಾತ್ಪರ ಪ್ರಭುವಿನ ಮೊರೆ ಹೊಕ್ಕಿರುವವನು|
ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನು||
ನಾನಾತನಿಗೆ 'ನೀನೇ ನನ್ನ ರಕ್ಷಕನೂ ದುರ್ಗವೂ|
ನಾ ನಂಬಿದ ದೇವನೂ' ಎನ್ನುವೆನು||
ಶ್ಲೋಕ
2. ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು|
ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು|
ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು||
ಶ್ಲೋಕ
3. ಸಂಕಟದೊಳು ಅವನ ಸಂಗಡವಿರುವೆನು|
ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು|
ನಾನು ನೀಡುವ ಮುಕ್ತಿಯವನಿಗೆ ಮನಗಾಣಿಸುವೆನು||
ಶ್ಲೋಕ
ಘೋಷಣೆ: ಕೀರ್ತನೆ 119: 18
ಅಲ್ಲೆಲೂಯ, ಅಲ್ಲೆಲೂಯ!
ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ | ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ ||
ಅಲ್ಲೆಲೂಯ!
ಶುಭಸಂದೇಶ: ಮಾರ್ಕ 12:1-12


No comments:
Post a Comment