13.05.24 - "ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,”

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 19:1-8


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು, “ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು. ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು. ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು. ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು. ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು. ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು. ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.

ಕೀರ್ತನೆ: 68:2-3, 4-5, 6-7

ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!

ಶುಭಸಂದೇಶ: ಯೊವಾನ್ನ 16:29-33



ಶಿಷ್ಯರು ಯೇಸುವಿಗೆ, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ. ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು. ಆಗ ಯೇಸು ಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ? ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ನಿಮಗೆ ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.

12.05.24 - ‘ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ'

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11

ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು. ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು. ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. ಯೇಸುಸ್ವಾಮಿಯ ಸ್ವರ್ಗಾರೋಹಣ ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ ಸ್ಥಾಪಿಸುವಿರೋ?” ಎಂದು ಕೇಳಿದರು.ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ. ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು. ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು. “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತಿರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿ ಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.

ಕೀರ್ತನೆ: 47:2-3, 6-7, 8-9
ಶ್ಲೋಕ: ಏರಿದನು ಪ್ರಭು ಜಯಜಯಕಾರದೊಂದಿಗೆ, ಆರೋಹಣವಾದನು ತುತೂರಿನಾದದ ಜೊತೆಗೆ

ಎರಡನೇ ವಾಚನ: ಎಫೆಸಿಯರಿಗೆ 1:17-23

ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೇಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.

ಶುಭಸಂದೇಶ: ಮಾರ್ಕ 16: 15-20


‘ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ. ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು. ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು; ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷ ಪದಾರ್ಥಗಳನ್ನೇನಾದರೂ ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು. ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾಶ್ರ್ವದಲ್ಲಿ ಆಸೀನರಾದರು. ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು.

11.05.24 - "ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18: 23-28

ಪೌಲನು ಅಂತಿಯೋಕ್ಯದಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು. ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು. ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು. ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು. ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು.

ಕೀರ್ತನೆ: 47:2-3, 8-9, 10
ಶ್ಲೋಕ: ದೇವನು ಭೂಮಂಡಲಕ್ಕೆಲ್ಲಾ ಒಡೆಯನು

ಪರಾತ್ಪರನಾದ ಪ್ರಭುವು ಘನಗಂಭೀರನು I
ಪ್ರಪಂಚಕ್ಕೆಲ್ಲ ರಾಜಾಧಿರಾಜನು II
ಜನಾಂಗಗಳನಾತ ನಮಗಧೀನಪಡಿಸಿಹನು I
ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II
ವಹಿಸಿಕೊಂಡನು ದೇವನು ಸರ್ವಾಧಿಪತ್ಯ I

ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II
ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I
ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II

ಭೂಪಾಲರೆಲ್ಲರೂ ದೇವರಿಗೆ ಅಧೀನರು I
ಸರ್ವೋನ್ನತನುಸಾರ್ವಭೌಮನು ದೇವರು II

ಶುಭಸಂದೇಶ:  ಯೊವಾನ್ನ 16:23-28


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು. ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು. “ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು. ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ. ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ. ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.

10.05.24 - "ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು. ಅಂತೆಯೇ ಪೌಲನು ಒಂದೂವರೆ ವರ್ಷಕಾಲ ಅಲ್ಲಿದ್ದು ದೇವರವಾಕ್ಯವನ್ನು ಜನರಿಗೆ ಬೋಧಿಸಿದನು. ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು. “ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು. ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ. ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು. ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ. ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು. 

ಕೀರ್ತನೆ: 47:2-3, 4-5, 6-7
ಶ್ಲೋಕ: ದೇವನು ಭೂಮಂಡಲಕ್ಕೆಲ್ಲಾ ಒಡೆಯನು

ಪರಾತ್ಪರನಾದ ಪ್ರಭುವು ಘನಗಂಭೀರನು I
ಪ್ರಪಂಚಕ್ಕೆಲ್ಲ ರಾಜಾಧಿರಾಜನು II
ಜನಾಂಗಗಳನಾತ ನಮಗಧೀನಪಡಿಸಿಹನು I
ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II

ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I
ಪ್ರತಿಷ್ಠಿತರು ನಾವುಆತನೊಲಿದ ಯಕೋಬಿಗೆ II
ಏರಿದನು ಪ್ರಭು ಜಯಜಯಕಾರದೊಂದಿಗೆ I
ಆರೋಹಣವಾದನು ತುತೂರಿನಾದ ಜೊತೆಗೆ II

ಕೀರ್ತಿಸಿರಿನಮ್ಮ ದೇವನನು ಸಂಕೀರ್ತಿಸಿರಿ I
ಕೀರ್ತಿಸಿರಿನಮ್ಮ ರಾಜನನು ಸಂಕೀರ್ತಿಸಿರಿ II
ದೇವನು ಭೂಮಂಡಲಕ್ಕೆಲ್ಲಾ ಒಡೆಯನು I

ಕೀರ್ತನೆಯಿಂದ ಕೊಂಡಾಡಿರಿ ಆತನನು II


ಶುಭಸಂದೇಶ: ಯೊವಾನ್ನ 16:20-23


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು. ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ; ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ. ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು."

09.05.24 - "ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು."

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:1-8

ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು. ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು. ಅವರು ತನ್ನಂತೆಯೇ ಗುಡಾರ ಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸ ಮಾಡುತ್ತಾ ಬಂದನು. ಪ್ರತಿ ಸಬ್ಬತ್‍ ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು. ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು. ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು. ಅಂತೆಯೇ ಅವರನ್ನು ಬಿಟ್ಟು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದ ತೀತಯುಸ್ತ ಎಂಬವನ ಮನೆಗೆ ಹೋದನು. ಅವನ ಮನೆ ಪ್ರಾರ್ಥನಾ ಮಂದಿರದ ಪಕ್ಕದಲ್ಲೇ ಇತ್ತು. ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.

ಕೀರ್ತನೆ: 98:1, 2-3, 3-4
ಶ್ಲೋಕ: ರಾಷ್ಟ್ರಗಳಿಗೆ ತೋರಿಸಿಹನು ಪ್ರಭು ಜೀವೋದ್ಧಾರಕ ಶಕ್ತಿಯನು

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು 
ಎಸಗಿಹನಾತನು ಪವಾಡಕಾರ್ಯಗಳನು I
ಗಳಿಸಿತಾತನ ಕೈ ಪೂತಭುಜ ಗೆಲುವನು II

ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II
ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

ಭೂನಿವಾಸಿಗಳೇಮಾಡಿರಿ ಜಯಕಾರ ಪ್ರಭುವಿಗೆ I

ಶುಭಸಂದೇಶ:  ಯೊವಾನ್ನ16:16-20

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ,” ಎಂದರು ಯೇಸುಸ್ವಾಮಿ. ಇದನ್ನು ಕೇಳಿದ ಕೆಲವು ಮಂದಿ ಶಿಷ್ಯರು, “ಇದೇನು ಇವರು ಹೇಳುತ್ತಿರುವುದು? ‘ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನೀವು ನನ್ನನ್ನು ಪುನಃ ಕಾಣುವಿರಿ ಮತ್ತು ಪಿತನಲ್ಲಿಗೆ ನಾನು ಹೋಗುತ್ತೇನೆ,’ ಎನ್ನುತ್ತಾರಲ್ಲ?  ತುಸುಕಾಲ’ ಎಂದರೇನು? ಇವರ ಮಾತೇ ನಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತನಾಡತೊಡಗಿದರು. ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮ ನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು? ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಅತ್ತು ಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು."

08.05.24 - "ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 17:15, 22-18:1

ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದು ಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು. ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ. ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ. ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ. ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ. ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ. ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ. ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’ “ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು. ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ. ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.” ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು. ಹೀಗೆ ಪೌಲನು ಆ ಸಭೆಯಿಂದ ನಿರ್ಗಮಿಸಿದನು. ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.  ಇದಾದಮೇಲೆ ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು.

ಕೀರ್ತನೆ: 148:1-2, 11-12, 13, 14

ಶ್ಲೋಕ: ಭೂಮ್ಯಾಕಾಶ ಮೀರಿದೆ ಆತನ ಮಹಿಮೆ

ಹೊಗಳಿರಿ ಸ್ವರ್ಗದಿಂದ ಪ್ರಭುವನು I
ವಂದಿಸಿ ಮಹೋನ್ನತದಲಿ ಆತನನು II
ಆತನ ಸಮಸ್ತ ದೂತರೇಸ್ತುತಿಸಿ ಆತನನು I
ಆತನ ಎಲ್ಲಾ ಗಣಗಳೇಹೊಗಳಿ ಆತನನು II

ಭೂರಾಜರುಎಲ್ಲ ಜನಾಂಗಗಳು I
ಅಧಿಕಾರಿಗಳುದೇಶಾಧಿಪತಿಗಳು II
ಯುವಕರೂ ಯುವತಿಯರೂ I
ಮುದುಕರೂ ಮಕ್ಕಳೂ II

ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I
ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I
ಆತನ ಮಹತ್ತಾದ ಏಕೈಕ ನಾಮವನು II

ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I
ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I
ತನ್ನ ಆಪ್ತಜನರಾದ ಇಸ್ರಯೇಲರಿಗೆ I

ಅಲ್ಲೆಲೂಯII

ಶುಭಸಂದೇಶ: ಯೊವಾನ್ನ 16:12-15


ಯೆಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು:  "ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸದ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು. ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು. ಅವರು, ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು. ಪಿತನಿಗೆ ಇರುವುದೆಲ್ಲವೂ ನನ್ನದೇ. ಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು."

07.05.24 - "ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:22-34

ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು. ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು. ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು. ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು. ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು. “ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು. ಅನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನೆಯಲ್ಲಿದ್ದ ಎಲ್ಲರಿಗೂ ಬೋಧಿಸಿದರು. ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು. ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.

ಕೀರ್ತನೆ: 138:1-2, 2-3, 7-8
ಶ್ಲೋಕ: ಇಕ್ಕಟಿನಲ್ಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭೂ ಪ್ರಾಣವನು.

ಹೃದಯಪೂರ್ವಕ ವಂದನೆ ಪ್ರಭು ನಿನಗೆ I
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I
ನಿನ್ನ ಪ್ರೀತಿಸತ್ಯತೆಗಳನಾಮ ನುಡಿಗಳ ಮಹತ್ವದ ಪ್ರಯುಕ್ತ II

ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I
ನಿನ್ನ ಪ್ರೀತಿಸತ್ಯತೆಗಳನಾಮ ನುಡಿಗಳ ಮಹತ್ವದ ಪ್ರಯುಕ್ತ II
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I
ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II

ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭುಪ್ರಾಣವನು I
ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II
ಸಿದ್ಧಿಗೆ ತರುವೆ ನೀ ಪ್ರಭುನನ್ನ ಕಾರ್ಯವನು I
ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I
ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II

ಯೊವಾನ್ನ 16:5-11


“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು. ಪಾಪದ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಅವರು ನನ್ನಲ್ಲಿ ವಿಶ್ವಾಸ ಇಡಲಿಲ್ಲ. ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ. ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...