ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

12.12.2018

ಮೊದಲನೇ ವಾಚನ: ಜೆಕರ್ಯ 2:10-12

ಸರ್ವೇಶ್ವರ ಇಂತೆನ್ನುತ್ತಾರೆ: "ಎಲೈ ಸಿಯೋನ್ ನಗರವೇ ಸಂತೋಷಪಡು, ಜಯಕಾರ ಮಾಡು; ನಾನೇ ಬಂದು ನಿನ್ನ ಮಧ್ಯ ವಾಸಿಸುವೆನು!" ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರ ಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳಿಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು. ಪವಿತ್ರ ಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು. ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನ ತಾಳಿರಿ.

ಜೂಡಿತ: 13: 18, 19

ಶ್ಲೋಕ: ನೀನೇ ನಮ್ಮ ಜನಾಂಗದ ಹಿರಿಮೆ.

ಶುಭಸಂದೇಶ: ಲೂಕ 1:39-47

ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು, ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ ಹೀಗೆಂದಳು: "ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ! ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ! ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ ನನ್ನ ಕರುಳ ಕುಡಿ! ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು," ಆಗ ಹೀಗೆಂದು ಮರಿಯಳು ಹೊಗಳಿದಳು: "ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ! ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲ್ಲಿ"!!


11.12.2018

ಮೊದಲನೇ ವಾಚನ: ಯೆಶಾಯ 40:1-11

ನಿಮ್ಮ ದೇವರು ಇಂತೆನ್ನುತ್ತಾರೆ: "ಸಂತೈಸಿ, ನನ್ನ ಜನರನ್ನು ಸಂತೈಸಿರಿ. ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ: ಅದರ ಊಳಿಗತನ ಮುಗಿಯಿತೆನ್ನಿ: ತಕ್ಕ ಪ್ರಾಯಶ್ಚಿತವಾಗಿದೆ ಅದು ಗೈದ ದೋಶಕ್ಕೆ ಸರ್ವೇಶ್ವರಸ್ವಾಮಿಯಿಂದಲೇ ಅದರ ಎಲ್ಲಾ ಪಾಪ ಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆನಗರಿಗೆ" ಇಗೋ, ಈ ವಾಣಿಯನ್ನು ಕೇಳಿ: "ಸರ್ವೇಶ್ವರಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲ್ಲಿ. ತುಂಬಬೇಕು ಎಲ್ಲ ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನ್ನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನ್ನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನ್ನು. ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ." ಆ ವಾಣಿ ಮತ್ತೆ ಕೇಳಿಸಿತು: "ಗಟ್ಟಿಯಾಗಿ ಕೂಗು" ಎಂದಿತು. ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು: "ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ. ಪ್ರಭುವಿನ ಶ್ವಾಸಬೀಸಲು ಒಣಗಿ ಹೋಗುವುದಾ ಹುಲ್ಲು, ಬಾಡಿ ಹೋಗುವುದಾ  ಹೂವು ಮಾನವರೆಲ್ಲ ಹುಲ್ಲೇ ಹುಲ್ಲು. ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ  ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು." ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೆ, ಧ್ವನಿಯೇರಿಸು, ನಿರ್ಭಯದಿಂದ ಏರಿಸು 'ಇಗೋ, ನಿಮ್ಮ ದೇವರು" ಎಂದು ಜೂದ ನಗರಗಳಿಗೆ ಸಾರು. ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ. ಆತ ಮೇಯಿಸುವನು. ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.

ಕೀರ್ತನೆ: 96:1-2, 3, 10ac, 11-12, 13

ಶ್ಲೋಕ: ಇಗೋ, ಸರ್ವೇಶ್ವರಸ್ವಾಮಿ ಬರುತಿಹನು ಶೂರನಂತೆ.

ಶುಭಸಂದೇಶ: ಮತ್ತಾಯ 18:12-14

"ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ, ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ?. ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಈ ತೊಂಭತ್ತೊಂಭತ್ತು ಕುರಿಗಳಿಗಿಂತ ಸಿಕ್ಕಿದ ಈ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ರ" ಎಂದರು ಯೇಸುಸ್ವಾಮಿ.

10.12.2018

ಮೊದಲನೇ ವಾಚನ: ಯೆಶಾಯ  35:1-10

ಆನಂದಿಸಲಿ ಅರಣ್ಯವೂ ಮರಭೂಮಿಯೂ, ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು. ಉಲ್ಲಾಷಿಸಲಿ ಅದು ಹುಲುಸಾಗಿ ಹೂಬಿಟ್ಟು, ಹೌದು, ಸಂತಸ ಸಂಗೀತ ಹಾಡುವಷ್ಟು. ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು; ಕರ್ಮೆಲಿನ ಮತ್ತು ಶಾರೋನಿನ ವೈಭವವು.  ಕಾಣುವುವು ಸರ್ವೇಶ್ವರನ ಮಹಿಮೆಯನು, ನೋಡುವುವು ಇವೆಲ್ಲ ನಮ್ಮ ದೇವರ ವೈಭವವನ್ನು. ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ. ನಡುಗುವ ಕಾಲುಗಳನ್ನು ದೃಢಗೊಳಿಸಿರಿ. ಚಂಚಲ ಹೃದಯರಿಗೆ ಹೀಗೆಂದು ಹೇಳಿ: "ಭಯಪಡಬೇಡಿ, ಎದೆಗುಂದಬೇಡಿ, ಬರುವನು ಆ ದೇವನು ಮುಯ್ಯಿತೀರಿಸಲು; ಬರುವನು ಆ ದೇವನು ಪ್ರತೀಕಾರವೆಸಗಲು; ತಾನೇ ಬರುವನು ನಿಮ್ಮನ್ನು ರಕ್ಷಿಸಲು." ಕುರುಡರ ಕಣ್ಣು ಕಾಣುವುದಾಗ, ಕಿವುಡರ ಕಿವಿ ತೆರೆಯುವುದಾಗ, ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ, ಒರತೆಗಳು ಒಡೆಯುವುವು ಅರಣ್ಯದಲ್ಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲ್ಲಿ. ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು, ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ  ಹುಲ್ಲುಗಾವಲುಗಳು. ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲ ನಡೆಯುವ ಮೂಢನು. ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ, ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ. ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖ ದುಗುಡದ ಕಹಿ.

ಕೀರ್ತನೆ: 85:9, 10, 11-12, 13-14
ಶ್ಲೋಕ: ಅಗೋ, ದೇವನು ತಾನೇ ಬರುವನು ನಿಮ್ಮನ್ನು ರಕ್ಷಿಸಲು.

ಶುಭಸಂದೇಶ: ಲೂಕ 5:17-26

ಒಮ್ಮೆ ಯೇಸುಸ್ವಾಮಿ ಬೋಧನೆ ಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತ್ತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು. ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆ ಇಡಬೇಕೆಂದು ಪ್ರಯತ್ನಿಸಿದರು. ಆದರೆ ಜನಸಂದಣಿಯ ನಿಮಿತ್ತ ದಾರಿ ಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ , ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು. ಯೇಸು ಅವರ ವಿಶ್ವಾಸವನ್ನು ಮೇಚ್ಚಿ,  "ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, "ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?" ಎಂದು ತಮ್ಮಲ್ಲೇ ಹೇಳಿಕೊಳ್ಳಲು  ಆರಂಭಿಸಿದರು. ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, "ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು? 'ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎನ್ನುವುದು ಸುಲಭವೋ ಅಥವಾ 'ಎದ್ದು ನಡೆ' ಎನ್ನುವುದು ಸುಲಭವೋ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಅ ಪಾರ್ಶ್ವವಾಯು ರೋಗಿಯ ಕಡೆ ನೋಡಿ,  'ಏಳು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,' ಎಂದು ನಿನಗೆ ಆಜ್ಞಾಪಿಸುತ್ತೇನೆ" ಎಂದರು. ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು. ಎಲ್ಲರೂ ನಿಬ್ಬೆರಗಾಗಿ, ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!" ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.

09.12.2018

ಮೊದಲನೇ ವಾಚನ: ಬಾರೂಕ  5:1-9

ಜೆರುಸಲೇಮೇಕಳಚಿಬಿಡು ನಿನ್ನ ಶೋಕಾರ್ಥ ವಸ್ತ್ರಗಳನ್ನು ಧರಿಸಿಕೋ  ನಿತ್ಯಕ್ಕೆಂದು ದೇವರಿಂದ ಬರುವ ಪ್ರಭಾವದ ಸೊಬಗನ್ನು. ತೊಟ್ಟುಕೋ ದೇವರಿಂದ ಬರುವ ನೀತಿಯೆಂಬ ನಿಲುವಂಗಿಯನ್ನು ಇಟ್ಟುಕೋ ತಲೆಯ ಮೇಲೆ ಮಹಿಮೆಯೆಂಬ ಮುಕುಟವನ್ನು. ದೇವರೇ ನಿನ್ನ ತೇಜಸ್ಸನ್ನು ಹರಡುವರು. ಆಕಾಶದಡಿಯಿರುವ ಎಲ್ಲಾ ದಿಕ್ಕುಗಳಿಗು. "ನೀತಿಯಿಂದ ಶಾಂತಿ", "ಭಕ್ತಿಯಿಂದ ಕೀರ್ತಿ" ಎಂದು ದೇವರೇ ನಿನ್ನನ್ನು ಹೆಸರಿಸುವರು ಎಂದೆಂದಿಗು. ಜೆರುಸಲೇಮೇಎದ್ದೇಳುಉನ್ನತಸ್ಥಾನದಲ್ಲಿ ನಿಲ್ಲು ಪೂರ್ವಾಭಿಮುಖವಾಗಿ ತಿರುಗಿಸು ನಿನ್ನ ಕಣ್ಣುಗಳನ್ನು. ದೇವರು ತಮ್ಮನ್ನು ನೆನೆಸಿಕೊಂಡರೆಂದು ಹಿಗ್ಗುತಿಹರು ನಿನ್ನ ಮಕ್ಕಳು ಪರಮಪಾವನನ ನುಡಿಯಂತೆ ಪೂರ್ವ ಪಶ್ಚಿಮದಿಂದ ಕೂಡಿಬರುತಹರು ನೋಡು. ಶತ್ರುಗಳಿಂದ ಒಯ್ಯಲ್ಪಟ್ಟು ಕಾಲ್ನಡೆಯಲ್ಲಿ ಅವರು ನಿನ್ನನ್ನು ಬಿಟ್ಟುಹೋದರು. ಈಗ ವೈಭವದಿಂದ ಹೊರಟು ಸಿಂಹಾಸನರೂಢರಾದವರಂತೆ ಬರುತ್ತಿಹರು ದೇವರೇ ಅವರನ್ನು ನಿನ್ನ ಬಳಿಗೆ ಬರಮಾಡುತ್ತಿಹರು. ಇಸ್ರಯೇಲ್ ದೈವಪ್ರಭೆಯಲ್ಲಿ ಸುರಕ್ಷಿತವಾಗಿ ಸಾಗಬೇಕಂದು ಅದಕ್ಕಾಗಿ ಉನ್ನತಬೆಟ್ಟಗಳುನೆಲೆಯಾದ ಗುಡ್ಡಗಳು ತಗ್ಗಬೇಕೆಂದು ಹಳ್ಳಕೊಳ್ಳಗಳು ತುಂಬಿ ಭರ್ತಿಯಾಗಿ ನೆಲಸಮವಾಗಬೇಕೆಂದು ದೇವರೇ ನೇಮಕಮಾಡಿರುವರು. ಆ ದೇವರ ಅಪ್ಪಣೆಯ ಪ್ರಕಾರ ಇಸ್ರಯೇಲಿಗೆ ನೆರಳು ನೀಡುವುವು ಕಾಡುಗಳು. ಸುಗಂಧವಾಸನೆಯನ್ನು ಬೀರುವುವು ಗಿಡಮರಗಳು. ದೇವರು ಇಸ್ರಯೇಲನ್ನು ನಡೆಸುವರು ತಮ್ಮ ಮಹಿಮೆ ಪ್ರಕಾಶದಲ್ಲೇ ಹರುಷದೊಡನೆ ತಮ್ಮಿಂದ ಬರುವ ಕರುಣೆ ಹಾಗು ನ್ಯಾಯನೀತಿಗಳೊಡನೆ.

ಕೀರ್ತನೆ: 126:1-2, 2-3, 4-5, 6

ಶ್ಲೋಕ: ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ ಎಂತೆಲೇ ನಾವು ಆನಂದಭರಿತರಾಗುವುದು ಉಚಿತ.

ಎರಡನೇ ವಾಚನ: ಫಿಲಿಪ್ಪಿಯರಿಗೆ  1:4-6, 8-11

ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ. ಏಕೆಂದರೆನಾನು ನಿಮ್ಮನ್ನು ಸಂದಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ. ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರಿಸುತ್ತಾಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ. ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆಇದಕ್ಕೆ ದೇವರೇ ಸಾಕ್ಷಿ. ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾಪೂರ್ಣ ಜ್ಞಾನ ಹಾಗೂ ವಿವೇಕದಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ. ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡುಪ್ರಭುಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ. ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿಅವರ ಮಹಿಮೆ ಬೆಳಗುವಂತೆ ಮಾಡಿವಿರಿ.

ಶುಭಸಂದೇಶ: ಲೂಕ 3:1-6

ಅದು ತಿಬೇರಿಯಸ್ ಚಕ್ರವರ್ತಿಯ ಆಡಲಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು. ಅನ್ನನು ಮತ್ತು ಕಾಯಿಫನು ಅಂದಿನ ಪ್ರದಾನ ಯಾಜಕರು. ಆಗ ಬೆಂಗಾಡಿನಲ್ಲಿ ಜಕರಿಯನ ಮಗ ಯೊವಾನ್ನನಿಗೆ ದೇವರ ಸಂದೇಶದ ಬೋದೆ ಆಯಿತು. ಆತನು ಜೋರ್ಡಾನ್ ನದಿಯ ಪರಿಸರ ಪ್ರಾಂತ್ಯದಲ್ಲೆಲ್ಲಾ ಸಂಚರಿಸುತ್ತಾ,  "ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು," ಎಂದು ಸಾರಿ ಹೇಳುತ್ತಿದ್ದನು. ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ:"  ಪ್ರಭುವಿಗಾಗಿ ಮಾರ್ಗವನ್ನು ಸಿದ್ದಪಡಿಸಿರಿಆತನ ಆಗಮನಕ್ಕಾಗಿ ಹಾದಿಯನ್ನು ಸರಾಗ ಮಾಡಿರಿ" ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ. ಹಳ್ಳಕೊಳ್ಳಗಳೆಲ್ಲ ಭರ್ತಿಯಾಗಬೇಕುಬೆಟ್ಟಗುಡ್ಡಗಳು ಮಟ್ಟವಾಗಬೇಕುಅಂಕು ಡೊಂಕಾದವು ನೆಟ್ಟಗಾಗಬೇಕುತಗ್ಗುಮುಗ್ಗಾದ ಹಾದಿಗಳು ಹಸನಾಗಬೇಕು. ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರೂ ಕಾಣುವರು."

08.12.2018

ಮೊದಲನೇ ವಾಚನ: ಆದಿಕಾಂಡ 3:9--15, 20

ಸರ್ವೇಶ್ವರನಾದ ದೇವರು, "ಎಲ್ಲಿರುತ್ತೀಯ ಎಂದು ಆದಾಮನನ್ನು ಕೂಗಿ ಕೇಳಿದರು. ಅದಕ್ಕೆ ಅವನು, "ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತುಬೆತ್ತಲೆಯಾಗಿದ್ದೇನಲ್ಲಾ ಎಂದ ಹೆದರಿ ಅವಿತುಕೊಂಡೆ," ಎಂದನು. "ನೀನು ಬೆತ್ತಲೆಯಾಗಿರುವಿಯೆಂದು ನಿನಗೆ ತಿಳಿಸಿದವರು ಯಾರು?" ಎಂದು ಕೇಳಿದರು. ಅದಕ್ಕೆ ಆದಾಮನು, "ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆಆ ಮರದ ಹಣ್ಣನ್ನು ನನಗೆ ಕೊಟ್ಟಳುನಾನು ತಿಂದೆ," ಎಂದನು. ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, "ಇದೇನು ನೀನು ಮಾಡಿದ್ದು?" ಎಃದು ಕೇಳಲು ಆಕೆಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆಮಾಡಿತು," ಎಂದು ಉತ್ತರ ಕೊಟ್ಟಳು. ಆಗ ಸರ್ವೇಶ್ವರನಾದ ದೇವರುಇಂತೆದಂರು ಸರ್ಪಕ್ಕೆ: ಈ ಪರಿ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶುಪ್ರಾಣಿಗಳಿಗಿಂತಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೇ ಜೀವಮಾನ ಪರಿಯಂತ. ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನುಕಚ್ಚುವೆ ನಿನಾ ಸಂತಾನದ ಹಿಮ್ಮಡಿಯನ್ನು." ಆದಾಮನು ತನ್ನ ಹೆಂಡತಿಗೆ  "ಹವ್ವ"  ಎಂದು ಹೆಸರಿಟ್ಟನು. ಎಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ.

 ಕೀರ್ತನೆ: 98:1, 2-3, 3-4
 ಶ್ಲೋಕ: ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನ ಎಸಗಿಹನಾತನು ಪವಾಡಕಾರ್ಯಗಳನು.

ಎರಡನೇ ವಾಚನ: ಎಫೆಸಿಯರಿಗೆ  1:3-6, 11-12

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರ ಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲೂ ನಿರಿಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.

 ಶುಭಸಂದೇಶ: ಲೂಕ 1:26-38

ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಿನಲ್ಲಿದೇವರು ಗಬ್ರಿಯೇಲ್ ದೂತರನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು  "ದೈವಾನುಗ್ರಹಭರಿತಳೇ",  ನಿನಗೆ ಶುಭವಾಗಲಿಸರ್ವೇಶ್ವರ ನಿಮ್ಮೊಡನೆ ಇದ್ದಾರೆ!" ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು.  'ಇದೆಂಥ ಶುಭಾಶಯ'  ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, "ಮರಿಯಾನೀನು ಅಂಜಬೇಕಾಗಿಲ್ಲದೇವರ ಅನುಗ್ರಹ ನಿನಗೆ ಲಭಿಸಿದೆಇಗೋನೀನು ಗರ್ಭವತಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ  'ಯೇಸು'  ಎಂಬ ಹೆಸರಿಡಬೇಕುಆತನು ಮಹಾಪುರುಷನಾಗುವನುಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಯಕೋಬನ ವಂಶವನ್ನು ಆತನು ಚಿರಕಾಲ ಆಳುವನುಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು," ಎಂದನು. ಅದಕ್ಕೆ ಮರಿಯಳು, "ಇದು ಆಗುವುದಾದರೂ ಹೇಗೆನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?" ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, "ಪವಿತ್ರಾತ್ಮ ನಿನ್ನ ಮೇಲೆ ಬರುವರುಪರಾತ್ಪರ ದೇವರ ಶಕ್ತಿಯು ನಿನ್ನನ್ನು ಆವರಿಸುವುದುಈ ಕಾರಣದಿಂದನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು  'ದೇವರ ಪುತ್ರ'  ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು: ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ. ದೇವರಿಗೆ ಅಸಾದ್ಯವಾದುದು ಯಾವುದೂ ಇಲ್ಲ," ಎಂದನು. ಆಗ ಮರಿಯಳು,  "ಇಗೋನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,"  ಎಂದಳು.  ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.

07.12.2018

ಸಾಧಾರಣ ಕಾಲದ ೩೫ನೇ ಶುಕ್ರವಾರ

ಮೊದಲನೇ ವಾಚನ: ಯೆಶಾಯ 29:17-24

ಸ್ವಾಮಿ ಸರ್ವೇಶ್ವರ ಹೀಗೆನ್ನುತ್ತಾರೆ: ಕೊಂಚಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು. ಆ ದಿನದಂದು ಕಿವುಡರು ಗ್ರಂಥ ವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು. ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು. ಏಕೆಂದರೆ ಭಯೋತ್ಪಾದಕರು ನಿಶ್ಯೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು. ಸುಳ್ಳುಸಾಕ್ಷಿ ಹೇಳಿ ತಪ್ಪು ಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತರಿಗೆ ನ್ಯಾಯತಪ್ಪಿಸುವವರು. ಹೀಗೆ ಅಧರ್ಮದಲ್ಲಿ ನಿರತವಾಗಿರುವ ಇವರೆಲ್ಲರು ನಿರ್ಮೂಲರಾಗುವರು. ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ: "ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ. ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು, ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು, ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನ ಮಗ್ನರಾಗುವರು.

ಕೀರ್ತನೆ: 27:1, 4, 13-14

ಶ್ಲೋಕ: ನನಗೆ ಬೆಳಕು, ನನಗೆ ರಕ್ಷೆ ಪ್ರಭುವೇ.

ಶುಭಸಂದೇಶ: ಮತ್ತಾಯ  9:27-31

ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, "ಸ್ವಾಮೀ, ದಾವೀದ ಕುಲಪುತ್ರರೇ," ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆ ಹೋದರು. ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. "ನಾನು ನಿಮ್ಮನ್ನು ಗುಣಪಡಿಸಬಲ್ಲನೆಂದು ನೀವು ವಿಶ್ವಾಸವಿಡುವತ್ತೀರೋ?" ಎಂದು ಯೇಸು ಪ್ರಶ್ನಿಸಿದರು. "ಹೌದು ಸ್ವಾಮೀ,  ಹೌದು," ಎಂದು ಉತ್ತರವಿತ್ತರು. ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, "ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ," ಎಂದರು. ಅವರಿಗೆ ದೃಷ್ಟಿ ಬಂದಿತು. "ಈ ವಿಷಯ ಯಾರಿಗೂ ತಿಳಿಸಬಾರದು, ಎಚ್ಚರಿಕೆ!" ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.

06.12.2018

ಮೊದಲನೇ ವಾಚನ: ಯೆಶಾಯ 26:1-6 

ಕಾಲ ಬರುವುದುಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನ್ನು: ನಮಗಿದೆ ಸುಭದ್ರ
ನಗರದೇವರೇ ಅದರ ದುರ್ಗಪ್ರಾಕಾರ ತೆರೆಯಿರಿ ನಗರ ದ್ವಾರಗಳನ್ನುಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆಸ್ಥಿರಚಿತ್ತವುಳ್ಳವರಿಗೆಚಿರಶಾಂತಿಯ ನೀ ನೀಡುವೆ. ಶಾಶ್ವತ ಆಶ್ರಯಗಿರಿಸ್ವಾಮಿ ಸರ್ವೇಶ್ವರನೇಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನ್ನುಕೆಡವಿ ನೆಲಸಮಮಾಡಿಧೂಳಾಗಿಸುವನು ಅವರು ವಾಸಮಾಡುವ ಉನ್ನತ ನಗರವನ್ನುಈಡು ಮಾಡುವುದು ಕಾಲ ತುಳಿತಕ್ಕೆದೀನದಲಿತರ ಪಾದ ತುಳಿತಕ್ಕೆ.

 ಕೀರ್ತನೆ: 118:1, 8-9, 19-21, 25-27a

 ಶ್ಲೋಕ: ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯಮಂಗಳ.

 ಶುಭಸಂದೇಶ: ಮತ್ತಾಯ  7:21, 24-27


"ನನ್ನನ್ನು 'ಸ್ವಾಮೀಸ್ವಾಮೀ,' ಎನ್ನುವ ಪ್ರತಿಯೊಬ್ಬನೂ ಸ್ವರ್ಗ ಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ನನ್ನ ಈ ಮಾತುಗಳನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು ನೆರೆ ಬಂತು ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಮಳೆ ಬಂತುನೆರೆ ಬಂತುಗಾಳಿ ಬೀಸಿ ಆ ಮನೇಗೆ ಅಪ್ಪಳಿಸಿತುಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!" ಎಂದರು ಯೇಸುಸ್ವಾಮಿ.