9-11-2010

ಸಂತ ಯೊವಾನ್ನನ ಶುಭ ಸಂದೇಶ - 2: 13-22

ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು ದನ ಕುರಿಗಳನ್ನು ಓಡಿಸಿದರು. ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಗಿ ಮಾಡಬೇಡಿ,’ ಎಂದು ಹೇಳಿದರು. ’ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.

ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸವಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅಚನ್ನು ಪುನ: ಎಬ್ಬಿಸುವೆನು,” ಎಂದು ಉತ್ತರಕೊಟ್ಟರು. ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು. ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು. ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾರಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.

8-11-2010 - ವಿಶ್ವಾಸ

ಸಂತ ಲೂಕನ ಶುಭ ಸಂದೇಶ - 17:  1-6

"ಪಾಪಪ್ರಚೋದನೆಗಳು ಬಂದೇ ಬರುತ್ತವೆಆದರೆ ಅವು ಯಾರಿಂದ ಬರುತ್ತವೋ  ಅವನಿಗೆ ಧಿಕ್ಕಾರ"

ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ! ಅಂಥವನು ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ, ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು. ನೀವಾದರೋ ಎಚ್ಚರಿಕೆಯಿಂದಿರಿ!

ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು. ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ದ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ’ಕ್ಷಮಿಸು’, ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,” ಎಂದರುಸ್ವಾಮಿ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು. ಆಗ ಯೇಸುಸ್ವಾಮಿ, “ಸಾಸಿವೆ ಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಅತ್ತಿಮರಕ್ಕೆ, ’ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.

6-11-2010 - ಪ್ರಾಮಾಣಿಕತೆ

ಸಂತ ಲೂಕನ ಶುಭ ಸಂಧೇಶ - 16: 9-15

"ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ"

ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು. ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹ ಮಾಡುತ್ತಾನೆ. ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು? ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?

“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.

ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು. ಅದಕ್ಕೆ ಯೇಸು,  “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,’ ಎಂದರು.

5-11-2010 - ಲೌಕಿಕತೆ

ಸಂತ ಲೂಕನ ಶುಭ ಸಂದೇಶ - 16: 1-8

"ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು."

ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, ’ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ. ಆಗ ಆ ಮೇಸ್ತ್ರಿ, ’ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.

ಮರುಕ್ಷಣ, ’ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ’ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ. ಅವನು, ’ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ ’ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ. ಬಳಿಕ ಇನ್ನೊಬ್ಬನನ್ನು ಕರೆದು, ’ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ’ನೂರು ಖಂಡುಗ ಗೋದಿ’ ಎಂದಾಗ, ’ಇಗೋ ನಿನ್ನ ಪತ್ರ, “ಎಂಬತ್ತು,” ಎಂದು ಬರೆ’, ಎಂದ. “ಈ ಅಪ್ರಾಮಾಣಿಕ  ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.  

04.11.2010 - ಕಾಣದೆ ಹೋದ ಕುರಿ

ಸಂತ ಲೂಕನ ಶುಭ ಸಂಧೇಶ - 15: 1-10

"ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ"

ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳು ಬರುತ್ತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದರೆ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲುಗಾವಲಿನಲ್ಲೇ ಬಿಟ್ಟು ಕಾಣದೆ ಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ’ಕೆಳೆದು ಹೋಗಿದ್ದ ಕುರಿ ಸಿಕ್ಕಿತ್ತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೇ? “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ 
ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

“ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದು ಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ? ಅದು ಸಿಕ್ಕಿದಾಗ ತನ್ನ ಗೆಳೆತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ’ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ?  “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.

03.11.2010 - ಪರಿತ್ಯಾಗ

ಸಂತ ಲೂಕನ ಶುಭ ಸಂಧೇಶ - 14: 25-33


"ನಿಮ್ಮಲ್ಲಿ ಯಾವನುತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ"



ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: “ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಚಿಸಿದರೆ, ಕೆಲಸವನ್ನು ಮುಗಿಸಲು  ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ’ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ದ ಯುದ್ದಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತುಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ."

1-11-2010 - ವಿನಯಶೀಲರು ಭಾಗ್ಯವಂತರು;

ಸಂತ ಮತ್ತಾಯನ ಶುಭ ಸಂಧೇಶ - 5: 1-12

ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು.

ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು.
“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು;
 ಸ್ವರ್ಗಸಾಮ್ರಾಜ್ಯ ಅವರದು.
ದು:ಖಿಗಳು ಭಾಗ್ಯವಂತರು;
ದೇವರು ಅವರನ್ನು ಸಂತೈಸುವರು.
ವಿನಯಶೀಲರು ಭಾಗ್ಯವಂತರು;
ದೇವರ ವಾಗ್ದತ್ತ ನಾಡಿಗೆ ಭಾಧ್ಯಸ್ಥರು ಅವರು.
ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು;
ದೇವರು ಅವರಿಗೆ ತೃಪ್ತಿಯನ್ನೀಯುವರು.
ದಯಾವಂತರು ಭಾಗ್ಯವಂತರು;
ದೇವರ ದಯೆ ಅವರಿಗೆ ದೊರಕುವುದು.
ನಿರ್ಮಲ ಹೃದಯಿಗಳು ಭಾಗ್ಯವಂತರು;
ಅವರು ದೇವರನ್ನು ಕಾಣುವರು.
ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು;
ಅವರು ದೇವರ ಮಕ್ಕಳೆನಿಸಿಕೊಳ್ಳುವರು.
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು;
ಸ್ವರ್ಗಸಾಮ್ರಾಜ್ಯ ಅವರದು.
“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...