17.03.22 - ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ!

ಮೊದಲನೇ ವಾಚನ: ಯೆರೆಮೀಯ 17:5-10

ಇವು ಸರ್ವೇಶ್ವರನ ಮಾತುಗಳು: "ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು, ನರ ಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು! ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭ ಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು, ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು. ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ! ಅಂಥವನಿಗೆ ಸರ್ವೇಶ್ವರನಿಂದಲೇ ವಿಶ್ವಾಸ. ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆ ಬಿಡುವ, ಫಲ ನೀಡುವ ಮರಕ್ಕೆ ಸಮಾನನು ಆತ. ಮಾನವ ಹೃದಯ ಎಲ್ಲಕ್ಕಿಂತ ವಂಚಕ, ಅದಕ್ಕೆ ಅಂಟಿದೆ ಗುಣವಾಗದ ರೋಗ; ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ. ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.

ಕೀರ್ತನೆ: 1:1-2, 3, 4, 6
ಶ್ಲೋಕ: ಪ್ರಭುವಿನಲ್ಲೇ ಭರವಸೆಯಿಟ್ಟು ನಡೆವಾತನು ಧನ್ಯನು

ಶುಭಸಂದೇಶ: ಲೂಕ 16:19-31

ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ - ತೊಡುಗೆಗಳನ್ನೂ ನಯವಾದ ನಾರು ಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖ ಭೋಗಗಳಲ್ಲಿ ಮೈಮರೆಯುತ್ತಿದ್ದ. ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು. ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟು ಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. "ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗ ಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ, ಅವನ ಶವಸಂಸ್ಕಾರವೂ ಮುಗಿಯಿತು, ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿ ನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ. "ಓ ಪಿತಮಹಾ ಅಬ್ರಹಾಮ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆ ಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟು ಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು" ಎಂದು ದನಿಯೆತ್ತಿ ಮೊರೆಯಿಟ್ಟ. ಅದಕ್ಕೆ ಅಬ್ರಹಾಮನು, "ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ;  ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ. ಅಷ್ಟು ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿ ಬರಲೂ ಸಾಧ್ಯವಿಲ್ಲ." ಎಂದ. ಆಗ ಆ ಧನಿಕ, "ಪಿತಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು. ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾ ಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ," ಎಂದು ಬೇಡಿಕೊಂಡ ಅದಕ್ಕೆ ಅಬ್ರಹಾಮನು "ಅವನಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ," ಎಂದು ಉತ್ತರಕೊಟ್ಟ. "ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು," ಎಂದು ಧನಿಕನು ಮತ್ತೆ ಕೇಳಿಕೊಂಡ. ಅದಕ್ಕೆ ಅಬ್ರಹಾಮನು, "ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ. ಸತ್ತವರು ಜೀವಂತನಾಗಿ ಎದ್ದು ಬಂದರೂ ಅವರು ನಂಬುವುದಿಲ್ಲ," ಎಂದ."

ಮನಸಿಗೊಂದಿಷ್ಟು : ಚಿಂತಕರ ಪ್ರಕಾರ ಇಂದಿನ ಶುಭಸಂದೇಶದಲ್ಲಿ ಆ ಧನಿಕ ನರಕಕ್ಕೆ ಹೋಗಲು ಕಾರಣ ಅವನು ಮಾಡಿದ ಕ್ರಿಯೆಗಳಿಂದಲ್ಲ. ಬದಲಾಗಿ ಮಾಡದೆ ಹೋದ ಕಾರ್ಯಕ್ಕೆ. ತನ್ನ ಮನೆಯ ಮುಂದೆಯೇ  ಇದ್ದ ಭಿಕಾರಿಯ ಬಗ್ಗೆ ತೋರದ ಕರುಣೆ ಆತನನ್ನು ನರಕಕ್ಕೆ ತಳ್ಳಿತು. ನಮ್ಮೆಲ್ಲಾ ಧಾರ್ಮಿಕ ಕಾರ್ಯ, ಜಪ ,ತಪ, ಆಚರಣೆಯ ನಡುವೆಯೂ ನಮ್ಮಲ್ಲಿ ಪರರ ನೋವಿಗೆ ಸ್ಪಂದಿಸದ ಹೃದಯವಿಲ್ಲದಿದ್ದರೆ ವ್ಯರ್ಥವೇ. ಶುಭ ಸಂದೇಶದ ಮಾತುಗಳಿಗೆ ಗಮನ ಕೊಡದಿದ್ದರೆ ಎಚ್ಚರಿಕೆ ಇಲ್ಲದ ದಂಡನೆ ನಮಗೆ ಕಾದಿದೆ.

ಪ್ರಶ್ನೆ : ನಮ್ಮ ನಡುವಿನ ಲಾಜರರ ಬಗ್ಗೆ ನಮ್ಮ ಧೋರಣೆ ಎಂಥದ್ದು?


ತಪಸ್ಸು ಕಾಲದಲ್ಲಿನ ಇಲ್ಲಿಯವರೆಗಿನ ಪ್ರಶ್ನೆಗಳು 

 -   ತಪಸ್ಸು ಕಾಲದಲ್ಲಿ ನಮ್ಮ ಅಧ್ಯಾತ್ಮಿಕ ಗುರಿಗಳೇನು?

 -  ಶಿಲುಬೆ ಹೊತ್ತು ಹಿಂಬಾಲಿಸಲು ಸಿದ್ಧವಿದ್ದೇವೆಯೇ

 -  ದೇವರ ಮುಂದೆ ನಾವು ತೋರಬಹುದಾದ ಆಸ್ತಿಗಳಾವುವು

 -  ನಮಗೆ  ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

 -  ನಾವಿಂದು ಯಾವುದೆಲ್ಲವುಗಳಿಂದ ಜೀವಿಸುತ್ತಿದ್ದೇವೆ?

 -  ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು

 -  ನಮ್ಮ ಪ್ರಾರ್ಥನೆಯಲ್ಲಿ ನಿರರ್ಥಕ ಪದಗಳೆಷ್ಟುಸ್ವಾರ್ಥ ಬೇಡಿಕೆಗಳೆಷ್ಟು?

 -  ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?

 -  ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

 -  ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

-ನಾವು ಯೇಸುವಿಗೆ ಸ್ವಂತ ಜನರಾಗಿದ್ದೇವೆಯೇ ಅಥವಾ ಇನ್ನೂ ಅನ್ಯರಾಗೇ ಉಳಿದಿದ್ದೇವೆಯೇ?

-ಯೇಸುವಿನ ಈ ರೂಪಾಂತರದ ಘಟನೆ ನಮ್ಮೊಳಗಿನ ರೂಪಾಂತರಕ್ಕೆ ಸ್ಪೂರ್ತಿಯಾಗಬಲ್ಲದೇ?


’ದಾಸನಾಗಿರು’ ಎಂಬ ಯೇಸುವಿನ ವಾಕ್ಯಕ್ಕೆ ನಾವೆಷ್ಟು ಬದ್ಧ?

16.03.22 - "ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ"

ಮೊದಲನೇ ವಾಚನ: ಯೆರೆಮೀಯ 18:18-20

ಆಗ ಜನರು, "ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ," ಎಂದುಕೊಂಡರು. ಯೆರೆಮೀಯ: "ಸರ್ವೇಶ್ವರಾ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೋಡಿ. ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಕೀರ್ತನೆ: 31:5-6, 14, 15-16
ಶ್ಲೋಕ: ಪ್ರಭೂ, ಕಾಪಾಡಲಿ ಎನ್ನನು ನಿನ್ನಂತ ಪ್ರೇಮವು

ಶುಭಸಂದೇಶ: ಮತ್ತಾಯ 20:17-28


ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, "ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯ ಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು ಆತನು ಮರಣ ದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು, ಕೊರಡೆಗಳಿಂದ ಹೊಡೆಯುವರು. ಮತ್ತು ಶಿಲುಬೆಗೇರಿಸುವರು. ಅತನಾದರೋ ಮೂರನೇ ದಿನ ಪುನರುತ್ದಾನ ಹೊಂದುವನು," ಎಂದರು. ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. "ತಮ್ಮಿಂದ ನನಗೊಂದು ಉಪಕಾರ ಆಗಬೇಕು," ಎಂದು ಯೇಸುಸ್ವಾಮಿಯ ಪಾದಕ್ಕೆರಗಿದಳು. "ನಿನ್ನ ಕೋರಿಕೆ ಏನು"? ಎಂದರು ಯೇಸು. ಅದಕ್ಕೆ ಅವಳು, "ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು," ಎಂದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೇ" ಎಂದು ಪ್ರಶ್ನಿಸಿದರು. "ಹೌದು ಆಗುತ್ತದೆ," ಎಂದು ಅವರು ಮರು ನುಡಿದರು. ಆಗ ಯೇಸು "ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ, ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧ ಮಾಡಲಾಗಿದೆಯೋ ಅವರಿಗೇ ಸಿಗುವುದು." ಎಂದು ನುಡಿದರು. ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, "ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು  ಸೇವೆ ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ  ಬಂದಿದ್ದಾನೆ," ಎಂದು ಹೇಳಿದರು.

ಮನಸಿಗೊಂದಿಷ್ಟು : " ಎಲ್ಲರಿಗೂ ಸ್ವರ್ಗ ಬೇಕು, ಆದರೆ ಸಾಯಲು ಯಾರೂ ಸಿದ್ದರಿಲ್ಲ", ಎನ್ನುತ್ತಾನೆ ಚಿಂತಕನೊಬ್ಬ. ತನ್ನ ಮಕ್ಕಳಿಗೆ ಒಳಿತನ್ನು ಬಯಸುವ ಒಬ್ಬ ತಾಯಿಯ ಸಹಜ ಪ್ರೀತಿಯನ್ನು ಇಂದಿನ ಶುಭ ಸಂದೇಶದಲ್ಲಿ ಕಾಣುತ್ತೇವೆ. ಆದರೆ ಅದಕ್ಕೆ ಮೀರಿದ ಉದಾತ್ತವಾದ ಸಂದೇಶ ಕ್ರಿಸ್ತನದು. ಶ್ರೇಷ್ಠನಾಗ ಬಯಸುವವನು ಸೇವಕನಾಗಲಿ, ಪ್ರಥಮನು ದಾಸನಾಗಿರಲಿ ಎನ್ನುತ್ತಾರೆ ಯೇಸು. ಹೇಳುವುದು ಮಾತ್ರವಲ್ಲದೆ ತಾವೇ ಅದರಂತೆ ನಡೆದುಕೊಳ್ಳುತ್ತಿದ್ದಾರೆ. ಸೇವೆಗೆ, ನಮ್ರತೆಗೆ ನಮಗೆ ಇದಕ್ಕಿಂತ ಪ್ರೇರಣೆ ಬೇಕೆ?

ಪ್ರಶ್ನೆ :  ’ದಾಸನಾಗಿರು’ ಎಂಬ ಯೇಸುವಿನ ವಾಕ್ಯಕ್ಕೆ ನಾವೆಷ್ಟು ಬದ್ಧ?

15.03.22 - "ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು"

ಮೊದಲನೇ ವಾಚನ: ಯೆಶಾಯ 1:10, 16-20


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ. ತೊಳೆದು ಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕ್ರತ್ಯಗಳು ನೀಗಿ ಹೋಗಲಿ. ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ. ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು. ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ. ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”

ಕೀರ್ತನೆ: 79:8, 9, 11, 13
ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು. 

ಶುಭಸಂದೇಶ: ಮತ್ತಯ 23: 1-12


ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸುಸ್ವಾಮಿ ಇಂತೆಂದರು: “ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ. ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು. ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದಮಾಡಿಕೊಳ್ಳುತ್ತಾರೆ. ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ. ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ. ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.

14.03.22 - "ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು"

ಮೊದಲನೇ ವಾಚನ: ದಾನಿಯೇಲ 9:4-10 

ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ:  "ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ. "ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞೆಗಳನ್ನು ತೊರೆದು ಬಿಟ್ಟಿದ್ದೇವೆ. ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ. ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದುರಿಹೋಗಿರುವ ಎಲ್ಲ ಇಸ್ರಯೇಲರು ನಿಚಿಕೆಗೆ ಈಡಾಗಿದ್ದಾರೆ. ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಓಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.

ಕೀರ್ತನೆ: 79:8, 9, 11, 13
ಶ್ಲೋಕ: ಪ್ರಭೂ, ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದಿರಿ

ಶುಭಸಂದೇಶ: ಲೂಕ 6:36-38


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. "ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ, ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿ ಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿ ಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು: ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು," ಎಂದರು.

ಮನಸಿಗೊಂದಿಷ್ಟು : ವೈದ್ಯರು ರೋಗಿಗಳಿಗೆ ನೀಡುವ ಔಷದಿಯ ಚೀಟಿಯಂತೆ ಮನಸ್ಸಿನ ನಿರಾಳತೆ ಹಾಗೂ  ದೇವರ ಕೃಪೆಗೆ ಯೇಸು ಒಂದಷ್ಟು ಸಿದ್ಧ ಔಷದಿಗಳ ಪಟ್ಟಿ ನೀಡುತ್ತಾರೆ. ಔಷದಿಯಂತೆ ಇವು ನುಂಗುವಾಗ ಕಹಿ, ಅದರೆ ಅದು ಮನಸಿಗೆ, ನೀಡುವ ಚಿಕಿತ್ಸೆ ಅವರ್ಣನೀಯ.  ನಾವು-ಪರರು-ದೇವರು ಎಂಬ ತ್ರಿಕೋನವು ಒಂದಕ್ಕೊಂದು ಬೆಸೆದುಕೊಂಡು ಅದು ಈ ಜಗದಲ್ಲಿ ನಮ್ಮನ್ನು ಮಾನವತೆಯಿಂದ ದೈವತ್ವದೆಡೆಗೆ
ಪ್ರೇರೇಪಿಸುತ್ತಿದೆ. "ನಾನೇ ಬಡವ, ನಾನೇನು ಮಾಡಲು ಸಾಧ್ಯ?"ಎಂದುಕೊಳ್ಳುತ್ತಿದ್ದರೆ, 'ದಯಾವಂತರಾಗಿರಿ ಸಾಕು' ಎನ್ನುತ್ತಿದ್ದಾರೆ ಯೇಸು.     

ಪ್ರಶ್ನೆ : ದೇವರಿಂದ ಅಗಾಧವಾಗಿ ಪಡೆಯುತ್ತಿರುವ ನಾವು, ಪರರಿಗೆ ನೀಡುತ್ತಿರುವ ಅಳತೆ ಸರಿಯಾಗಿದೆಯೇ?


ಪಸ್ಸು ಕಾಲದಲ್ಲಿನ ಇಲ್ಲಿಯವರೆಗಿನ ಪ್ರಶ್ನೆಗಳು 


 -   ತಪಸ್ಸು ಕಾಲದಲ್ಲಿ ನಮ್ಮ ಅಧ್ಯಾತ್ಮಿಕ ಗುರಿಗಳೇನು?

 -  ಶಿಲುಬೆ ಹೊತ್ತು ಹಿಂಬಾಲಿಸಲು ಸಿದ್ಧವಿದ್ದೇವೆಯೇ

 -  ದೇವರ ಮುಂದೆ ನಾವು ತೋರಬಹುದಾದ ಆಸ್ತಿಗಳಾವುವು

 -  ನಮಗೆ  ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

 -  ನಾವಿಂದು ಯಾವುದೆಲ್ಲವುಗಳಿಂದ ಜೀವಿಸುತ್ತಿದ್ದೇವೆ?

 -  ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು

 -  ನಮ್ಮ ಪ್ರಾರ್ಥನೆಯಲ್ಲಿ ನಿರರ್ಥಕ ಪದಗಳೆಷ್ಟುಸ್ವಾರ್ಥ ಬೇಡಿಕೆಗಳೆಷ್ಟು?

 -  ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?

 -  ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

 -  ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

-ನಾವು ಯೇಸುವಿಗೆ ಸ್ವಂತ ಜನರಾಗಿದ್ದೇವೆಯೇ ಅಥವಾ ಇನ್ನೂ ಅನ್ಯರಾಗೇ ಉಳಿದಿದ್ದೇವೆಯೇ?


ಯೇಸುವಿನ ಈ ರೂಪಾಂತರದ ಘಟನೆ ನಮ್ಮೊಳಗಿನ ರೂಪಾಂತರಕ್ಕೆ ಸ್ಪೂರ್ತಿಯಾಗಬಲ್ಲದೇ?

13.03.22 - "ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು, ಈತನ ಮಾತಿಗೆ ಕಿವಿಗೊಡಿರಿ,"

ಮೊದಲನೇ ವಾಚನ: ಆದಿಕಾಂಡ 15:5-12, 17-18


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, " ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!" ಎಂದರು. ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು. ಸರ್ವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: "ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ," ಎಂದರು. ಅದಕ್ಕೆ ಅಬ್ರಾಮನು, "ಸರ್ವೇಶ್ವರ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?" ಎಂದನು. ಸರ್ವೇಶ್ವರ ಪ್ರತ್ಯುತ್ತರವಾಗಿ, "ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿ ಪಾರಿವಾಳವನ್ನು ತೆಗೆದುಕೊಂಡು ಬಾ," ಎಂದರು. ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳುಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ. ಆ ಪ್ರಾಣಿಗಳ ತುಂಡುಗಳ ಮೇಲೆ ರಣ ಹದ್ದುಗಳು ಎರಗಿದಾಗ - ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು. ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು. ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: "ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,"

ಕೀರ್ತನೆ: 27:1, 7-8, 8-9, 13-14
ಶ್ಲೋಕ: ನನಗೆ ಬೆಳಕು ರಕ್ಷೆ ಪ್ರಭುವೇ

ಎರಡನೇ ವಾಚನ; ಫಿಲಿಪ್ಪಿಯರಿಗೆ 3:17-4:1

 ಸಹೋದರರೇ, ನೀವು ನನ್ನನ್ನು ಅನುಸರಿಸಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ. ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ. ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ. ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧರಕರಾದ ಪ್ರಭು ಯೇಸುಕ್ರಿಸ್ತರು ಪನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ. ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ಸಶ್ವರವಾದ ನಮ್ಮ ದೀನ ದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು. ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.

ಶುಭಸಂದೇಶ: ಲೂಕ 9:28-36

ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತನ್ನೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನು ಹತ್ತಿದರು. ಪ್ರಾರ್ಥನೆ ಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು. ಇದ್ದಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು. ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣ ತ್ಯಾಗಮಾಡಿ ದೈವೇಚ್ಛೆಯನ್ನು ನೆರವೇರಿಸಲಿದ್ದ ವಿಷಯವಾಗಿ  ಸಂಭಾಷಿಸುತ್ತಿದ್ದರು. ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು. ಅವರಿಬ್ಬರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, "ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣಿಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು," ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ. ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು. ಅದರೊಳಗಿಂದ, "ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು ಈತನ ಮಾತಿಗೆ ಕಿವಿಗೊಡಿರಿ," ಎಂಬ ವಾಣಿ ಕೇಳಿಸಿತು. ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ. ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ ತತ್ಕಾಲ ಮೌನದಿಂದ ಇದ್ದರು.


ಮನಸಿಗೊಂದಿಷ್ಟು : ಗಾಢ ನಿದ್ರೆಯಲ್ಲಿದ್ದ ಶಿಷ್ಯರು ಎಚ್ಚೆತ್ತಾಗ ಕ್ರಿಸ್ತನ ಮಹಿಮೆಯನ್ನು ನೋಡಿದರು ಎನ್ನುತ್ತದೆ ಇಂದಿನ ಶುಭ ಸಂದೇಶ. ನಮ್ಮ ಜೀವನದಲ್ಲೂ ಅನೇಕ ಸಲ ನಾವು ಕ್ರಿಸ್ತನ ಮಹಿಮೆಯನ್ನು ಕಾಣಲು ನಮ್ಮ ಅಧ್ಯಾತ್ಮಿಕ ನಿದ್ದೆಯೇ ಅಡ್ಡಿಯಾಗುತ್ತದೆ. ಗೊಂದಲಗಳು ನಮ್ಮನ್ನು ಕಾಡಿದಾಗ ದೇವರ ಮಾತು ಕೇಳಲು ನಮ್ಮ ಮನಸು ಜಾಗೃತವಾಗಿರಬೇಕಾಗುತ್ತದೆ. ಶುಭ ಸಂದೇಶದಲ್ಲಿ ಶಿಷ್ಯರಿಗೆ ಕೇಳಿದ ವಾಣಿಯಂತೆ ದೈವ ವಾಕ್ಯಗಳು ನಮ್ಮನ್ನು ಮುನ್ನಡೆಸುತ್ತಿರಲಿ ಎಂಬುದು ನಮ್ಮ ಗುರಿಯಾಗಲಿ.

ಪ್ರಶ್ನೆ :ಯೇಸುವಿನ ಈ ರೂಪಾಂತರದ ಘಟನೆ ನಮ್ಮೊಳಗಿನ ರೂಪಾಂತರಕ್ಕೆ ಸ್ಪೂರ್ತಿಯಾಗಬಲ್ಲದೇ?


ತಪಸ್ಸು ಕಾಲದಲ್ಲಿನ ಇಲ್ಲಿಯವರೆಗಿನ ಪ್ರಶ್ನೆಗಳು 


Ø   ತಪಸ್ಸು ಕಾಲದಲ್ಲಿ ನಮ್ಮ ಅಧ್ಯಾತ್ಮಿಕ ಗುರಿಗಳೇನು?

Ø  ಶಿಲುಬೆ ಹೊತ್ತು ಹಿಂಬಾಲಿಸಲು ಸಿದ್ಧವಿದ್ದೇವೆಯೇ? 

Ø  ದೇವರ ಮುಂದೆ ನಾವು ತೋರಬಹುದಾದ ಆಸ್ತಿಗಳಾವುವು? 

Ø  ನಮಗೆ  ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

Ø  ನಾವಿಂದು ಯಾವುದೆಲ್ಲವುಗಳಿಂದ ಜೀವಿಸುತ್ತಿದ್ದೇವೆ?

Ø  ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು? 

Ø  ನಮ್ಮ ಪ್ರಾರ್ಥನೆಯಲ್ಲಿ ನಿರರ್ಥಕ ಪದಗಳೆಷ್ಟುಸ್ವಾರ್ಥ ಬೇಡಿಕೆಗಳೆಷ್ಟು?

Ø  ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?

Ø  ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

Ø  ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

Øನಾವು ಯೇಸುವಿಗೆ ಸ್ವಂತ ಜನರಾಗಿದ್ದೇವೆಯೇ ಅಥವಾ ಇನ್ನೂ ಅನ್ಯರಾಗೇ ಉಳಿದಿದ್ದೇವೆಯೇ? 

12.03.22 - "ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ."

ಮೊದಲನೇ ವಾಚನ: ಧರ್ಮೋಪದೇಶಕಾಂಡ 26:16-19

ಮೋಶೆ ಜನರಿಗೆ ಹೀಗೆಂದನು: "ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಗೊಂಡು ನಡೆಯಬೇಕು. ನಮಗೆ ಸರ್ವೇಶ್ವರನೇ ದೇವರಾಗಿರುವರೆಂದೂ ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿ ನಿರ್ಣಯಗಳನ್ನು ಕೈಗೊಂಡು ಅವರ ಮಾತಿಗೆ ಲಕ್ಷ್ಯೆಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ. ಸರ್ವೇಶ್ವರಸ್ವಾಮಿಯಾದರೋ ನಿಮ್ಮ ವಿಷಯದಲ್ಲಿ, 'ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯ ಜನರಾಗಿರುವರು. ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿ ಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,' ಎನ್ನುವರು."

ಕೀರ್ತನೆ: 119:1-2, 4-5, 7-8
ಶ್ಲೋಕ: ಪ್ರಭುವಿನ ಶಾಸ್ತ್ರಾನುಸಾರ ನಡೆವವರು ಧನ್ಯರು

ಶುಭಸಂದೇಶ: ಮತ್ತಾಯ 5:43-48

 




ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು" ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯ ಜನರೂ ಹಾಗೆ  ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ."

ಮನಸಿಗೊಂದಿಷ್ಟು : ತಮ್ಮವರು ಹಾಗೂ ಅನ್ಯ ಜನರು ಎಂಬ ವಿಂಗಡಣೆಯನ್ನು ಯೇಸು ಮಾಡುತ್ತಾರೆ. ಈ ವಿಂಗಡನೆಗೆ ಬೇರೆ ಯಾವ ಮಾನದಂಡವೂ ಇಲ್ಲ. ಅದು ಕೇವಲ ತಮ್ಮ ವಾಕ್ಯಗಳಂತೆ ನಡೆಯುವವರು ಮತ್ತು ನಡೆಯದವರು ಎಂಬುದು ಮಾತ್ರ. ಯೇಸುವಿನ ಮಾತುಗಳಂತೆ ನಡೆಯುವವರು ಅನುಸರಿಸಬೇಕಾದ ಮಾರ್ಗ ಕಠಿಣ ಆದರೆ ಸುಂದರ. ಆದರೆ ಅದರಿಂದ ದೊರಕುವ ಬಹುಮಾನ ಸ್ವರ್ಗದ ತಂದೆಯ ಮಕ್ಕಳಾಗುವ ಸೌಭಾಗ್ಯ ಹಾಗೂ ತಂದೆಯಂತೆ ಪರಿಪೂರ್ಣವಾಗುವ ಪರಿಪೂರ್ಣತೆ

ಪ್ರಶ್ನೆ : ನಾವು ಯೇಸುವಿಗೆ ಸ್ವಂತ ಜನರಾಗಿದ್ದೇವೆಯೇ ಅಥವಾ ಇನ್ನೂ ಅನ್ಯರಾಗೇ ಉಳಿದಿದ್ದೇವೆಯೇ? 



ತಪಸ್ಸು ಕಾಲದಲ್ಲಿನ ಇಲ್ಲಿಯವರೆಗಿನ ಪ್ರಶ್ನೆಗಳು 


Ø   ತಪಸ್ಸು ಕಾಲದಲ್ಲಿ ನಮ್ಮ ಅಧ್ಯಾತ್ಮಿಕ ಗುರಿಗಳೇನು?

Ø  ಶಿಲುಬೆ ಹೊತ್ತು ಹಿಂಬಾಲಿಸಲು ಸಿದ್ಧವಿದ್ದೇವೆಯೇ? 

Ø  ದೇವರ ಮುಂದೆ ನಾವು ತೋರಬಹುದಾದ ಆಸ್ತಿಗಳಾವುವು? 

Ø  ನಮಗೆ  ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

Ø  ನಾವಿಂದು ಯಾವುದೆಲ್ಲವುಗಳಿಂದ ಜೀವಿಸುತ್ತಿದ್ದೇವೆ?

Ø  ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು? 

Ø  ನಮ್ಮ ಪ್ರಾರ್ಥನೆಯಲ್ಲಿ ನಿರರ್ಥಕ ಪದಗಳೆಷ್ಟುಸ್ವಾರ್ಥ ಬೇಡಿಕೆಗಳೆಷ್ಟು?

Ø  ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?

Ø  ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

Ø  ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

30.08.2026 - ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

  ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:7-9 ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂ...