ಮೊದಲನೇ ವಾಚನ: 1 ಯೊವಾನ್ನ 2:3-11
29.12.23 - "ನಿನ್ನ ಮಾತು ಸರ್ವೇಶ್ವರಾ, ನೆರವೇರಿತಂದು ಇನ್ನು ತೆರಳಬಿಡು ಶಾಂತಿಯಿಂದ"
28.12.23 - "ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು"
ಮೊದಲನೆಯ ವಾಚನ : ಯೊವಾನ್ನನು ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 1:5-2:2
ಪ್ರಭುವಿನ ವಾಕ್ಯ
ಕೀರ್ತನೆ 124: 2-3,4-5,7-8
ಶ್ಲೋಕ: ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು | ಹರಿದುಹೋಯಿತಿದೋ ಬಲೆಯು, ಹಾರಿಹೋದೆವು ನಾವು ||
1. ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು?|
ಜನರೆಮಗೆ ವಿರುದ್ಧ ಎದ್ದಾಗ ಏನಾಗುತ್ತಿತ್ತು?||
ಉರಿಗೊಳ್ಳುತ್ತಿದ್ದರು ಕಡುಗೋಪದಿಂದ ಖಂಡಿತ|
ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ||
ಶ್ಲೋಕ
2. ಕೊಚ್ಚುಬಿಡುತ್ತಿತ್ತು ನಮ್ಮನ್ನು ಹುಚ್ಚುಪ್ರವಾಹ|
ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ||
ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ||
ಶ್ಲೋಕ
3. ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು|
ಹರಿದುಹೋಯಿತಿದೋ ಬಲೆಯು, ಹಾರಿಹೋದೆವು ನಾವು||
ನಮಗುದ್ಧಾರ ಪ್ರಭುವಿನ ನಾಮದಲಿ|
ಭೂಮ್ಯಾಕಾಶವನು ಸೃಜಿಸಿದಾತನಲಿ||
ಶ್ಲೋಕ
ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ಓ ದೇವಾ ನಿಮ್ಮನ್ನು ಸ್ತುತಿಸುತ್ತೇವೆ, ನೀವೇ ನಮ್ಮ ಪ್ರಭುವೆಂದು ನಿಮ್ಮನ್ನು ಅಂಗೀಕರಿಸುತ್ತೇವೆ | ರಕ್ತ ಸಾಕ್ಷಿಗಳ ಮಹಿಮಾವೃಂದವು ನಿಮ್ಮನ್ನು ಸ್ತುತಿಸುತ್ತದೆ, ಓ ಪ್ರಭೂ ||
ಅಲ್ಲೆಲೂಯ!
ಶುಭಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 2:13-18
ಆ ಕಾಲದಲ್ಲಿ ಜ್ಯೋತಿಷಿಗಳು ಹೊರಟು ಹೋದಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವತನಕ ಅಲ್ಲೇ ಇರು " ಎಂದನು. ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು. ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, "ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು "ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು. ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರಿದ, ಎಲ್ಲಾ ಗಂಡುಮಕ್ಕಳನ್ನು ಕೊಂದು ಹಾಕಿಸಿದನು. ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು. ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು, "ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.
ಪ್ರಭುಕ್ರಿಸ್ತರ ಶುಭಸಂದೇಶ27.12.23 - ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.
ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ. ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ, ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯ ಜೀವವನ್ನು ನಿಮಗೆ ಸಾರುತ್ತೇವೆ. ಪಿತನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.
ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ, "ಎಂದು ಹೇಳಿದಳು. ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು. ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. ಅವನು ಬಗ್ಗಿ ನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಿಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು. ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.
26.12.23
25.12.23 - "ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು"
ಮೊದಲನೇ ವಾಚನ: ಯೆಶಾಯ 52:7-10
ಶ್ಲೋಕ: ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ ನಮ್ಮ ದೇವ ಸಾಧಿಸಿದ ಜಯಗಳಿಕೆ
1. ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು
ಎಸಗಿಹನಾತನು ಪವಾಡ ಕಾರ್ಯಗಳನು
ಗಳಿಸಿತಾತನ ಕೈ ಪೂತಭುಜ ಗೆಲುವನು
2. ಪ್ರಕ್ಟಿಸಿಹನಾ ಪ್ರಭು ತನ್ನ ಮುಕ್ತಿ ವಿಧಾನವನು
ರಾಷ್ಟ್ರಗಳಿಗೆ ತೋರಿಸಿಗನು ಜೀವೋದ್ದಾರಕಾ ಶಕ್ತಿಯನು
ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ
ನಮ್ಮ ದೇವ ಸಾಧಿಸಿದ ಜಯಗಳಿಕೆ
3. ಸ್ಮರಿಸಿಕೋಂಡನಾ ಪ್ರಭು ತನ್ನ ಪ್ರೀತಿಯನು
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು
ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ
4. ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ
ಭಜಿಸಿರಿ ಆತನನು ವಾದ್ಯಮೇಳದೊಂದಿಗೆ
ಊದಿರಿ ಕೊಂಬನು, ತುತೂರಿಯನು
ಉದ್ಘೋಷಿಸಿರಿ ಪ್ರಭು ರಾಜನನು
ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು. ಆದರೆ ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನು ಉಂಟುಮಾಡಿದ್ದು ಇವರ ಮುಖಾಂತರವೇ, ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ, ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ. ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರು ವಾಸಿಯಾದಾತ. ಎಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - "ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ," ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, "ನಾನಾತನಿಗೆ ಪಿತನು, ಆತನೆನಗೆ ಪುತ್ರನು, " ಎಂದಾಗಲಿ ಹೇಳಿದ್ದುಂಟೇ? ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ; "ದೇವದೂತರೆಲ್ಲರೂ ಆತನನ್ನು ಆರಾಧಿಸಲಿ," ಎಂದಿದ್ದಾರೆ.
ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು. ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು, ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ, ಮಾನವಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು, ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು. ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮಿಾಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, "ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು" ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು. ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸುಕ್ತಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.
24.12.23
ಮೊದಲನೇ ವಾಚನ: 2 ಸಮುವೇಲ 7:1-5, 8-12, 14, 16
ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು
ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: ಸ್ತುತಿ ಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ. ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ. ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ನಮಗೊಬ್ಬ ಶಕ್ತಿಯುತ ಮುಕ್ತಿದಾತನನು. ಪುರಾತನ ಕಾಲದಿಂದಲೆ. ಪೂಜ್ಯ ಪ್ರವಾದಿಗಳ ಬಾಯಿಂದಲೆ ಅರುಹಿಸಿರುವನು ಇಂತೆಂದು ನಮಗೆ; "ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ" ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನ್ನು, ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು. ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ ನಮಗಿತ್ತಿರುವರು. ಶತ್ರುಗಳಿಂದ ರಕ್ಷಿಸುವನೆಂಬ ಅಭಯ. ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ, ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನಿತರಾಗಿ, ಸದ್ಬಕ್ತರಾಗಿ. ಸುಕುಮಾರಾ, ನೀನೆನಿಸಿಕೊಳ್ಳುವೆ "ಪರಾತ್ಪರನ ಪ್ರವಾದಿ", ಸರ್ವೇಶ್ವರನ ಮಾರ್ಗವನ್ನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ ಪಾಪಕ್ಷಮೆಯನ್ನು ಸಾರುವೆ ಆತನ ಪ್ರಜೆಗೆ. ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ. ಕೃಪಾಸಾಗರ, ದಯಾಮಯ, ನಮ್ಮ ದೇವನು, ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು, ನಮ್ಮ ಕಾಲುಗಳನ್ನೂರಿಸಿ ನಡೆಸಲು ಶಾಂತಿಪಥದೊಳು.
23.12.23
ಮೊದಲನೇ ವಾಚನ: ಮಲಾಕಿ 3:1-4; 4:5-6
ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು. ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ , ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು. ಆದರೆ ಮಗುವಿನ ತಾಯಿ, "ಇಲ್ಲ, ಅದು ಕೂಡದು, ಅವನಿಗೆ "ಯೊವಾನ್ನ" ಎಂಬ ಹೆಸರಿಡಬೇಕು," ಎಂದಳು. ಅದಕ್ಕೆ ಅವರು, "ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ," ಎಂದು ಹೇಳಿ, "ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?" ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು. ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, "ಇವನ ಹೆಸರು ಯೊವಾನ್ನ" ಎಂದು ಬರೆದನು. ಎಲ್ಲರೂ ಬೆರಗಾದರು. ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, "ಈ ಮಗು ಮುಂದೆ ಎಂಥವನಾಗುವನೋ!" ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯಹಸ್ತವು ಆ ಮಗುವಿನ ಮೇಲಿತ್ತು.
28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...








