ಮೊದಲನೇ ವಾಚನ: ಪ್ರಕಟಣಾ ಗ್ರಂಥ 20:1-4, 11--21:2
ಕೀರ್ತನೆ: 84:3, 4, 5-6, 8
ಶ್ಲೋಕ: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ
ಶುಭಸಂದೇಶ: ಲೂಕ 21:29-33
ಮೊದಲನೇ ವಾಚನ: ಪ್ರಕಟಣಾ ಗ್ರಂಥ 20:1-4, 11--21:2
ಕೀರ್ತನೆ: 84:3, 4, 5-6, 8
ಶ್ಲೋಕ: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ
ಶುಭಸಂದೇಶ: ಲೂಕ 21:29-33
ಮೊದಲನೇ ವಾಚನ: ಪ್ರಕಟಣಾ ಗ್ರಂಥ 18:1-2, 21-23; 19:1-3, 9
ಕೀರ್ತನೆ: 100:2, 3, 4, 5
ಶ್ಲೋಕ: ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು
ಶುಭಸಂದೇಶ: ಲೂಕ 21:20-28
ಮೊದಲನೇ ವಾಚನ: ಪ್ರಕಟಣಾ ಗ್ರಂಥ 15:1-4
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು. ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ :
ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ !ಕೀರ್ತನೆ: 98:1, 2-3, 7-8, 9
ಶುಭಸಂದೇಶ: ಲೂಕ 21:12-19
ಮೊದಲನೇ ವಾಚನ: ಪ್ರಕಟಣಾ ಗ್ರಂಥ 14:14-19
ಕೀರ್ತನೆ: 96:10, 11-12, 13
ಶ್ಲೋಕ: ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವರು ಖರೆಯಾಗಿ
ಶುಭಸಂದೇಶ: ಲೂಕ 21:5-11
“ಈ ಮಹಾದೇವಾಲಯವು ಅಂದವಾದ ಕಲ್ಲುಗಳಿಂದಲೂ ಅಮೂಲ್ಯವಾದ ಕೊಡುಗೆಗಳಿಂದಲೂ ಎಷ್ಟು ಅಲಂಕೃತವಾಗಿದೆ!” ಎಂದು ಕೆಲವರು ಮಾತನಾಡುತ್ತಿದ್ದರು. ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು. “ಗುರುವೇ, ಇದು ಸಂಭವಿಸುವುದು ಯಾವಾಗ? ಇದೀಗಲೆ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?” ಎಂದು ಕೆಲವರು ಕೇಳಿದರು. ಅದಕ್ಕೆ ಯೇಸುಸ್ವಾಮಿ, “ನೀವು ಮೋಸ ಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ. ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು. ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು; ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.
ಮೊದಲನೇ ವಾಚನ: ಪ್ರಕಟಣಾ ಗ್ರಂಥ 14:1-3, 4-5
ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು. ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು. ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ. ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು. ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.
ಕೀರ್ತನೆ: 24:1-2, 3-4, 5-6
ಶುಭಸಂದೇಶ: ಲೂಕ 21:1-4 12:41-44
ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು. ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. ಅದನ್ನು ಕಂಡ ಯೇಸು, “ಈ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.
ಮೊದಲನೇ ವಾಚನ: ಪ್ರಕಟಣಾ ಗ್ರಂಥ 11:4-12
ಕೀರ್ತನೆ: 144:1, 2, 9-10
ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನಾಶ್ರಯ ದುರ್ಗಕೆ
ಶುಭಸಂದೇಶ: ಲೂಕ 20:27-40
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...