ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು. ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು: “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು. ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.” “ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ. ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ. “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ."
13.08.24 - "ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು"
ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು. ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು: “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು. ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.” “ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ. ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ. “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ."
12.08.24
11.08..24
ಶುಭಸಂದೇಶ : ಯೊವಾನ್ನ 6:41- 51
10.08.24 - "ನನ್ನ ಸೇವೆ ಮಾಡುವವನು ನನ್ನ ಪಿತನಿಂದ ಸನ್ಮಾನ ಹೊಂದುತ್ತಾನೆ,”
09.08.24 - "ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು"
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು. ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು? ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು. ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ”.
08.08.24 - "ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತ ಪಡಿಸಿದ್ದು ನರಮಾನವ ಶಕ್ತಿ ಅಲ್ಲ, ಸ್ವರ್ಗದಲ್ಲಿರುವ ನನ್ನ ಪಿತನೇ"
ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 31:31-34
ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು. ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು. ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು. ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣ ತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”
07.08.24 - “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,”
ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 31:1-7
ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪ್ರಾಂತ್ಯಕ್ಕೆ ಹೋದರು. ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು. ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು. ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು. ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು. ಅದಕ್ಕೆ ಯೇಸು, “ಮಕ್ಕಳ ಆಹಾರವನ್ನು ತೆಗೆದು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು. ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣ ಹೊಂದಿದಳು.