ಮೊದಲನೇ ವಾಚನ: ರೋಮನರಿಗೆ 3:21-30
19.10.23 - "ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ"
18.10.23
ಆ ಕಾಲದಲ್ಲಿ ಯೇಸು ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, " ಬೆಳೆಯೇನೋ ಹೇರಳವಾಗಿದೆ, ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ' ಮನೆಗೆ ಶಾಂತಿ, ' ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ' ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ, ' ಎಂದು ತಿಳಿಸಿರಿ.
18.10.23 - ಸಂತ ಸ್ಮರಣೆ - ಸಂತ ಲೂಕ - St. Luke
ಹೊಸ ಒಡಂಬಡಿಕೆಯ ಬಹುದೊಡ್ಡ ಭಾಗವನ್ನು ಬರೆದವನು ಸಂತ ಲೂಕ. "ನಮ್ಮ ಪ್ರಿಯ ವೈದ್ಯನಾದ ಲೂಕ ಎಂಬ ಸಂತ ಪೌಲನ ಮಾತಿನ ಮೂಲಕ ಲೂಕನ ಪರಿಚಯವಾಗುತ್ತದೆ.
(ಕೊಲೊಸ್ಸೆ 04:14). ಲೂಕ ಗ್ರೀಕ್ ಮೂಲದವ, ಅನ್ಯಮತಸ್ಥನಾಗಿದ್ದ ಎನ್ನಲಾಗಿದೆ. ಅಂತಿಯೋಕ್ಯ ಅವನ ಜನ್ಮಸ್ಥಳ ಎಂದೂ ಹೇಳಲಾಗಿದೆ. ಸಂತ ಪೌಲ ತನ್ನ ಎರಡನೇ ಧರ್ಮಪ್ರಸಾರ ಪ್ರಯಾಣದಲ್ಲಿ ಅನಾರೋಗ್ಯದ ಸಂದರ್ಭದಲ್ಲಿ ಈ ವೈದ್ಯನನ್ನು ಬೇಟಿಯಾದ. ಈ ಬೇಟಿಯ ನಂತರ ಲೂಕನನ್ನು 51ರಲ್ಲಿ ಟ್ರೊವಾಸ್ ಎಂಬ ಸ್ಥಳದಲ್ಲಿ ಕ್ರೈಸ್ತಧರ್ಮಕ್ಕೆ ಮಾನಸಾಂತ ರಿಸಿದ ಎಂಬ ನಂಬಿಕೆಯಿದೆ.
ಪ್ರೇಷಿತರ ಕಾರ್ಯಕಲಾಪಗಳಲ್ಲಿ ಉಲ್ಲೇಖವಾಗಿರುವ ಪೌಲನ ಎರಡನೇ ಧರ್ಮಪ್ರಸಾರ ಪ್ರಯಾಣದಲ್ಲಿ ಲೂಕನು ಅವನನ್ನು ಭೇಟಿಯಾಗಿ ಅವರೊಂದಿಗೆ ಫಿಲಿಪ್ಪಿಯಲ್ಲಿ ಕೆಲವು ವರ್ಷ ಇರುತ್ತಾನೆ. ಪೌಲ ಮೂರನೇ ಧರ್ಮಪ್ರಸಾರ ಪ್ರಯಾಣ ಆರಂಭಿಸಿದಾಗ ಅವರೊಂದಿಗೆ ಜೆರುಸಲೇಮಿಗೆ ಬಂದು ಸೆಜರೀಯದಲ್ಲಿ ಪೌಲ್ ಬಂಧನ ಕ್ಕೊಳಗಾದಾಗ ಅವನೊಂದಿಗೆ ಇರುತ್ತಾನೆ. ಈ ಎರಡು ವರ್ಷಗಳ ಕಾಲದಲ್ಲಿ, ಯೇಸುವನ್ನು ಕಂಡಿದ್ದ, ಅವರೊಂದಿಗೆ ಒಡನಾಡಿದ್ದ ಜನರನ್ನು ಕಂಡು, ಅವರನ್ನು ಸಂದರ್ಶಿಸಿ ಏಸುವಿನ ಬಗ್ಗೆ ಸಾಕಷ್ಟು ಮಾಹಿತಿ ಕಲೆಹಾಕಿರಬೇಕು. ಪೌಲ್ ರೋಮ್ ಗೆ ಬೆಳೆಸಿದ ಅಪಾಯಕಾರಿ ಪ್ರಯಾಣದಲ್ಲೂ ಲೂಕ ಅವನೊಂದಿಗೆ ಇರುತ್ತಾನೆ. ಕ್ರಿ.ಶ. 61 ರಲ್ಲಿ ಪೌಲ ರೋಮ್ನಲ್ಲಿ ಬಂಧಿತನಾದಾಗಲೂ ಎಲ್ಲರೂ ಪೌಲನನ್ನು ತೊರೆದಾಗ ಲೂಕ ಮಾತ್ರ ಅವನನ್ನು ಬಿಟ್ಟು ಹೋಗುವುದಿಲ್ಲ. "ಲೂಕ ಮಾತ್ರ ನನ್ನ ಜೊತೆಯಿದ್ದಾನೆ ಎಂದು ಪೌಲನೇ ಹೇಳುತ್ತಾನೆ" ಎಂದು ಪೌಲನೇ ಹೇಳುತ್ತಾನೆ. (2ತಿಮೋಥಿ4:11).
ಲೂಕ ಅನ್ಯಮತಸ್ಥನಾಗಿದ್ದರಿಂದಲೋ ಏನೋ ಅನ್ಯಜನರೊಂದಿಗೆ ದುಡಿದು ಪೌಲನನ್ನು ಸೇರಿಕೊಂಡಿರಬೇಕು. ತನ್ನ ಶುಭಸಂದೇಶವನ್ನು ಅನ್ಯಜನರಿಗೆ ಗ್ರೀಕ್ ಭಾಷೆಯಲ್ಲಿ ಉತ್ತಮ ಶೈಲಿ ಮತ್ತು ನಾಜೂಕಾದ ರೀತಿಯಲ್ಲಿ ಬರೆಯುತ್ತಾರೆ. ಈತ ಪೌಲನಿಂದ ಎಷ್ಟು ಪ್ರಭಾವಗೊಂಡಿದ್ದ ಎಂದರೆ ಸಂತ ಜೆರೋಂ ಮತ್ತು ಜಾನ್ ಕ್ರಿಸಾಸ್ಟಮ್ ಲೂಕನ ಶುಭ ಸಂದೇಶವನ್ನು 'ಸಂತ ಪೌಲರ ಶುಭ ಸಂದೇಶ' ಎಂದು ಕರೆಯುತ್ತಾರೆ.
ಲೂಕ ಶುಭ ಸಂದೇಶ ಬರೆಯುವಷ್ಟರಲ್ಲಿ ಮತ್ತಾಯ ಮತ್ತು ಮಾರ್ಕನ ಶುಭಸಂದೇಶ ಈಗಾಗಲೇ ಚಾಲ್ತಿಯಲ್ಲಿತ್ತು. ಹಲವು ಜನರ ಅನುಭವ, ಮಾತೆ ಮೇರಿಯದೇ ಅನುಭವ ಈ ಶುಭಸಂದೇಶದಲ್ಲಿದೆ ಎನ್ನಲಾಗಿದೆ. ಸಂತ ಲೂಕ ಮಾತೆ ಮೇರಿಯ ಭಾವಚಿತ್ರ ಚಿತ್ರಸಿದ್ದ ಎಂಬ ಪ್ರತೀತಿಯೂ ಇದೆ. ಲೂಕನ ಈ ವಿಶಿಷ್ಟ ಬರವಣಿಗೆ ಮತ್ತು ಅನುಭವವನ್ನು ಅವನ ಶುಭಸಂದೇಶದಲ್ಲಿಯೇ ಕಾಣಬಹುದು.
ಲೂಕನ ಶುಭ ಸಂದೇಶದಲ್ಲಿ ಹೆಚ್ಚುವರಿಯಾಗಿ ಆರು ಪವಾಡಗಳು ಮತ್ತು 15 ಸಾಮತಿಗಳ ಉಲ್ಲೇಖವಿದೆ. ಬಡವರು ಮತ್ತು ಸಾಮಾಜಿಕ ಕಾಳಜಿ ಯಿರುವ ಲೂಕನಲ್ಲಿ ಲಾಜರ್ ಮತ್ತು ಶ್ರೀಮಂತನ ಕಥೆ ಬರುತ್ತದೆ. ದೇವ ಮಾತೆಯ ಸಾಮಾಜಿಕ ನ್ಯಾಯದ 'ಸ್ತುತಿಗೀತೆ' ಬರುತ್ತದೆ. ಲೂಕ ಮಹಿಳೆಯರ ಬಗ್ಗೆ ವಿಶೇಷ ಕಾಳಜಿ ಇದ್ದುದ್ದರಿಂದ ಮಾತೆಮೇರಿ,ಎಲಿಜಬೆತ್
ಇವರ ಉಲ್ಲೇಖವಿದೆ. 'ನಮೋ ಮರಿಯಾ ವರಪ್ರಸಾದ ಪೂರ್ಣೆ' ಎಂಬ ಘೋಷಣೆ ಇದೆ. ದೇವರ ಕ್ಷಮೆ ಮತ್ತು ಪ್ರೀತಿಯ ಬಗ್ಗೆ ಲೂಕನದು ಅಪಾರ ನಂಬಿಕೆ. ಇಲ್ಲಿ ದುಂದುಗಾರ ಮಗನ ಬಗ್ಗೆ ಬರುತ್ತದೆ. ಸಿಮೋನ್ ಮನೆಯಲ್ಲಿ ಯೇಸುವಿನ ಪಾದ ಅಂಭ್ಯಂಜಿಸಿದ ಮಹಿಳೆಯ ಬಗ್ಗೆ ಬರೆಯುತ್ತಾರೆ.
ಲೂಕನ ಮರಣದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇಲ್ಲ. ಪೌಲನು ಸಾವಿನ ನಂತರ ಲೂಕ ಏನು ಮಾಡಿದ, ಎಲ್ಲಿದ್ದ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಕೆಲವು ಬರಹಗಾರರು, ಲೂಕ ಕೂಡ ರಕ್ತಸಾಕ್ಷಿಯಾದ ಎಂದರೆ, ಇನ್ನೂ ಕೆಲವರು ಆತ ಗ್ರೀಸ್ ನಲ್ಲಿ ಗಾ ಪ್ರದೇಶದಲ್ಲಿ ಬೋಧಿಸಿದ ಎನ್ನುತ್ತಾರೆ. ಮೊದಲ ಪರಂಪರೆಯ ಪ್ರಕಾರ ಲೂಕ ಗ್ರೀಸ್ ನಲ್ಲಿದ್ದು ತನ್ನ ಶುಭಸಂದೇಶ ಬರೆದ ನಂತರ 84ರಲ್ಲಿ ತೀರಿಕೊಂಡ. ಇನ್ನೊಂದು ಪರಂಪರೆಯ ಪ್ರಕಾರ ಲೂಕ ಡಾಲ್ ಮೇಷಿಯಾದಲ್ಲಿ (ಯುಗೋಸ್ಲಾವಿಯಾ) ಬೋಧನೆ ಮಾಡಿದ ನಂತರ ಗ್ರೀಸ್ನಲ್ಲಿ ರಕ್ತ ಸಾಕ್ಷಿಯಾದ. ಅವನ ಅವಶೇಷಗಳನ್ನು 360ರಲ್ಲಿ ಕಾನ್ಸ್ಟಾಂಟಿನೋಪಲ್ ಗೆ ತರಲಾಯಿತು.
ಲೂಕನ ಚಿತ್ರ ಒಂದು ಎತ್ತು ಮತ್ತು ಕರುವಿನ ಜೊತೆಗೂಡಿ ಇರುತ್ತದೆ. ಕ್ರಿಸ್ತ ಬಲಿಯರ್ಪಣೆಯಾದ ಸಂಕೇತವಿದು. ಲೂಕ ವೈದ್ಯರುಗಳ ಪಾಲಕ.
17.10.23
ಮೊದಲನೇ ವಾಚನ: ರೋಮನರಿಗೆ 1:16-25
16.10.23 - "ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ"
ಮೊದಲನೇ ವಾಚನ: ರೋಮನರಿಗೆ 1:1-7
ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು|
ಎಸಗಿಹನಾತನು ಪವಾಡ ಕಾರ್ಯಗಳನು|
ಗಳಿಸಿತಾತನ ಕೈ ಪೂತಭುಜ ಗೆಲುವನು||
ಪ್ರಕಟಿಸಿಹನು ಪ್ರಭು ತನ್ನ ಮುಕ್ತಿ ವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕ ಶಕ್ತಿಯನು||
ಸ್ಮರಿಸಿಕೊಂಡನು ಪ್ರಭು ತನ್ನ ಪ್ರೀತಿಯನು|
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||
ನಮ್ಮ ದೇವ ಸಾಧಿಸಿದ ಜಯಗಳಿಕೆ||
ಭೂನಿವಾಸಿಗಳೇ, ಮಾಡಿರಿ ಸುಮಧುರ ಭಜನೆ|
ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: "ಈ ಪೀಳಿಗೆ ಕೆಟ್ಟ ಪೀಳಿಗೆ, ಇದು ಅದ್ಬುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.
15.10.23 - ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,”
ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 25:6-10
ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು. ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು. ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ. ಇದು ನೆರವೇರಿದಾಗ ಜನರು: “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು. ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು."
ಕೀರ್ತನೆ: 23:1-3, 3-4, 5, 6
ಶ್ಲೋಕ: ದೇವರ ಮಂದಿರದಲಿ ನಾವಾಸಿಸುವೆ ಚಿರಕಾಲವೆಲ್ಲ
ಎರಡನೇ ವಾಚನ: ಫಿಲಿಪ್ಪಿಯರಿಗೆ 4:12-14, 19-20
ಸಹೋದರರೇ, ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ. ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ. ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ. ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು. ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!
ಶುಭಸಂದೇಶ: ಮತ್ತಾಯ 22:1-14
14.10.23 - "ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!"
ಮೊದಲನೇ ವಾಚನ: ಯೊವೇಲ 3:12-21
29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು
ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...








