"ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ,ಉದ್ಧಾರಕ್ಕೆ,"
ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖರಾಗಿ ಹೊರಡಲು ನಿರ್ಧರಿಸಿದರು. ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು. ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ. ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ,"ಪ್ರಭು, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞೆ ಮಾಡಬಹುದಲ್ಲವೇ?" ಎಂದರು.ಯೇಸು ಅವರ ಕಡೆ ತಿರುಗಿ," ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ,ಉದ್ಧಾರಕ್ಕೆ," ಎಂದು ಅವರನ್ನು ಖಂಡಿಸಿದರು. ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.