08.12.24
07.12.24 - "ಬೆಳೆಯೇನೋ ಹೇರಳ; ಕೊಯಿಲಿಗಾರರೋ ವಿರಳ;"
ಮೊದಲನೇ ವಾಚನ: ಯೆಶಾಯ 30: 19-21, 23-26
ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು. ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ. ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು. ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲು ಗಾವಲುಗಳಲ್ಲಿ ಮೇಯುವುವು. ಹೊಲಗೇಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು. ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.
ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, "ಬೆಳೆಯೇನೋ ಹೇರಳ; ಕೊಯಿಲಿಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ," ಎಂದರು. ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.
06.12.24 "ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,
ಪ್ರವಾದಿ ಯೆಶಾಯನ ಗ್ರಂಥದಿಂದ ಇಂದಿನ ವಾಚನ 30: 19-21, 23-26
ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು. ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.
ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ 'ಇದೇ ಮಾರ್ಗ, ಇದರಲ್ಲೇ ನಡೆಯಿರಿ’ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು. ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.
ಹೊಲಗೇಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.
ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.
ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ
ಕೀರ್ತನೆ
147: 1-2,3-4,5-6
ಶ್ಲೋಕ:
ಪ್ರಭುವಿನಲ್ಲಿ
ವಿಶ್ವಾಸವಿಡುವವರು
ಉಲ್ಲಾಸಿಸುತ್ತಾರೆ.
1. ನಮ್ಮ ದೇವರನು
ಹೊಗಳಿ ಹಾಡುವುದು ಉಚಿತ|
ಆತನ
ಸ್ತುತಿ ಮನೋಹರ, ಅದು ಬಲು ಸೂಕ್ತ||
ನಿರ್ಮಿಸುತಿಹರು
ಪ್ರಭು ಮರಳಿ ಜೆರುಸಲೇಮನು|
ಬಂದು
ಸೇರಿಸುತಿಹನು ಚದುರಿದ ಇಸ್ರಯೇಲರನು||
ಶ್ಲೋಕ
2. ವಾಸಿಮಾಡುವನು ಮುರಿದ
ಮನಸ್ಸುಳ್ಳವರನು|
ಕಟ್ಟಿ
ಗುಣಪಡಿಸುವನು ಅವರ ಗಾಯಗಳನು||
ನಿಯಮಿಸಿಹನು
ತಾರೆಗಳ ಸಂಖ್ಯೆಯನು|
ಇಟ್ಟಿಹನು
ಪ್ರತಿಯೊಂದಕೂ ಹೆಸರನು||
ಶ್ಲೋಕ
3. ನಮ್ಮ ಪ್ರಭು
ಘನವಂತ, ಪರಾಕ್ರಮಿ|
ಅಪರಿಮಿತವಾದುದು
ಆತನ ಜ್ಞಾನನಿಧಿ||
ಆಧಾರವಾಗಿಹನು
ಪ್ರಭು ದೀನರಿಗೆ|
ತುಳಿದುಬಿಡುವನು
ದುರ್ಜನರನು ನೆಲಕೆ||
ಶ್ಲೋಕ
ಘೋಷಣೆ ಯೆಶಾಯ 33:22
ಅಲ್ಲೆಲೂಯ, ಅಲ್ಲೆಲೂಯ!
ಸರ್ವೇಶ್ವರಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರಸ್ವಾಮಿಯೇ ನಮಗೆ ಶಾಸನದಾಯಕ | ಸರ್ವೇಶ್ವರಸ್ವಾಮಿಯೇ ನಮ್ಮ ಅರಸ ಅವರೇ ನಮ್ಮ ಉದ್ಧಾರಕ ||
ಅಲ್ಲೆಲೂಯ!
ಶುಭಸಂದೇಶ
ಸಂತ ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 9:35-10:1,6-8
ಆ ಕಾಲದಲ್ಲಿ ಯೇಸು, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾ ಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, "ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ, "ಎಂದರು. ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸು ಅವರಿಗೆ ಕೊಟ್ಟ ಆದೇಶವೇನೆಂದರೆ : ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, 'ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ' ಎಂದು ಬೋಧನೆಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿರಿ.
ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ
05.12.24 - ನನ್ನನ್ನು"ಸ್ವಾಮೀ, ಸ್ವಾಮೀ, "ಎನ್ನುವ ಪ್ರತಿಯೊಬ್ಬನೂ ಸ್ವರ್ಗ ಸಾಮ್ರಾಜ್ಯವನ್ನು ಪ್ರವೇಶಿಸನು.
ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಕಾರ. ತೆರೆಯಿರಿ ನಗರ ದ್ವಾರಗಳನ್ನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ ಶಾಶ್ವತ ಆಶ್ರಯಗಿರಿ. ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನ್ನು; ಕೆಡವಿ ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವ ಉನ್ನತ ನಗರವನು. ಈಡಾಗುವುದದು ಕಾಲ ತುಳಿತಕ್ಕೆ, ದೀನದಲಿತರ ಪಾದ ತುಳಿತಕೆ.
"ನನ್ನನ್ನು"ಸ್ವಾಮೀ, ಸ್ವಾಮೀ, "ಎನ್ನುವ ಪ್ರತಿಯೊಬ್ಬನೂ ಸ್ವರ್ಗ ಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ನನ್ನ ಈ ಮಾತುಗಳನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ. ಮಳೆ ಬಂತು ನೆರೆ ಬಂತು ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆೆ. ಮಳೆ ಬಂತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!
04.12.24
03.12.24 - “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು"
ಮೊದಲನೇ ವಾಚನ: ಯೆಶಾಯ 11: 1-10
ಜೆಸ್ಸೆಯನ ಬುಡದಿಂದ ಒಡೆಯುವು ದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕ ದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ. ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ. ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈ ಹಾಕುವುದು ಮೊಲೆಬಿಟ್ಟ ಮಗು ಹಾವಿನಬಿಲದ ಒಳಗೆ. ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.
02.12.24 - "ತಾವು ಒಂದೇ ಒಂದು ಮಾತು ಹೇಳಿದರೆ ಸಾಕು"
ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆಯುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು. ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು. ಆಗ ಒಡೆಯರಾದ ಸ್ವಾಮಿ ನ್ಯಾಯ ನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿ ಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದು ಹಾಕುವರು. ಸಿಯೋನ್ ಪರ್ವತದ ಮೇಲೆಲ್ಲಾ, ಅಲ್ಲಿನ ಸಭಾ ಕೂಟಗಳ ಮೇಲೆಲ್ಲಾ ಹಗಲಲ್ಲಿ ಧೂಮ ಮೇಘವನ್ನು, ರಾತ್ರಿಯಲ್ಲಿ ಪ್ರಜ್ವಲಿಸುವ ಅಗ್ನಿ ಪ್ರಕಾಶವನ್ನು ಉಂಟು ಮಾಡುವರು. ದೇವರ ಮಹಿಮೆ ಛತ್ರಿಯಂತೆಯೂ ಚಪ್ಪರದಂತೆಯೂ ಎಲ್ಲರನ್ನು ಆವರಿಸುವುದು. ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆ ಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು.
ಶ್ಲೋಕ: ಪ್ರಭುವಿನಾಲಯಕ್ಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ
28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...









