ಮೊದಲನೇ ವಾಚನ ವಿಮೋಚನಕಾಂಡ 34:4-6, 8-9
ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು. ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು. ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು, ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ, ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.
ಕೀರ್ತನೆ: 1:29-34
ಶ್ಲೋಕ: ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು
1. ನಮ್ಮ ಪೂರ್ವಜರ ದೇವರಾದ ಸರ್ವೇಶ್ವರಾ|
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು||
ಮಹಿಮಾಯುತವಾದ ನಿಮ್ಮ ನಾಮ ಸ್ತುತ್ಯಾರ್ಹವಾದುದು|
ಪರಮ ಪೂಜ್ಯವಾದುದು ಎಂದೆಂದಿಗೂ ಘನತರವಾದುದು||
ಶ್ಲೋಕ
2. ಪರಮ ವೈಭವದಿಂದ ಕೂಡಿದ ಮಂದಿರದಲಿ|
ನೀವು ಸ್ತುತಿಸ್ತೋತ್ರಕ್ಕೆ ಪಾತ್ರರು|
ನೀವು ಪರಮಪೂಜ್ಯರು ಎಂದೆಂದಿಗೂ ಮಹೋನ್ನತರು||
ಸಾಗರಾದಿಗಳನ್ನು ಸಮೀಕ್ಷಿಸುವ ನಿಮಗೆ ಸ್ತೋತ್ರ|
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು||
ಶ್ಲೋಕ
3. ನಿಮ್ಮ ಸಾಮ್ರಾಜ್ಯದ ಸಿಂಹಾಸನದ ಮೇಲೆ|
ಮಂಡಿಸಿರುವ ನಿಮಗೆ ಸ್ತೋತ್ರ||
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು|
ಗಗನ ಮಂಡಲದಲ್ಲಿ ಸ್ತೋತ್ರಪಾತ್ರರು|
ನೀವು ಸ್ತುತ್ಯರು, ಎಂದೆಂದಿಗೂ ಮಹಿಮಾನಿತ್ವರು||
ಶ್ಲೋಕ
ಎರಡನೇ ವಾಚನ: 2 ಕೊರಿಂಥಿಯರಿಗೆ 13:11-13
ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನು ಒಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ಶುಭಾಶಯಗಳನ್ನು ಕೋರಿದ್ದಾರೆ. ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!
ಶುಭಸಂದೇಶ: ಯೊವಾನ್ನ 3:16-18



No comments:
Post a Comment