24.11.24

ಮೊದಲನೇ ವಾಚನ : ದಾನಿಯೇಲ 7:13-14 

ನಾನು ಕಂಡರಾತ್ರಿಯ ಕನಸ್ಸಿನಲ್ಲಿ ನರಪುತ್ರ-ನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು. ಸಕಲ ರಾಷ್ಟ್ರ-ಕುಲ-ಭಾಷೆಗಳವರು. ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು,  ಅವನ ರಾಜ್ಯ ಎಂದಿಗೂ ಅಳಿಯದು! 

ಕೀರ್ತನೆ:93:3, 1-2, 5 
ಶ್ಲೋಕ: ವಹಿಸಿಹನು ಪ್ರಭು ರಾಜ್ಯಾಧಿಕಾರವನು. 

ಎರಡನೇ ವಾಚನ: ಪ್ರಕಟನೆ 1:5-8 

ನಂಬಲರ್ಹವಾದ ಸಾಕ್ಷಿಯೂ ಮೃತ್ಯು-ವಿನಿಂದ ಪುನರುತ್ದಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್, ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನ್ನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು ಹೌದು, ಅದರಂತೆಯೇ ಆಗುವುದು, ಆಮೆನ್. "ಅ'ಕಾರವೂ, 'ಳ' ಕಾರವೂ ನಾನೇ. ವರ್ತಮಾನಕಾಲದಲ್ಲಿ, 'ಇರುವಾತನೂ' ಭೂತಕಾಲದಲ್ಲಿ 'ಇದ್ಧಾತನೂ' ಭವಿಷ್ಯತ್ಕಾಲದಲ್ಲಿ 'ಬರುವಾತನೂ' ಸರ್ವಶಕ್ತನೂ ನಾನೇ" ಎಂದು ಪ್ರಭು ದೇವರು ನುಡಿಯುತ್ತಾರೆ. 

ಶುಭಸಂದೇಶ ಯೊವಾನ್ನ  18:33-37 

ಆಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸುಸ್ವಾಮಿಯನ್ನು ಕರೆಯಿಸಿ, "ನೀನು ಯೆಹೂದ್ಯರ ಅರಸನೋ?" ಎಂದು ಕೇಳಿದನು. ಅದಕ್ಕೆ ಯೇಸು, "ನೀವಾಗಿಯೇ ಇದನ್ನು ಹೇಳುತ್ತಿರುವಿರೋ ಅಥವಾ ಬೇರೆ ಯಾರಾದರೂ ನನ್ನನ್ನು ಕುರಿತು ಹೀಗೆ ಹೇಳಿದರೋ?" ಎನ್ನಲು ಪಿಲಾತನು, "ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನರು ಮತ್ತು ಮುಖ್ಯಯಾಜಕರು ನಿನ್ನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ ನೀನು ಏನು ಮಾಡಿದ್ದೀಯ?" ಎಂದು ಕೇಳಿದನು. ಅದಕ್ಕೆ ಯೇಸು, "ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ." ಎಂದರು. ಪಿಲಾತನು, "ಹಾಗಾದರೆ ನೀನೊಬ್ಬ ಅರಸನೋ?" ಎಂದು ಕೇಳಲು ಯೇಸು,' "ಅರಸ, ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ," ಎಂದು ಹೇಳಿದರು.

23.11.24 - "ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,”

ಮೊದಲನೇ ವಾಚನಪ್ರಕಟಣಾ ಗ್ರಂಥ 11:4-12



ಯೋವಾನ್ನನಾದ ನನಗೆ ಈ ವಾಣಿಯು ಕೇಳಿಸಿತು: ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ. ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ. ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿ ಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ. ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ. ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು. ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು. ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು. ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.

ಕೀರ್ತನೆ144:1, 2, 9-10

ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನಾಶ್ರಯ ದುರ್ಗಕೆ 

ಶುಭಸಂದೇಶ: ಲೂಕ 20:27-40


ಸತ್ತಮೇಲೆ ಪುನರುತ್ಥಾನ ಇಲ್ಲ, ಎಂದು ವಾದಿಸುತ್ತಿದ್ದ ಸದ್ದುಕಾಯರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು ಈ ಪ್ರಶ್ನೆ ಹಾಕಿದರು: “ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ? ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ಮದುವೆಯಾಯಿತು; ಆದರೆ ಅವನು ಮಕ್ಕಳಿಲ್ಲದೆ ಮೃತನಾದ. ಅವನ ಹೆಂಡತಿಯನ್ನು ಎರಡನೆಯವನು, ಅನಂತರ ಮೂರನೆಯವನು, ತದನಂತರ ಮಿಕ್ಕವರು, ಹೀಗೆ ಏಳುಮಂದಿಯೂ ಒಬ್ಬರಾದ ಮೇಲೆ ಒಬ್ಬರು ಮದುವೆಯಾಗಿ ಸಂತಾನ ಇಲ್ಲದೆಯೇ ನಿಧನರಾದರು. ಕಟ್ಟಕಡೆಗೆ ಆ ಮಹಿಳೆಯೂ ಮರಣಹೊಂದಿದಳು. ಹೀಗಿರುವಲ್ಲಿ ಪುನರುತ್ಥಾನದ ದಿನ ಸತ್ತವರೆಲ್ಲರೂ ಜೀವದಿಂದ ಎದ್ದುಬರುವಾಗ, ಆಕೆ ಯಾರ ಪತ್ನಿಯಾಗುವಳು? ಏಳುಮಂದಿ ಸಹೋದರರೂ ಆಕೆಯನ್ನು ವಿವಾಹ ಆಗಿದ್ದರಲ್ಲವೆ?” ಎಂದರು. ಅದಕ್ಕೆ ಯೇಸು, “ಈ ಲೋಕದ ಜೀವನದಲ್ಲಿ ಜನರು ಮದುವೆ ಮಾಡಿಕೊಳ್ಳುತ್ತಾರೆ, ಮದುವೆ ಮಾಡಿಕೊಡುತ್ತಾರೆ. ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಅಲ್ಲಿ ದೇವದೂತರಿಗೆ ಸಮಾನರಾಗಿರುವರು; ಅವರು ಎಂದಿಗೂ ಸಾಯುವಂತಿಲ್ಲ; ಪುನರುತ್ಥಾನದ ಫಲ ಆಗಿರುವ ಅವರು ದೇವರ ಮಕ್ಕಳಾಗಿರುವರು. ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯ ಗ್ರಂಥದಲ್ಲಿ, ಅಂದರೆ ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲಿ ಸರ್ವೇಶ್ವರನನ್ನು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು ಆಗಿದ್ದಾರೆ’ ಎಂದು ಹೇಳಲಾಗಿದೆ. ಹೀಗಿರುವಲ್ಲಿ ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,” ಎಂದರು. ಇದನ್ನು ಕೇಳಿದ ಕೆಲವು ಧರ್ಮಶಾಸ್ತ್ರಿಗಳು, “ಬೋಧಕರೇ, ಚೆನ್ನಾಗಿ ಹೇಳಿದಿರಿ,” ಎಂದರು. ಮುಂದೆ ಯಾವ ಪ್ರಶ್ನೆ ಕೇಳುವುದಕ್ಕೂ ಅವರಾರು ಧೈರ್ಯಗೊಳ್ಳಲಿಲ್ಲ.

22.11.24 - “ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ;"

ಮೊದಲನೇ ವಾಚನಪ್ರಕಟಣಾ ಗ್ರಂಥ 10:8-11



ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗುಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತುನಾನು  ದೇವದೂತನ ಬಳಿಗೆ ಹೋಗಿ, “ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆಅವನು “ತೆಗೆದುಕೋಇದನ್ನು ತಿನ್ನುಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನುಅಂತೆಯೇನಾನು  ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತುಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತುಅನಂತರದೇವದೂತನು ನನಗೆ, “ನೀನು ಇನ್ನೂ ಅನೇಕ ಜನರಜನಾಂಗಗಳಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.

ಕೀರ್ತನೆ119:14, 24, 72, 103, 111, 131

ಶ್ಲೋಕ: ನಿನ್ನ ನುಡಿ ಎನಿತೋ ರುಚಿ ನನ್ನ ನಾಲಿಗೆಗೆ 

ಶುಭಸಂದೇಶ: ಲೂಕ 19:45-48



ಯೇಸುಸ್ವಾಮಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ಮಾರಾಟ ಮಾಡುತ್ತಿದ್ದವರನ್ನು ಹೊರಗಟ್ಟುತ್ತಾ, “ ‘ಪ್ರಾರ್ಥನಾಲಯವೀ ನನ್ನ ಆಲಯ!’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ; ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾರ್ಪಡಿಸಿದ್ದೀರಿ,” ಎಂದರು. ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯ ಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು. ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನೂ ಕೇಳಲು ಆತುರರಾಗಿದ್ದರು. 

21.11.24 - "ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು"

ಮೊದಲನೇ ವಾಚನಪ್ರಕಟಣಾ ಗ್ರಂಥ 5:1-10


ನಾನು
  ದೃಶ್ಯವನ್ನು ಸಹ ಕಂಡೆ ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತುಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತುಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತುಬಲಿಷ್ಠ ದೇವದೂತನೊಬ್ಬನು ಮಹಾಶಬ್ದದಿಂದ, “ ಮುದ್ರೆಗಳನ್ನು ಒಡೆದು ಸುರುಳಿಯನ್ನು ಬಿಚ್ಚಲು ಯೋಗ್ಯನು ಯಾರು?” ಎಂದು ಪ್ರಕಟಿಸಿದನುಸ್ವರ್ಗದಲ್ಲಾಗಲಿಭೂಮಿಯಲ್ಲಾಗಲಿಪಾತಾಳದಲ್ಲಾಗಲಿ ಸುರುಳಿಯನ್ನು ಬಿಚ್ಚುವುದಕ್ಕೂ ಇಲ್ಲವೆ ಅದನ್ನು ಬಿಚ್ಚಿನೋಡುವುದಕ್ಕೂ ಯಾರಿಂದಲೂ ಸಾಧ್ಯವಾಗಲಿಲ್ಲ ಸುರುಳಿಯನ್ನು ಬಿಚ್ಚಲೂ ನೋಡಲೂ ಯೋಗ್ಯನು ಒಬ್ಬನು ಇಲ್ಲವಲ್ಲ ಎಂದು ನಾನು ಬಹುವಾಗಿ ದುಃಖಿಸಿದೆಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡಇಗೋಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆಅವರು  ಏಳು ಮುದ್ರೆಗಳನ್ನು ಒಡೆದು  ಸುರುಳಿಯನ್ನು ಬಿಚ್ಚಬಲ್ಲರು"ಎಂದು ಹೇಳಿದರುಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವುಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು ಯಜ್ಞದ ಕುರಿಮರಿಯಾದವರು ಮುಂದೆ ಬಂದು ಸಿಂಹಾಸನದಲ್ಲಿ ಆಸೀನರಾಗಿದ್ದವರ ಬಲಗೈಯಲ್ಲಿದ್ದ ಸುರುಳಿಯನ್ನು ತೆಗೆದುಕೊಂಡರುಸುರುಳಿಯನ್ನು ತೆಗೆದುಕೊಂಡಾಗನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ  ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರುಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತುಅವರು  ಹೊಸ ಗೀತೆಯನ್ನು ಹಾಡುತ್ತಿದ್ದರು: ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನುಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ  ಸಕಲ ದೇಶಭಾಷೆಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿಯಾಜಕವರ್ಗವಾಗಿಆಳುವರವರು ಸಮಸ್ತ ಭುವಿಯ ಮೇಲೆ.

ಕೀರ್ತನೆ149:1-2, 3-4, 5-6, 9

ಶ್ಲೋಕ: ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. 

ಶುಭಸಂದೇಶ: ಲೂಕ 9:41-44


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ, “ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ. ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ, ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆ ಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.

20.11.24 - "ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 4:1-11



ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು. ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ. ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು. ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು. ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು. ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು. ಮೊದಲನೆಯ ಜೀವಿ ಸಿಂಹದಂತೆ ಇತ್ತು. ಎರಡನೆಯ ಜೀವಿ ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು ಮತ್ತು ನಾಲ್ಕನೆಯ ಜೀವಿಯು ಹಾರುತ್ತಿರುವ ಗರುಡ ಪಕ್ಷಿಯಂತಿತ್ತು. ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ :

“ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು!
ಸರ್ವಶಕ್ತರಾದ ಪ್ರಭು ದೇವರು
ವರ್ತಮಾನಕಾಲದಲ್ಲಿ ಇರುವವರೂ
ಭೂತಕಾಲದಲ್ಲಿ ಇದ್ದವರೂ
ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,”
ಎಂದು ಹಾಡುತ್ತಿದ್ದವು.
ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು. ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ: ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.

ಕೀರ್ತನೆ: 150:1-2, 3-4, 5-6

ಶ್ಲೋಕ: ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ದೇವರು

ಶುಭಸಂದೇಶ: ಲೂಕ 19:11-28


ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು. ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ. ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ. ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.

“ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ. ಮೊದಲನೆಯವನು ಮುಂದೆ ಬಂದು, ‘ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ. ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ. ಎರಡನೆಯ ಸೇವಕನು ಬಂದು, ‘ಪ್ರಭುವೇ, ನೀವು ಕೊಟ್ಟ ಒಂದು ನಾಣ್ಯದಿಂದ ಐದು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ. ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.
 
“ಬಳಿಕ ಮತ್ತೊಬ್ಬ ಸೇವಕನು ಬಂದು, ‘ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ. ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ. ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ? ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ. ಅದಕ್ಕವರು, ‘ಪ್ರಭುವೇ, ಅವನಲ್ಲಿ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ?’ ಎಂದರು. ಆಗ ರಾಜ, ‘ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ,’ ಎಂದ. “ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.” ಇದನ್ನೆಲ್ಲಾ ಹೇಳಿ ಆದಮೇಲೆ ಯೇಸುಸ್ವಾಮಿ ಅವರೆಲ್ಲರಿಗಿಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...