31.12.09 - ದಿವ್ಯವಾಣಿ

ಸಂತ ಯೊವಾನ್ನನು ಬರೆದ ಶುಭ ಸಂದೇಶದಿಂದ ವಾಚನ - 1:  1-18


“ ಅ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸ ಮಾಡಿದರು’

ಜಗತ್ತು ಉಂಟಾಗುವ ಮೊದಲೇ “ದಿವ್ಯವಾಣಿ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು.
ಆ ದಿವ್ಯವಾಣಿ ದೇವರೊಂದಿಗೇ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು.
ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು.
ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ.
ಆ ದಿವ್ಯವಾಣಿ ಸಜ್ಜೀವವಿತ್ತು. ಆಜೀವವೇ ಮಾನವ ಜನಾಂಗದ ಜ್ಯೋತಿಯಾಗಿತ್ತು.
ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ, ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.
ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು, ಆತನ ಹೆಸರು ಯೊವಾನ್ನ.
ಈತನು ಸಾಕ್ಷಿ ಕೊಡಲು ಬಂದನು.
ತನ್ನ ಮುಖಾಂತರವೇ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು.
ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು.
ನಿಜವಾದ ಜ್ಯೋತಿ ಆ ದಿವ್ಯವಾಣಿಯೇ.
ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.
ದಿವ್ಯವಾಣಿ ಲೋಕದಲ್ಲಿ ಇದ್ದರು, ಅವರ ಮುಖಾಂತರವೇ ಲೋಕವು ಉಂಟಾಯಿತು.
ಲೋಕವಾದರೋ ಅವರನ್ನು ಅರಿತುಕೊಳ್ಳದೇ ಹೋದರು.
ಕೆಲವರಾದರೋ ಅವರನ್ನು ಬರಮಾಡಿಕೊಂಡರು.
ಅಂಥವರಿಗೆ, ಅಂದರೆ, ಅವರಲ್ಲಿ ವಿಶ್ವಾಸವಿಟ್ಟವರಿಗೆ,
ದೇವರ ಮಕ್ಕಳಾಗುವ ಹಕ್ಕನ್ನು ಕೊಟ್ಟರು
ಅಂಥವರ ಜನನವು ರಕ್ತ ಸಂಬಂಧದಿಂದ ಅಲ್ಲ,ಶಾರೀರಿಕ ಇಚ್ಛೆಯಿಂದ ಅಲ್ಲ,
ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದ ಆದುದು.
ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸ ಮಾಡಿದರು.
ಅವರ ಮಹಿಮೆಯನ್ನು ನಾವು ನೋಡಿದೆವು.
ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ.
ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.
ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ,
“’ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,”ಎಂದು ಘೋಷಿಸಿದನು.ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ವರಪ್ರಸಾದದ ಮೇಲೆ ವರಪ್ರಸಾದ ಪಡೆದಿದ್ದೇವೆ.

ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು.ವರಪ್ರಸಾದ ಹಾಗು ಸತ್ಯವಾದರೋ ಯೇಸುಕ್ರಿಸ್ತರ ಮುಖಾಂತರ ಬಂದವು ಯಾರೂ ಎಂದು ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತ: ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.

25.12.09 - ಲೋಕೋದ್ಧಾರಕ ಜನಿಸಿದ್ದಾರೆ

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 2: 1-14
“ಇಂದೇ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ.”

ಅ ಕಾಲದಲ್ಲಿ ಚಕ್ರವರ್ತಿ ಔಗಸ್ತನು ತನ್ನ ಸಾಮ್ರಾಜ್ಯದಲ್ಲೆ ಲ್ಲಾ ಜನಗಣತಿ ಮಾಡಬೇಕೆಂದು ಆಜ್ಞೆ ಹೊರಡಿಸಿದನು. ಮೊಟ್ಟ ಮೊದಲನೆಯ ಆ ಜನಗಣತಿ, ಕುರೇನ್ಯನು ಸಿರಿಯ ನಾಡಿಗೆ ರಾಜ್ಯಪಾಲನಾಗಿದ್ದಾಗ ನಡೆಯಿತು. ಆಗ ಎಲ್ಲರೂ ತಮ್ಮ ಹೆಸರನ್ನು ದಾಖಲೆ ಮಾಡಿಸಿಕೊಳ್ಳಲು ತಮ್ಮ ತಮ್ಮ ಊರುಗಳಿಗೆ ಹೊರಟರು. ಜೋಸೆಫನು ದಾವೀದನ ಮನೆತನದವರು ಹಾಗೂ ಗೊತ್ರದವನು.ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆ ಹೋದನು. ಆತನ ಸಂಗಡ ಆತನಿಗೆ ನಿಶ್ಚಿತಾರ್ಥಳಾಗಿದ್ದ ಹಾಗೂ ಪೂರ್ಣ ಗರ್ಭವತಿಯಾಗಿದ್ದ ಮರಿಯಳು ಸಹ ಹೋದಳು. ಹೀಗೆ ಅವರು ಬೆತ್ಲೆಹೇಮಿನಲ್ಲಿ ಇದ್ದಾಗ, ಮರಿಯಳಿಗೆ ಪ್ರಸವ ಕಾಲ ಸಮೀಪಿಸಿತು. ಆಕೆ ಚೊಚ್ಚಲ ಮಗನಿಗೆ ಜನ್ಮವಿತ್ತು. ಇದ್ದ ಬಟ್ಟೆಯಲ್ಲೇ ಸುತ್ತಿ, ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.


ಅದೇ ನಾಡಿನಲ್ಲಿ ಕೆಲವು ಕುರುಬರು ಹೊಲಗಳಲ್ಲಿದ್ದುಕೊಂಡು ರಾತ್ರಿಯಲ್ಲಿ ಕುರಿ ಮಂದೆಗಳನ್ನು ಕಾಯುತ್ತಿದ್ದರು. ಇದ್ದಕಿದ್ದಂತೆ ದೇವದೂತನೊಬ್ಬನು ಅವರೆದುರಿಗೆ ಪ್ರತ್ಯಕ್ಷನಾಗಲು ಸರ್ವೇಶ್ವರನ ಪ್ರಭೆ ಅವರ ಸುತ್ತಲೂ ಪ್ರಕಾಶಿಸಿತು. ಅವರು ಬಹಳವಾಗಿ ಹೆದರಿದರು. ಆ ದೂತನು ಅವರಿಗೆ “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ. ಇಗೋ ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು. ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತ ಪರಿವಾರವಾರವೊಂದು ಕಾಣಿಸಿಕೊಂಡಿತು. “ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿ ಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.

21.12.09 - "ನಂಬಿ ಧನ್ಯಳಾದೆ ನೀನು"

ಸಂತ ಲೂಕ ಬರೆದ ಶುಭ ಸಂದೇಶದಿಂದ ವಾಚನ - 1:39-45


ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣ ಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಆಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ ಹೀಗೆಂದಳು;
"ಸ್ತ್ರೀಯರಲ್ಲಿ ಧನ್ಯಳು ನೀನು;
ನಿನ್ನ ಕರುಳ ಕುಡಿಯೂ ಧನ್ಯ!"
ನನ್ನ ಪ್ರಭುವಿನ ತಾಯಿ ನೀನು;
ನನ್ನ ಬಳಿಗೆ ಬಂದದು ಅದೆಂಥ ಭಾಗ್ಯ!
ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ
ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!
ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ
ನೆರವೇರಿಯೇ ತೀರುವುದಂದು."

20.12.09 - "ಸ್ತ್ರೀಯರಲ್ಲಿ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!"

ಸಂತ ಲೂಕ ಬರೆದ ಶುಭ ಸಂದೇಶದಿಂದ ವಾಚನ - 1:39-44


"ಸ್ತ್ರೀಯರಲ್ಲಿ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!"

ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣ ಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಆಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ ಹೀಗೆಂದಳು; "ಸ್ತ್ರೀಯರಲ್ಲಿ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!" ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದದು ಅದೆಂಥ ಭಾಗ್ಯ! ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು  ಆನಂದದಿಂದ, ನನ್ನ ಕರುಳ ಕುಡಿ!"

18.12.09 - "ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು"

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 1:18-24

"ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು"


ಯೇಸು ಕ್ರಿಸ್ತನ ತಾಯಿ ಮರಿಯಳು.ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆ ಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದು ಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು. ಮರಿಯಳನ್ನು

ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು.ಮರಿಯಳನ್ನು ಜನರ ಮುಂದೆ ನಾಚಿಕೆಪದಿಸಲು ಅವನು ಇಷ್ಟಪಡಲಿಲ್ಲ. ಆದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು. ಯೋಸೇಫನು ಹೀಗೆ ಆಲೋಚಿಸಿಕೊಂಡ ನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು,"ದಾವೀದನ ಮಗನಾದ ಯೋಸೇಫನೇ ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ. ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗನಿಗೆ ಯೇಸು ಎಂದು ಹೆಸರಿಡುವೆ.ನೀನು ಆತನಿಗೆ ಆ ಹೆಸರನ್ನೇ ಇಡು: ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು" ಎಂದು ಹೇಳಿದನು. ಪ್ರವಾದಿಯ ಮೂಲಕ ಪ್ರಭು ತಿಳಿಸಿದ್ದೆಲ್ಲ ನೆರವೇರುವಂತೆ ಇದೆಲ್ಲಾ ನಡೆಯಿತು. ಅದೇನೆಂದರೆ: ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ.ಆತನಿಗೆ ಇಮ್ಮಾನಿವೇಲ್ ಎಂಬ ಹೆಸರನ್ನು ಇಡುವರು.(ಇಮ್ಮಾನುವೇಲ್ ಎಂದರೆ" ದೇವರು ನಮ್ಮ ಸಂಗಡ ಇದ್ದಾನೆ" ಎಂಬರ್ಥ.)

ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು. ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು.ಯೋಸೇಫನು ಆ ಮಗುವಿಗೆ "ಯೇಸು" ಎಂದು ಹೆಸರಿಟ್ಟನು.

17-12-2009 - ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 7: 24:30

“ಇಗೋ,ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು.ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು.”

ಯೇಸು ಜನ ಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು : “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ?
ಗಾಳಿಗೆ ಓಲಾಡುವ ಜೊಂಡನ್ನೇ? ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ
ವ್ಯಕ್ತಿಯನ್ನೇ?ಅಂಥ ಶೃಂಗಾರವಾದ ಉಡುಗೆ ತೊಡುಗೆಯನ್ನು ಧರಿಸಿ, ಭೋಗ ಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!

ಹಾಗಾದರೆ ನೀವು ಇನ್ನೇನನ್ನು ನೋಡಲು ಹೋದಿರಿ? ಪ್ರವಾದಿಯನ್ನೇ? ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ, ಎಂಬುದು ನಿಜ. ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು ಎಂದು ಪವಿತ್ರಗ್ರಂಥದಲ್ಲಿ ಪ್ರಸ್ತಾಪಿಸಿರುವುದು ಈ ಯೊವಾನ್ನನನ್ನು ಕುರಿತೇ. ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.

ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು. ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೇಕ್ಷೆಯನ್ನು ಪಡೆಯದೆ ಹೋದರು.

16.12.09 - ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 7: 19-23

“ನೀವು ಕಂಡದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ತಿಳಿಸಿರಿ.”

ಸ್ನಾನಿಕ ಯೊವಾನ್ನನ್ನು, ತನ್ನು ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬರಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು. ಆ ಶಿಷ್ಯರು ಯೇಸುವಿನ ಬಳಿಗೆ ಬಂದು, “ಬರಬೇಕಾದವರು ನೀವೋ ಅಥವಾ ನಾವು ಬೇರೊಬ್ಬರನ್ನು ಎದುರುನೋಡಬೇಕೋ ಎಂದು ವಿಚಾರಿಸಲು ಸ್ನಾನಿಕ ಯೊವನ್ನನು ನಮ್ಮನ್ನು ತಮ್ಮ ಬಳಿಗೆ ಕಳುಹಿಸಿದ್ದಾರೆ,”ಎಂದರು.ಅದೇ ಸಮಯದಲ್ಲಿ ಯೇಸು ರೋಗ ರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವು ಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು. ಯೇಸು ಅವರಿಗೆ ಪ್ರತ್ಯುತ್ತರವಾಗಿ,“ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ : ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ. ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...