22.05.10 - ಶಿಷ್ಯನ ಸಾಕ್ಷಿ

ಸಂತ ಯೊವಾನ್ನನ ಶುಭ ಸಂದೇಶ - 21:20-25

"ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶ: ಲೋಕವೇ ಹಿಡಿಸಲಾರದೆಂದು ನೆನೆಸುತ್ತೇನೆ."

ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು( ಭೋಜನ ಸಮಯದಲ್ಲಿ ಪಕ್ಕದಲ್ಲೇ ಒರಗಿ," ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?" ಎಂದು ಕೇಳಿದವನು ಅವನು) ಇವನ್ನನು ಕಂಡು ಪೇತ್ರನು," ಪ್ರಭೂ ಇವನ ವಿಷಯವೇನು?" ಎಂದು ಯೇಸುವನ್ನು ಕೇಳಿದನು. ಅದಕ್ಕೆ ಯೇಸು," ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂದು ನನ್ನ ಬಯಕೆ: ಆದರೆ ಅದರಿಂದ ನಿನಗೇನಾಗಬೇಕು? ನೀನಂತೂ ನನ್ನನ್ನು ಹಿಂಬಾಲಿಸಿ ಬಾ," ಎಂದರು. ಇದರಿಂದಾಗಿ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು.ಯೇಸು,’ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದ ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು? ಎಂದು ಹೇಳಿದರೆ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿಸತ್ಯವಾದುದೆಂದು ನಾವು ಬಲ್ಲೆವು.

ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶ: ಲೋಕವೇ ಹಿಡಿಸಲಾರದೆಂದು ನೆನೆಸುತ್ತೇನೆ.

21.05.10 - ನನ್ನ ಕುರಿಗಳನ್ನು ಮೇಯಿಸು

ಸಂತ ಯೊವಾನ್ನನ ಶುಭ ಸಂದೇಶ - 21:15-19

"ವೃದ್ಧಾಪ್ಯದಲ್ಲಾದರೋ ನೀನು ಕೈ ಚಾಚುವೆ.ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು"

ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ,"ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ"? ಎಂದು ಕೇಳಿದರು. ಅದಕ್ಕೆ ಪೇತ್ರನು, ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ," ಎಂದನು. ಯೇಸು ಅವನಿಗೆ, "ನನ್ನ ಕುರಿಮರಿಗಳನ್ನು ಮೇಯಿಸು," ಎಂದರು. ಯೇಸು
ಎರಡನೆಯ ಬಾರಿ, "ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ? ಎಂದು ಕೇಳಲು, "ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ," ಎಂದು ಮರು ನುಡಿದನು. ಯೇಸು ಅವನಿಗೆ, " ನನ್ನ ಕುರಿಗಳನ್ನು ಕಾಯಿ," ಎಂದರು. ಮೂರನೇ ಬಾರಿಯೂ ಯೇಸು, "ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ? ಎಂದು ಕೇಳಿದರು. ’ನೀನು ನನ್ನನ್ನು ಪ್ರೀತಿಸುತ್ತೀಯಾ?’ ಎಂದು ಯೇಸು ಮೂರನೇ ಬಾರಿ ಕೇಳಿದ್ದನು ಕಂಡು ಪೇತ್ರ ನೊಂದುಕೊಂಡನು." ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ  ನಿಮಗೆ ತಿಳಿದಿದೆ," ಎಂದು ಹೇಳಿದನು. ಅದಕ್ಕೆ ಯೇಸು,"ನನ್ನ ಕುರಿಗಳನ್ನು ಮೇಯಿಸು"; ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈ ಚಾಚುವೆ.ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು." ಎಂದು ನುಡಿದರು.

ಪೇತ್ರನು ಎಂಥಾ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, "ನೀನು ನನ್ನನ್ನು ಹಿಂಬಾಲಿಸಿ ಬಾ," ಎಂದರು.

20.05.10 - ಪಿತನೇ, ಇವರೆಲ್ಲಾ ಒಂದಾಗಿರಲಿ

ಸಂತ ಯೊವಾನ್ನನ ಶುಭ ಸಂದೇಶ - 17:20-26

"ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಇವರಲ್ಲಿ ಇರುವಂತಾಗುವುದು"

ಯೇಸುಸ್ವಾಮಿ ಆಕಾಶದತ್ತ ಕಣ್ಣೆತ್ತಿ ನೋಡಿ ಹೀಗೆಂದು ಪ್ರಾರ್ಥಿಸಿದರು "ಇವರಿಗಾಗಿ ಮಾತ್ರವಲ್ಲ,ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ. ಪಿತನೇ, ಇವರೆಲ್ಲಾ ಒಂದಾಗಿರಲಿ.ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ.ಹೀಗೆ ನನ್ನನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀವು ನನ್ನಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ.ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದು ಲೋಕಕ್ಕೆ ಮನವರಿಕೆ ಆಗುವುದು.

ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ.ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ. ನಿತ್ಯ ಸ್ವರೂಪಿಯಾದ ಪಿತನೇ,ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ.ಆದರೆ ನಾನು ಅರಿತಿದ್ದೇನೆ. ನನ್ನನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ;ಇನ್ನೂ ತಿಳಿಯಪಡಿಸುತ್ತೇನೆ.ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಇವರಲ್ಲಿ ಇರುವಂತಾಗುವುದು."

19.05.10 - ಲೋಕಕ್ಕೆ ಇವರ ಮೇಲೆ ದ್ವೇಶವಿದೆ

ಸಂತ ಯೊವಾನ್ನನ ಶುಭ ಸಂದೇಶ - 17:11-19

"ಸತ್ಯಸಂಧರಾಗಿ ಇವರನ್ನು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ"

ಯೇಸುಸ್ವಾಮಿ ಆಕಾಶದತ್ತ ಕಣ್ಣೆತ್ತಿ ನೋಡಿ ಹೀಗೆಂದು ಪ್ರಾರ್ಥಿಸಿದರು."ಪವಿತ್ರ ಪಿತನೇ, ನಾವು ಒಂದಾಗಿರುವಂತೆ, ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ. ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರ ಗ್ರಂಥದ ಮಾತು ನೆರೆವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ. ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಶವಿದೆ. ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ. ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆ ಇವರೂ ಈ ಲೋಕಕ್ಕೆ ಸೇರಿದವರಲ್ಲ. ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ. ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನೂ ಇವರನ್ನು ಲೋಕಕ್ಕೆ ಕಳಿಸಿದ್ದೇನೆ.ಸತ್ಯಸಂಧರಾಗಿ ಇವರನ್ನು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.

18.05.10 - ನಿರೀಕ್ಷಿಸಿದ ಗಳಿಗೆ

ಸಂತ ಯೊವಾನ್ನನ ಶುಭ ಸಂದೇಶ - 17:1-11

"ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ"

ಯೇಸುಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, "ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ.ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ನರಮಾನವರೆಲ್ಲರ  ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯ ಜೀವವನ್ನು ಆತನು ನೀಡುವನು. ಏಕೈಕ ನಿಜ ದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸುಕ್ರಿಸ್ತನನ್ನೂ ಅರಿತಿಕೊಳ್ಳುವುದೇ ನಿತ್ಯ ಜೀವ.ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.

ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಲೋಕದಿಂದ ಆರಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಡೆದಿದ್ದಾರೆ. ನೀವು ನನಗೆ ಕೊಟ್ಟಿದೆಲ್ಲವೂ ನಿಅವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ. ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪದಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದದು ನಿಜವೆಂದು ಅರಿತುಕೊಂಡಿದ್ದಾರೆ.ನನ್ನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.ನಾನು ಇವರಿಗಾಗಿ, ಲೋಕಕ್ಕಾಗಿ ಅಲ್ಲ.ನೀವೆ ನನಗೆ ಕೊಟ್ಟಿರುವವರಿಗಾಗಿ ಪ್ರಾರ್ಥಿಸುತ್ತೇನೆ. ಏಕೆಂದರೆ, ಇವರು ನಿಮ್ಮವರು:ಇವರಿಂದ ನಮಗೆ ಮಹಿಮೆ ಉಂಟಾಗಿದೆ.ನನ್ನದೆಲ್ಲವೂ ನಿಮ್ಮದೇ: ನಿಮ್ಮದೆಲ್ಲವೂ ನನ್ನದೇ.

 ನಾನಿನ್ನು ಲೋಕದಲ್ಲಿ ಇರುವುದಿಲ್ಲ.ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾನು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ  ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.

17.05.2010 - ಲೋಕದಲ್ಲಿ ನಿಮಗೆ ಕಷ್ಟ ಸಂಕಟಗಳು ತಪ್ಪಿದ್ದಲ್ಲ

ಸಂತ ಯೊವಾನ್ನನು ಬರೆದ ಶುಭಸಂದೇಶ - 16:29-33


"ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ."

ಶಿಷ್ಯರು ಯೇಸುವಿಗೆ, " ಈಗ ನೀವು ಸಾಮತಿಗಳನ್ನು ಬಳಸದೆ ಸ್ಫಷ್ಟವಾಗಿಯೇ ಮಾತನಾಡುತ್ತಿದ್ದೀರಿ. ನೀವು ಎಲ್ಲವನ್ನೂ ಬಲ್ಲವರು.
ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದ ನಾವು ವಿಶ್ವಾಸಿಸುತ್ತೇವೆ," ಎಂದರು. ಆಗ ಯೇಸುಸ್ವಾಮಿ, "ಈಗ ನೀವು ವಿಶ್ವಾಸಿಸುತ್ತೀರೋ? ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದುರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ನಿಮಗೆ  ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ . ನಾನು ಲೋಕವನ್ನು ಜಯಿಸಿದ್ದೇನೆ," ಎಂದು ಹೇಳಿದರು

04.05.2010 - "ನಾನು ಶಾಂತಿ ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ;ನನ್ನ ಶಾಂತಿ ಸಮಧಾನವನ್ನು ನಿಮಗೆ ಕೊಡುತ್ತೇನೆ"


ಸಂತ ಯೊವಾನ್ನನು ಬರೆದ ಶುಭ ಸಂದೇಶದಿಂದ ವಾಚನ - 21:1-14

"ಪಿತ ನನಗಿಂತಲೂ ಶ್ರೇಷ್ಠರು"

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಶಾಂತಿ ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ;ನನ್ನ ಶಾಂತಿ ಸಮಧಾನವನ್ನು ನಿಮಗೆ ಕೊಡುತ್ತೇನೆ.ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ.ನೀವು ಹೃದಯದಲ್ಲಿ ಕಳವಳಗೊಳ್ಳದಿರಿ,ಭಯಪಡಬೇಡಿ.ನಾನು ಹೊರಟು ಹೋಗುತ್ತೇನೆಂದೂ, ಮತ್ತೆ ನಿಮ್ಮ ಬಳಿಗೆ ಬರುವೆನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು. ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ.ಇಹದ ಲೋಕಾಧಿಪತಿ ಬರುವ ಸಮಯವಾಯಿತು.ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು" ಎಂದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...