ಮೊದಲನೇ ವಾಚನ: 2 ತಿಮೊಥೇಯನಿಗೆ 2:8-15
ಕೀರ್ತನೆ: 25:4-5, 8-9, 10, 14
ಶ್ಲೋಕ: ನಿನ್ನ ಮಾರ್ಗವನು ಪ್ರಭೂ, ನನಗೆ ತೋರಿಸು
ಶುಭಸಂದೇಶ: ಮಾರ್ಕ 12:28-34
ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು. ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನ ಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, "ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ," ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗಳ್ಳಲಿಲ್ಲ.


No comments:
Post a Comment